AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್‌ ವಿವಾದದ ಅತಿದೊಡ್ಡ ಎಕ್ಸ್‌ಕ್ಲೂಸಿವ್‌ ಸುದ್ದಿ: ನವೆಂಬರ್ ತಿಂಗಳಲ್ಲೇ ನಡೆದಿತ್ತು ಹಿಜಾಬ್ ವಿವಾದಕ್ಕೆ ಮಾಸ್ಟರ್ ಪ್ಲಾನ್!?

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರಕ್ಕೆ ಸಂಬಂಧಿಸಿ ಈ ಹಿಜಾಬ್ ವಿವಾದಕ್ಕೆ ನವೆಂಬರ್ ತಿಂಗಳಲ್ಲೇ ಮಾಸ್ಟರ್ ಪ್ಲ್ಯಾನ್ ಶುರುವಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. 4 ಹಿಜಾಬ್ ಹೋರಾಟಗಾರ್ತಿಯರು ಏಕಕಾಲಕ್ಕೆ ಟ್ವಿಟರ್ ಖಾತೆ ತೆರೆದು ಸಿಎಫ್‌ಐ(ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಪ್ರಮೋಟ್‌ಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಹಿಜಾಬ್‌ ವಿವಾದದ ಅತಿದೊಡ್ಡ ಎಕ್ಸ್‌ಕ್ಲೂಸಿವ್‌ ಸುದ್ದಿ: ನವೆಂಬರ್ ತಿಂಗಳಲ್ಲೇ ನಡೆದಿತ್ತು ಹಿಜಾಬ್ ವಿವಾದಕ್ಕೆ ಮಾಸ್ಟರ್ ಪ್ಲಾನ್!?
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Feb 11, 2022 | 10:12 AM

Share

ಉಡುಪಿ: ಕರಾವಳಿಯಲ್ಲಿ ಹೊತ್ತಿಕೊಂಡ ಹಿಜಾಬ್(Hijab) ವರ್ಸಸ್ ಕೇಸರಿ ಶಾಲು(Kesari Shawl) ಕಿಡಿ, ಈಗ ದೇಶವ್ಯಾಪಿ ವ್ಯಾಪಿಸಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಸಂಘರ್ಷಗಳು ಉಂಟಾಗಿವೆ. ಈ ಬಗ್ಗೆ ನಿನ್ನೆ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ, ಮೌಖಿಕ ಆದೇಶ ನೀಡಿದೆ. ಸೋಮವಾರದಿಂದ ಹೈಸ್ಕೂಲ್ ಹಾಗೂ ಕಾಲೇಜು ಆರಂಭವಾಗಲಿದ್ದು ವಿದ್ಯಾರ್ಥಿಗಳು ಧರ್ಮಗಳನ್ನು ಸೂಚಿಸುವ ಕೇಸರಿ ಶಾಲು-ಹಿಜಾಬ್ ಧರಿಸಬಾರದು ಎಂದು ತಿಳಿಸಿದೆ. ಆದ್ರೆ ಇಷ್ಟರ ಮಟ್ಟಿಗೆ ಸಂಘರ್ಷ ಉಂಟು ಮಾಡಿದ ಹಿಜಾಬ್ ವಿವಾದ ಶುರುವಾಗಿದ್ದು ಯಾವಾಗ? ಹೇಗೆ ಎಮಬುದರ ಡಿಟೈಲ್ಸ್ ಇಲ್ಲಿದೆ ಓದಿ.

