AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪಾಲ: ಸಿನಿಮಾ ಸ್ಟೈಲ್​ನಲ್ಲಿ ಪೊಲೀಸರ ರೋಚಕ ಚೇಸಿಂಗ್, ಗರುಡ ಗ್ಯಾಂಗ್​ನ ಕ್ರಿಮಿನಲ್ ಅರೆಸ್ಟ್

ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದ ರೋಚಕ ಪೊಲೀಸ್ ಕಾರ್ಯಾಚರಣೆಯಲ್ಲಿ ಗರುಡ ಗ್ಯಾಂಗ್‌ನ ಕುಖ್ಯಾತ ಕ್ರಿಮಿನಲ್​ ಇಸ್ಸಾಕ್​ನ ಬಂಧನವಾಗಿದೆ. ಪೊಲೀಸರು ಹಿಂಬಾಲಿಸುತ್ತಿದ್ದಾಗ, ಇಸ್ಸಾಕ್ ತನ್ನ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದನು. ಈ ವೇಳೆ ಇಸ್ಸಾಕ್​ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಆದರೆ, ಚುರುಕುತನದಿಂದ ಮಣಿಪಾಲ ಪೊಲೀಸರು ಇಸ್ಸಾಕ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಮಣಿಪಾಲದಲ್ಲಿ ಸಂಚಲನ ಸೃಷ್ಟಿಸಿದೆ.

ಮಣಿಪಾಲ: ಸಿನಿಮಾ ಸ್ಟೈಲ್​ನಲ್ಲಿ ಪೊಲೀಸರ ರೋಚಕ ಚೇಸಿಂಗ್, ಗರುಡ ಗ್ಯಾಂಗ್​ನ ಕ್ರಿಮಿನಲ್ ಅರೆಸ್ಟ್
ಆರೋಪಿ ಇಸ್ಸಾಕ್​
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Mar 05, 2025 | 10:59 AM

Share

ಉಡುಪಿ, ಮಾರ್ಚ್​​ 05: ಮಣಿಪಾಲದಲ್ಲಿ (Manipal) ಸಿನಿಮಿಯ ಸ್ಟೈಲ್​ನಲ್ಲಿ ಪೊಲೀಸರ (Police) ರೋಚಕ ಕಾರ್ಯಚರಣೆಯೊಂದು ನಡೆದಿದೆ. ಪ್ರಕರಣವೊಂದರ ಆರೋಪಿಯನ್ನು ಪೊಲೀಸರು ಚೆಸಿಂಗ್ ಮಾಡುವ ವೇಳೆ ಸರಣಿ ಅಪಘಾತಗಳು ಸಂಭವಿಸಿದೆ. ಆದರೂ, ಮಣಿಪಾಲ ಪೋಲೀಸರ ಸಮಯ ಪ್ರಜ್ಞೆಯಿಂದ ಕುಖ್ಯಾತ ಗ್ಯಾಂಗ್​ನ ಸದಸ್ಯನ ಬಂಧನವಾಗಿದೆ.

ಕುಖ್ಯಾತ ಗರುಡ ಗ್ಯಾಂಗ್​ನ ದಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಸ್ಸಾಕ್​ನ ಬೆನ್ನು ಬಿದ್ದಿದ್ದ ಬೆಂಗಳೂರಿನ ನೆಲಮಂಗಲ ಠಾಣೆ ಪೊಲೀಸರು, ಆರೋಪಿ ಜಾಡು ಹಿಡಿದು ಉಡುಪಿಯ ಮಣಿಪಾಲಕ್ಕೆ ತೆರಳಿದ್ದರು. ಈ ವೇಳೆ ಕಾರಿನಲ್ಲಿ ಓರ್ವ ಯುವತಿಯೊಂದಿಗೆ ಜಾಲಿ ಮಾಡಲು ಮಣಿಪಾಲಕ್ಕೆ ಬಂದಿದ್ದ ಇಸ್ಸಾಕ್ ಎಂಬ ನಟೋರಿಯಸ್ ಕ್ರಿಮಿನಲ್ ಪೊಲೀಸರನ್ನು ಕಂಡ ಕೂಡಲೇ ತನ್ನ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ವೇಗವಾಗಿ ಗಾಡಿ ಚಲಾಯಿಸಿ ನಾಲ್ಕು ಕಾರು ಹಾಗು ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ್ದಾನೆ.

