AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಬೆನ್ನಲ್ಲೇ ದೈವದ ಮೊರೆ ಹೋದ ಸಚಿವ ತಿಮ್ಮಾಪುರ!

ಅಬಕಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರು ಉಡುಪಿಯ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಆಪ್ತ ಜೀವನ್‌ಶೆಟ್ಟಿ ಆಹ್ವಾನದ ಮೇರೆಗೆ ಬಂದ ಸಚಿವರು ವಿಶೇಷ ಪೂಜೆ ಸಲ್ಲಿಸಿ, ನೂತನ ಗೋಪುರವನ್ನು ಉದ್ಘಾಟಿಸಿದ್ದಾರೆ. ವಿಪಕ್ಷಗಳು ಮಾಡಿರುವ ಅಬಕಾರಿ ಹಗರಣ ಆರೋಪ ಸುಳ್ಳು ಎಂದು ಅವರು ಈ ವೇಳೆ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಹಗರಣ ಆರೋಪ ಬೆನ್ನಲ್ಲೇ ದೈವದ ಮೊರೆ ಹೋದ ಸಚಿವ ತಿಮ್ಮಾಪುರ!
ದೈವಸ್ಥಾನಕ್ಕೆ ಸಚಿವ ತಿಮ್ಮಾಪುರ ಭೇಟಿImage Credit source: Tv9 Kannada
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 09, 2026 | 3:25 PM

Share

ಉಡುಪಿ, ಫೆಬ್ರವರಿ 09: ವಿಧಾನ ಸಭೆ ವಿಶೇಷ ಅಧಿವೇಶನದಲ್ಲಿ ಅಬಕಾರಿ ಇಲಾಖೆಯಲ್ಲಿನ ಹಗರಣ ಆರೋಪ ಭಾರಿ ಸದ್ದು ಮಾಡಿತ್ತು. ಸಚಿವ ಆರ್​​.ಬಿ. ತಿಮ್ಮಾಪುರ ರಾಜೀನಾಮೆಗೆ ವಿಪಕ್ಷಗಳು ಪಟ್ಟುಹಿಡಿದಿದ್ದವು. ಈ ಬೆನ್ನಲ್ಲೇ ಸಚಿವರು ದೈವದ ಮೊರೆ ಹೋಗಿದ್ದಾರೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಬಿಳಿಯಾರು ಧೂಮಾವತಿ ಸನ್ನಿಧಾನಕ್ಕೆ ನೇಮೋತ್ಸವ ದಿನದಂದೇ ಕುಟುಂಬ ಸಮೇತ ತಿಮ್ಮಾಪುರ ಅವರ ಭೇಟಿಯೀಗ ಗಮನ ಸೆಳೆದಿದೆ. ಇದೇ ವೇಳೆ ಸನ್ನಿಧಿಯ ನೂತನ ಗೋಪುರ ಮತ್ತು ಹೊಸ ಕಟ್ಟಡವನ್ನೂ ಅವರು ಉದ್ಘಾಟಿಸಿದ್ದಾರೆ.

ಆಪ್ತನ ಆಹ್ವಾನದ ಮೇರೆಗೆ ದೈವಸ್ಥಾನಕ್ಕೆ ಭೇಟಿ

ಆಪ್ತ ಜೀವನಶೆಟ್ಟಿ ಆಹ್ವಾನದ ಮೇರೆಗೆ ಸಚಿವ ತಿಮ್ಮಾಪುರ ಅವರು ಧೂಮಾವತಿ ಸನ್ನಿಧಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಸಹಿತ ಬಂದು ದೈವದ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇನ್ನು ವಿಪಕ್ಷಗಳು ಮಾಡಿದ್ದ ಅಬಕಾರಿ ಹಗರಣ ಆರೋಪದಲ್ಲಿ ಉಡುಪಿಯ ಬಿಳಿಯಾರು ಮೂಲದ ಜೀವನ್ ಶೆಟ್ಟಿ ಹೆಸರು ಕೂಡ ಕೇಳಿಬಂದಿತ್ತು. ಹಗರಣ ಕುರಿತಾದ ಆಡಿಯೋದಲ್ಲಿ ಸದ್ಯ ಧಾರವಾಡದಲ್ಲಿ ವೈನ್ ಮರ್ಚೆಂಟ್ ಅಸೋಸಿಯೇಷನ್ ಪದಾಧಿಕಾರಿಯಾಗಿರುವ ಜೀವನ್ ಶೆಟ್ಟಿ ಹೆಸರು ಉಲ್ಲೇಖವಾಗಿತ್ತು. ಸಚಿವರ ಹೆಸರಲ್ಲಿ ಜೀವನಶೆಟ್ಟಿ ಕಿರುಕುಳ ನೀಡುತ್ತಾರೆ ಎಂಬ ಮಾತುಗಳು ಅದರಲ್ಲಿದ್ದವು.

ಇದನ್ನೂ ಓದಿ:  ಅಬಕಾರಿ ಸಚಿವ ತಿಮ್ಮಾಪುರಗೆ ಸಂಕಷ್ಟ; ಲೋಕಾಯುಕ್ತಕ್ಕೆ ದೂರು ಸಲ್ಲಿಕೆ

ಇನ್ನು ದೈವಸ್ಥಾನಕ್ಕೆ ಭೇಟಿ ಬಳಿಕ ಮಾತನಾಡಿದ ಸಚಿವರು, ಜೀವನ್ ಶೆಟ್ಟಿ ಅವರು ಇಲ್ಲಿಗೆ ಬರುವಂತೆ ಕರೆದಿದ್ದಕ್ಕೆ ನಾನು ಬಂದಿದ್ದೇನೆ. ಕುಟುಂಬದ ಜೊತೆಗೆ ಬಂದು ದೈವದ ಆಶೀರ್ವಾದ ಪಡೆದಿದ್ದು, ದೈವಸ್ಥಾನದ ಕಟ್ಟಡಕ್ಕೆ ಸಹಕಾರ ಮಾಡಿದವರನ್ನು ಸನ್ಮಾನಿಸಿದ್ದೇನೆ. ಇಂತಹ ದೈವದ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು. ಎಲ್ಲರಿಗೂ ದೇವರ ಅನುಗ್ರಹ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಅಲ್ಲದೆ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಆರೋಪಗಳೆಲ್ಲ ಸುಳ್ಳು. ಅಧಿವೇಶನದಲ್ಲಿ ಎಲ್ಲಾ ವಿಚಾರವನ್ನು ನಾನು ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !