AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯನ ನಿರ್ಲಕ್ಷ್ಯದಿಂದ ಯುವತಿಯ ಸೇನೆ ಸೇರುವ ಕನಸು ನುಚ್ಚುನೂರು, ನೆರವಿಗಾಗಿ ಅಂಗಲಾಚಿದ ಕುಂದಾಪುರದ ಚೈತ್ರಾ

ಆರ್ಮಿ ಟ್ರೈನಿಂಗ್ ಮುಗಿಸಿ ಮನೆಗೆ ಹೊರಟಿದ್ದಾಗ ಅಪಘಾತದಲ್ಲಿ ಚೈತ್ರಾಳಿಗೆ ಗಂಭೀರವಾಗಿ ಗಾಯವಾಗಿತ್ತು. ಕಾಲಿನ ಮಂಡಿ ಭಾಗದಲ್ಲಿ ಗಂಭೀರವಾಗಿ ಗಾಯವಾಗಿತ್ತು. ಗಾಯ ಸರಿಯಾಗಿ ಗಮನಿಸದೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದು ಎರಡು ವರ್ಷದಿಂದ ಚೈತ್ರಾಳ ಗಾಯ ವಾಸಿ ಆಗಿಲ್ಲ. ನೋವು ಹೆಚ್ಚಾಗಿದೆ. ಎಳೆಯ ವಯಸ್ಸಿನ ನನಗೆ ನಡೆದಾಡದಂತೆ ಮಾಡಿದ ವೈದ್ಯನಿಗೆ ತಕ್ಕ ಶಿಕ್ಷೆ ಆಗಬೇಕೆಂದು ಚೈತ್ರಾ ಕಣ್ಣೀರು ಹಾಕಿದ್ದಾರೆ.

ವೈದ್ಯನ ನಿರ್ಲಕ್ಷ್ಯದಿಂದ ಯುವತಿಯ ಸೇನೆ ಸೇರುವ ಕನಸು ನುಚ್ಚುನೂರು, ನೆರವಿಗಾಗಿ ಅಂಗಲಾಚಿದ ಕುಂದಾಪುರದ ಚೈತ್ರಾ
ಚೈತ್ರಾ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Oct 08, 2023 | 11:34 AM

Share

ಉಡುಪಿ, ಅ.08: ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಮೂಲದ ಚೈತ್ರಾ ಪೂಜಾರಿ (Chaitra Pujari) ಎಂಬ ಯುವತಿ ಸೇನೆಗೆ ಸೇರಿ ದೇಶ ಸೇವೆ ಮಾಡಬೇಕು ಎಂದು ಕನಸು ಕಂಡಿದ್ದಳು. ಆದರೆ ಆಕೆಯ ಕನಸಿಗೆ ಅಪಘಾತ (Accident) ಕೊಳ್ಳಿ ಇಟ್ಟಿದೆ. ಎರಡು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಚೈತ್ರಾಳಿಗೆ ಅಪಘಾತದಿಂದ ಕಾಲಿನ ಮಂಡಿ ಭಾಗದಲ್ಲಿ ಗಂಭೀರವಾಗಿ ಗಾಯವಾಗಿತ್ತು. ಗಾಯ ಸರಿಯಾಗಿ ಗಮನಿಸದೆ ವೈದ್ಯರು (Doctor Negligence) ಶಸ್ತ್ರಚಿಕಿತ್ಸೆ ಮಾಡಿದ್ದು ಎರಡು ವರ್ಷದಿಂದ ಚೈತ್ರಾಳ ಗಾಯ ವಾಸಿ ಆಗಿಲ್ಲ. ನೋವು ಹೆಚ್ಚಾಗಿದೆ. ಎಳೆಯ ವಯಸ್ಸಿನ ನನಗೆ ನಡೆದಾಡದಂತೆ ಮಾಡಿದ ವೈದ್ಯನಿಗೆ ತಕ್ಕ ಶಿಕ್ಷೆ ಆಗಬೇಕೆಂದು ಚೈತ್ರಾ ಕಣ್ಣೀರು ಹಾಕಿದ್ದಾರೆ.