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರಕ್ಕೆ ಸಂಬಂಧಿಸಿ ಈ ಹಿಜಾಬ್ ವಿವಾದಕ್ಕೆ ನವೆಂಬರ್ ತಿಂಗಳಲ್ಲೇ ಮಾಸ್ಟರ್ ಪ್ಲ್ಯಾನ್ ಶುರುವಾಗಿತ್ತು ಎಂಬ ಮಾಹಿತಿ ಸಿಕ್ಕಿದೆ. 4 ಹಿಜಾಬ್ ಹೋರಾಟಗಾರ್ತಿಯರು ಏಕಕಾಲಕ್ಕೆ ಟ್ವಿಟರ್ ಖಾತೆ ತೆರೆದು ಸಿಎಫ್‌ಐ(ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ) ಪ್ರಮೋಟ್‌ಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ನವೆಂಬರ್ ತಿಂಗಳಲ್ಲಿ ಬಾಬ್ರಿ ಮಸೀದಿ ತೀರ್ಪಿನ ವಿರುದ್ಧ ಈ ಯುವತಿಯರು ಟ್ವೀಟ್ ಮಾಡಿದ್ದರು. ಯುವತಿಯರ ಪ್ರತಿ ಟ್ವೀಟ್‌ಗೆ CFI ರಾಷ್ಟ್ರಾಧ್ಯಕ್ಷ ರಿಟ್ವೀಟ್ ಮಾಡಿದ್ದರು ಎಂದು ವಿಜಯ್‌ ಪಟೇಲ್‌ CFI ಟ್ವಿಟರ್ ಟ್ರೆಂಡ್ ರಹಸ್ಯ ಬಯಲು ಮಾಡಿದ್ದಾರೆ.

ಹಿಜಾಬ್ ವಿವಾದ ಆರಂಭವಾಗುವ ಮೊದಲೇ ಯುವತಿಯರು ಸಿಎಎಫ್ಐ ಸಕ್ರಿಯ ಕಾರ್ಯಕರ್ತರಾಗಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಟ್ವೀಟ್ ಮಾಡಿದ್ದರು. ಅಲ್ಮಾಸ್, ಮುಸ್ಕಾನ್, ಅಲಿಯಾ ಅಸಾದಿ ಸೇರಿದಂತೆ ಕೆಲವರ ಟ್ವಿಟರ್ ಹಿಸ್ಟರಿಯಿಂದ ಸಾಕಷ್ಟು ಸಂಗತಿಗಳು ಬಹಿರಂಗವಾಗಿದೆ. ಈ ಯುವತಿಯರು ಮತೀಯವಾದಿ ವಿಚಾರಗಳನ್ನೇ ಟ್ವೀಟ್ ಮಾಡುತ್ತಾ ಬಂದಿದ್ದರು. ನವೆಂಬರ್ 21ರಂದು ಮಸೀದಿಯಲ್ಲಿ ಮೈಕ್‌ ಬಳಕೆ ಸಮರ್ಥಿಸಿ ಟ್ವೀಟ್ ಮಾಡಿದ್ದರು. ಡಿ.12ರಂದು ದೆಹಲಿ ದಂಗೆ ಆರೋಪಿ ರೌಫ್ ಶರೀಫ್ ಬಿಡುಗಡೆಗೆ ಆಗ್ರಹಿಸಿ ಟ್ವೀಟ್ ಮಾಡಿದ್ದರು. ಡಿ.24ರ ಬಳಿಕ ಉಡುಪಿಯಲ್ಲಿ ಹಿಜಾಬ್ ಹೋರಾಟ ಆರಂಭಿಸಿದ್ದರು. ಸದ್ಯ ಈ ನಾಲ್ಕು ಯುವತಿಯರ ಟ್ವಿಟರ್ ಟ್ರಾಕ್ ರೆಕಾರ್ಡಿನಲ್ಲಿ ಅನೇಕ ಕುತೂಹಲಕಾರಿ ಅಂಶಗಳು ಅಡಗಿವೆ.

ಇದನ್ನೂ ಓದಿ: Kangana Ranaut: ‘ನಿಮ್ಮನ್ನು ಬಂಧಿಸಿಕೊಳ್ಳಬೇಡಿ, ಸ್ವತಂತ್ರರಾಗುವತ್ತ ಯೋಚಿಸಿ’; ಹಿಜಾಬ್ ಪ್ರಕರಣದ ಕುರಿತು ಕಂಗನಾ ಪ್ರತಿಕ್ರಿಯೆ

ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಅವನ ತಂದೆ-ತಾಯಿ ತಮಿಳುನಾಡಿಂದ ಬಂದು ನಮ್ಮೂರಲ್ಲಿ ನೆಲೆಸಿದ್ದರು: ಗ್ರಾಮಸ್ಥರು
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ
ಮಾಸ್ಕ್​​​ಮ್ಯಾನ್​​ ಚಿನ್ನಯ್ಯ ಎಸ್​ಐಟಿ ವಶಕ್ಕೆ, ಬೆಳ್ತಂಗಡಿ ಕೋರ್ಟ್ ಆದೇಶ