ಈ ವೇಳೆ, ನೆಲಮಂಗಲ ಪೊಲೀಸರು ಮಣಿಪಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದ ತಂಡ ಆರೋಪಿಯನ್ನ ಸಾಹಸಮಯವಾಗಿ ಚೇಸ್ ಮಾಡಿ ಮಣಿಪಾಲದ ಮಣ್ಣಪಳ್ಳದ ಬಳಿ ಕಾರಿನೊಂದಿಗೆ ಸೆರೆ ಹಿಡಿದಿದ್ದಾರೆ. ಒಂದಿಷ್ಟು ಸೆಕೆಂಡ್ ಲೇಟ್ ಆಗಿದ್ದರೂ, ಕ್ರಿಮಿನಲ್ ಇಸ್ಸಾಕ್​ ಮಿಸ್ ಆಗುತ್ತಿದ್ದ. ಆದರೆ, ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್ ಅವರ ತ್ವರಿತ ಕಾರ್ಯಾಚರಣೆ ಫಲ ನೀಡಿದೆ.

ಇದನ್ನೂ ಓದಿ
Image
ಉಡುಪಿಯಲ್ಲಿ ದುಬೈ ದೇಶದ ಕಾರುಗಳ ಓಡಾಟ: ಫೋಟೋಸ್​ ನೋಡಿ
Image
ಉಡುಪಿ: ಮಲ್ಪೆ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಬೋಟ್ ಪತ್ತೆ
Image
ಕರಾವಳಿ ಭದ್ರತೆಗೆ ಗಂಭೀರ ಅಪಾಯ ತಂದಿಟ್ಟ ಸರ್ಕಾರದ ಹೊಸ ಆದೇಶ
Image
ಉಡುಪಿ: ಮೈಕ್​ಗೆ ಅನುಮತಿ ಪಡೆದಿಲ್ಲವೆಂದು ಯಕ್ಷಗಾನ ನಿಲ್ಲಿಸಿದ ಪೊಲೀಸರು

ಗರುಡ ಗ್ಯಾಂಗ್, ಈ ಹೆಸರು ಕೇಳಿದ್ರೆ ಉಡುಪಿ-ಮಂಗಳೂರು ಕಡೆ ಯಾರಿಗೂ ನಿದ್ದೆ ಬರಲ್ಲ. ಕಳ್ಳತನ, ಮಾದಕವಸ್ತು ಸರಬರಾಜು, ಕೊಲೆ ಕೇಸುಗಳಲ್ಲಿ ತೊಡಗಿಸಿಕೊಂಡಿರುವ ಈ ಗ್ಯಾಂಗ್​ನ ಹಿಂದೆ ಇಸ್ಸಾಕ್ ತರಹದ ಕ್ರಿಮಿನಲ್ಸ್ ಇದ್ದಾರೆ. ಆದರೆ ಮಣಿಪಾಲ ಪೊಲೀಸರ ಮುಂದೆ ಈ ಆಟ ನಡೆದಿಲ್ಲ ಈ ಸಲ ಸಿಕ್ಕಿಬಿದ್ದಿದ್ದಾನೆ.

ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ: ಏನೇನು ಮುನ್ನೆಚ್ಚರಿಕೆ ವಹಿಸಬೇಕು? ನೀವು ಮಾಡಬೇಕಾದ್ದಿಷ್ಟು…

ಒಟ್ಟಾರೆಯಾಗಿ ಹಿಂದೆಂದೂ ಕಾಣದ ರೀತಿಯಲ್ಲಿ ರಣರೋಚಕ ಪೊಲೀಸ್ ಕ್ರಿಮಿನಲ್ ಚೇಸಿಂಗ್ ಕಂಡು ಮಣಿಪಾಲದ ಜನ ದಂಗಾಗಿದ್ದಾರೆ. ಈಗಾಗಲೇ ನಟೋರಿಯಸ್ ಕ್ರಿಮಿನಲ್ ಹಾಗೂ ಆತನ ಸ್ನೇಹಿತೆ ಪೋಲೀಸರ ವಶದಲ್ಲಿದ್ದು ವಿಚಾರಣೆ ಮುಂದುವರೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