ಸೇನೆಗೆ ಸೇರಬೇಕೆಂದು, ಕೋಚಿಂಗ್ ಪಡೆಯುತ್ತಿದ್ದ ಚೈತ್ರಾ ಆರ್ಮಿ ಕೋಚಿಂಗ್ ಮುಗಿಸಿ ತನ್ನ ತಮ್ಮನೊಂದಿಗೆ ಬೈಕ್​ನಲ್ಲಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಯಮನಂತೆ ಬಂದ ಕೋಳಿ ಸಾಗಿಸುವ ವಾಹನ ಬೈಕ್​ಗೆ ಎದುರಾಗಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಚೈತ್ರಾ ಗಂಭೀರವಾಗಿ ಗಾಯಗೊಂಡಿದ್ದಳು. ಚೈತ್ರಾನನ್ನು ಕುಂದಾಪುರದ ಚಿನ್ಮಯಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿನ್ಮಯಿ ವೈದ್ಯ ಗಾಯ ಸರಿಯಾಗಿ ಗಮನಿಸದೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿಸಿ ಮನೆಗೆ ಬಂದ ಕೆಲವು ದಿನಗಳ ಬಳಿಕ ಕಾಲು ನೋವು ಹೆಚ್ಚಾಗಿದೆ. ದಿನ ಕಳೆದಂತೆ ವಿಪರೀತ ಎನ್ನುವ ಮಟ್ಟಿಗೆ ನೋವು ಹೆಚ್ಚಿದೆ. ಕಾಲು ನೋವು ಹೆಚ್ಚಾದ ಬಳಿಕ ಚೈತ್ರಾ ಮತ್ತೊಂದು ವೈದ್ಯರ ಬಳಿ ಹೋಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕಂಪನಿಗೆಯೇ ಪೆಟ್ರೋಲ್ ಸುರಿದು ಬೆಂಕಿ ಇಟ್ಟರು

ಚಿಕಿತ್ಸೆಗೆ ಹಣವಿಲ್ಲದೆ ಚೈತ್ರಾ ಕಣ್ಣೀರು

ಕಾಲು ನೋವು ಅಲ್ಲೂ ಕಡಿಮೆ ಆಗದ ಹಿನ್ನಲೆಯಲ್ಲಿ ಮಂಗಳೂರಿನ ಮೂಳೆ ತಜ್ಞರ ಬಳಿ ತೆರಳಿದ್ದಾರೆ. ಆಗ ಎಂಆರ್​ಐ ಸ್ಕ್ಯಾನ್ ಮಾಡಿಸಿದ್ದು ಕಾಲಿನಲ್ಲಿ ಅಪಘಾತವಾದ ವಾಹನದ ಕಬ್ಬಿಣ ತುಂಡು, ಮೂಳೆಯ ಪುಡಿಗಳು ಇರುವುದು ಕಂಡು ಬಂದಿದೆ. ಸದ್ಯ ನಡೆಯಲು ಕುಳಿತುಕೊಳ್ಳಲು ಇನೊಬ್ಬರಿಗೆ ಅವಲಂಬಿಸಿರುವ ಚೈತ್ರಾಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಲಕ್ಷಾಂತರ ರೂ. ಹಣದ ಅವಶ್ಯಕತೆ ಇದೆ. ಹೀಗಾಗಿ ಚೈತ್ರಾ ಹಣವಿಲ್ಲದೆ ಕಣ್ಣೀರು ಹಾಕುತ್ತಿದ್ದು ನೆರವಿಗಾಗಿ ಅಂಗಲಾಚಿದ್ದಾರೆ. ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ವೈದ್ಯನ ನಿರ್ಲಕ್ಷ್ಯದಿಂದ ಸಮಸ್ಯೆ ಎದುರಿಸುತ್ತಿರುವ ಚೈತ್ರಾ, ನನಗೆ ನ್ಯಾಯ ನೀಡಿ, ಎಳೆಯ ವಯಸ್ಸಿನ ನನಗೆ ನಡೆದಾಡದಂತೆ ಮಾಡಿದ ವೈದ್ಯನಿಗೆ ತಕ್ಕ ಶಿಕ್ಷೆ ಆಗಬೇಕೆಂದು ಮನವಿ ಮಾಡಿದ್ದಾರೆ.

ಉಡುಪಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:29 am, Sun, 8 October 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!