AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿದ ಕುಂದಾಪುರ ಬಸ್​ನ ಕುಡುಕ ಚಾಲಕ; ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್

ಉಡುಪಿಯ ಮೂಲದ್ದು ಎಂದು ಹೇಳಲಾಗಿರುವ ‘ಭಾರತಿ’ ಹೆಸರಿನ ಬಸ್ ಓಡಿಸುತ್ತಿದ್ದ ಚಾಲಕ, ಕುಡಿದು ಅಮಲೇರಿಸಿಕೊಂಡು ರಸ್ತೆಗೆ ಬಿದ್ದಿದ್ದಾನೆ.

Viral Video: ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿದ ಕುಂದಾಪುರ ಬಸ್​ನ ಕುಡುಕ ಚಾಲಕ; ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್
ಕುಡಿದು ರಸ್ತೆಗೆ ಬಿದ್ದ ಕುಂದಾಪುರ ಬಸ್​ನ ಚಾಲಕ
TV9 Web
| Updated By: Digi Tech Desk|

Updated on:Sep 15, 2022 | 2:27 PM

Share

ಉಡುಪಿ: ಕುಂದಾಪುರ ಮಾರ್ಗದಲ್ಲಿ ಖಾಸಗಿ ಬಸ್​ ಓಡಿಸುತ್ತಿದ್ದ ಚಾಲಕನೊಬ್ಬ ಮದ್ಯ ಸೇವಿಸಿ ನಡುರಸ್ತೆಯಲ್ಲಿ ಬಸ್​ ನಿಲ್ಲಿಸಿ, ತಾನೂ ಕೆಳಗಿಳಿದು ರಸ್ತೆಗೆ ಬಿದ್ದ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉಡುಪಿಯ ಮೂಲದ್ದು ಎಂದು ಹೇಳಲಾಗಿರುವ ‘ಭಾರತಿ’ ಹೆಸರಿನ ಬಸ್ ಓಡಿಸುತ್ತಿದ್ದ ಚಾಲಕ, ಕುಡಿದು ಅಮಲೇರಿಸಿಕೊಂಡು ರಸ್ತೆಗೆ ಬಿದ್ದಿದ್ದಾನೆ. ಈ ಮೂಲಕ ವಿಡಿಯೊದ ವಿಲನ್ ಆಗಿದ್ದಾನೆ.

ಮೊದಲೇ ಕುಡಿದು ಚಾಲಕ ಬಸ್ ಏರಿದ್ದ. ಮಧ್ಯೆರಾತ್ರಿ ರಸ್ತೆ ಮಧ್ಯ ವಿರಾಮಕ್ಕೆಂದು ಬಸ್ ನಿಲ್ಲಿಸಿದ್ದ. ಈ ವೇಳೆ ಮತ್ತೊಮ್ಮೆ ಮದ್ಯ ಸೇವಿಸಿ, ದೇಹದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದ. ಓಲಾಡುತ್ತಾ ಬಸ್ ಬಳಿಗೆ ಬಂದು ಬಸ್ ಚಾಲು ಮಾಡಲು ಯತ್ನಿಸಿದ. ಇದನ್ನು ಗಮನಿಸಿದ ಪ್ರಯಾಣಿಕರು ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆಯಿತು. ಪ್ರಯಾಣಿಕರೊಬ್ಬರು ಚಾಲಕನಿಗೆ ಪೆಟ್ಟುಕೊಟ್ಟರು.

ಮೊದಲೇ ದೇಹದ ನಿಯಂತ್ರಣ ಕಳೆದುಕೊಂಡಿದ್ದ ಚಾಲಕ ಹೆದ್ದಾರಿಯ ಮೇಲೆ ಬಿದ್ದ. ಸ್ಥಳದಲ್ಲಿದ್ದವರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟರು. ಈ ವಿಡಿಯೊ ಇದೀಗ ವೈರಲ್ ಆಗಿದೆ. ಆದರೆ ಚಾಲಕನ ಹೆಸರಾಗಲೀ, ಬಸ್ಸು ಎಲ್ಲಿಂದ ಎಲ್ಲಿಗೆ ಹೋಗುತ್ತಿತ್ತು ಎನ್ನುವ ಮಾಹಿತಿಯಾಗಲೀ ಈವರೆಗೆ ಲಭ್ಯವಾಗಿಲ್ಲ.

Published On - 2:26 pm, Thu, 15 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​