AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಹಿಂದೂ ಜಾಗರಣ ವೇದಿಕೆ ರಾಜ್ಯ ಮುಖಂಡರ ಫೇಸ್ಬುಕ್ ಪೇಜ್ ಹ್ಯಾಕ್; ಇಲ್ಲಿದೆ ವಿವರ

ಹಿಂದೂ ಜಾಗರಣ ವೇದಿಕೆ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಸಂಘಟನೆ. ಹಿಂಜಾವೆಯ ರಾಜ್ಯದ 20 ಕ್ಕೂ ಅಧಿಕ ಪ್ರಮುಖರ ಫೇಸ್ ಬುಕ್ ಪ್ರೊಫೈಲ್​ಗಳನ್ನು ಏಕಕಾಲದಲ್ಲಿ ತೆಗೆದು ಹಾಕಲಾಗಿದೆ. ಹಿಂಜಾವೇ ಸಾಮಾಜಿಕ ಜಾಲತಾಣವನ್ನು ನಂಬಿಕೊಂಡಿರುವ ಫೇಸ್ ಬುಕ್ ಹುಲಿಗಳಲ್ಲ. ಹಿಂಜಾವೇ ಜನರ ಮಧ್ಯೆ ಕೆಲಸ ಮಾಡುವ ಸಂಘಟನೆ ಎಂದು ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದ್ದಾರೆ.

ಉಡುಪಿ: ಹಿಂದೂ ಜಾಗರಣ ವೇದಿಕೆ ರಾಜ್ಯ ಮುಖಂಡರ ಫೇಸ್ಬುಕ್ ಪೇಜ್ ಹ್ಯಾಕ್; ಇಲ್ಲಿದೆ ವಿವರ
ಹಿಂದೂ ಜಾಗರಣಾ ವೇಧಿಕೆ ಫೇಸ್​ ಬುಕ್​ ಖಾತೆ ಹ್ಯಾಕ್​
ಪ್ರಜ್ವಲ್ ಅಮೀನ್​, ಉಡುಪಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 22, 2023 | 2:22 PM

Share

ಉಡುಪಿ, ಸೆ.22: ಹಿಂದೂ ಜಾಗರಣ ವೇದಿಕೆ ರಾಜ್ಯ ಮುಖಂಡರ ಫೇಸ್ಬುಕ್ ಪೇಜ್ ಜೊತೆ ಉಡುಪಿ(Udupi)ಯ ಹಿಂದೂ ಜಾಗರಣ ವೇದಿಕೆ(Hindu Jagarana Vedike) ಯ ಎಲ್ಲಾ ಜಿಲ್ಲಾ ನಾಯಕರ ಅಕೌಂಟ್​ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಉಡುಪಿಯಲ್ಲಿ ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹೇಳಿದ್ದಾರೆ. ‘ಹಿಂದೂ ಜಾಗರಣ ವೇದಿಕೆ ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡುತ್ತಿರುವ ಸಂಘಟನೆ. ಹಿಂಜಾವೆಯ ರಾಜ್ಯದ 20 ಕ್ಕೂ ಅಧಿಕ ಪ್ರಮುಖರ ಫೇಸ್ ಬುಕ್ ಪ್ರೊಫೈಲ್​ಗಳನ್ನು ಏಕಕಾಲದಲ್ಲಿ ತೆಗೆದು ಹಾಕಲಾಗಿದೆ. ಹಿಂಜಾವೇ ಸಾಮಾಜಿಕ ಜಾಲತಾಣವನ್ನು ನಂಬಿಕೊಂಡಿರುವ ಫೇಸ್ ಬುಕ್ ಹುಲಿಗಳಲ್ಲ. ಹಿಂಜಾವೇ ಜನರ ಮಧ್ಯೆ ಕೆಲಸ ಮಾಡುವ ಸಂಘಟನೆ ಎಂದಿದ್ದಾರೆ.

ಸರ್ಕಾರದ ಸೂಚನೆ ಹೋಗಿ ಮಾಡಿದ್ದರೂ? ಹ್ಯಾಕರ್ಸ್​ಗಳನ್ನು ಬಳಸಿ ಮಾಡಿದ್ದರೋ ಎಂಬುವುದರ ತನಿಖೆಯಾಗಬೇಕು. ಹಿಂದೂ ವಿಚಾರಗಳನ್ನು, ಹೋರಾಟ ಮಾಡುತ್ತಿದ್ದವರನ್ನು ಹತ್ತಿಕ್ಕುವ ಕೆಲಸವಾಗಿದೆ. ಈ ರೀತಿಯಾಗಿ ನಡೆದಿರುವ ಸೈಬರ್ ದಾಳಿ, ಇದು ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಮಾಡಿರುವ ಕುತಂತ್ರವಾಗಿದೆ. 2014 ರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಪರ ದೊಡ್ಡ ಮಟ್ಟದ ಅಭಿಯಾನ ನಡೆದಿತ್ತು. ಆ ರೀತಿಯ ಅಭಿಯಾನ ಈ ಬಾರಿ ಅಗಬಾರದು ಎನ್ನುವ ನಿಟ್ಟಿನಲ್ಲಿ ಹಿಂದೂ ಮುಖಂಡರ ಪೇಜ್​ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ:ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಫೇಸ್‌ಬುಕ್‌ ಅಕೌಂಟ್‌ ಹ್ಯಾಕ್‌: ಅಶ್ಲೀಲ ಫೋಟೋ ಪೋಸ್ಟ್‌

ಕೋಲಾರ ಜಿಲ್ಲಾಧಿಕಾರಿ ಹೆಸರಿನಲ್ಲಿಯೇ ಫೇಸ್ ಬುಕ್​ ನಕಲಿ ಖಾತೆ

ಕೋಲಾರ: ಜಿಲ್ಲಾಧಿಕಾರಿಗಳನ್ನು‌ ಬಿಡದ ಆನ್​ಲೈನ್ ವಂಚಕರು, ಸಾಮಾಜಿಕ ಜಾಲತಾಣದಲ್ಲಿ ನಕಲಿ‌ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಹೆಸರಿನಲ್ಲಿ‌ ನಕಲಿ ಖಾತೆ ತೆರೆದಿದ್ದು,ಹಾಸನ‌ ಜಿಲ್ಲಾಧಿಕಾರಿ ಎಂದು ಖಾತೆ ಸೃಷ್ಟಿಸಿ ಪೀಠೋಪಕರಣ ಮಾರಾಟ ಮಾಡಲು ಯತ್ನಿಸಿದ್ದಾರೆ. ಹಾಸನ‌ ಜಿಲ್ಲಾಧಿಕಾರಿ ಕಚೇರಿ ಮತ್ತು ಅಕ್ರಂ ಪಾಷ ಪೋಟೋವನ್ನು ದುರ್ಬಳಕೆ ಮಾಡಿಕೊಂಡಿರುವ ವಂಚಕರು, ನನ್ನ ಸ್ನೇಹಿತ ಉತ್ತಮ ಪೀಠೋಪಕರಣಗಳನ್ನು ಮಾರಾಟ ಮಾಡುತಿದ್ದಾರೆ ಎನ್ನುವ ಮೂಲಕ ವಂಚನೆಗೆ ಪ್ರಯತ್ನಿಸಿದ್ದಾರೆ. ಈಗಾಗಲೇ ಕೋಲಾರ ಜಿಲ್ಲಾಧಿಕಾರಿ ಪೋಲೀಸರಿಗೆ ದೂರು‌ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