AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಜಿಲ್ಲಾಧಿಕಾರಿಗೂ ನಕಲಿ ಫೇಸ್ಬುಕ್ ಅಕೌಂಟ್ ಕಾಟ; ಹಣ ಪಾವತಿಸುವಂತೆ ಬೇಡಿಕೆ

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್​ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ.

ಉಡುಪಿ ಜಿಲ್ಲಾಧಿಕಾರಿಗೂ ನಕಲಿ ಫೇಸ್ಬುಕ್ ಅಕೌಂಟ್ ಕಾಟ; ಹಣ ಪಾವತಿಸುವಂತೆ ಬೇಡಿಕೆ
ಸಾಂದರ್ಭಿಕ ಚಿತ್ರ
shruti hegde
|

Updated on: Apr 11, 2021 | 5:15 PM

Share

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಮಲಾಲಗದ್ದೆ ಹೆಸರಲ್ಲಿ ನಕಲಿ ಫೇಸ್ ಬುಕ್​ ಅಕೌಂಟ್ ಮಾಡಿ ಹಣ ಬೇಡಿಕೆ ಇಟ್ಟಿರುವ ಆರೋಪ ಕೇಳಿ ಬಂದಿದೆ. ಜಿಲ್ಲಾಧಿಕಾರಿ ಅವರದೇ ನಕಲಿ ಅಕೌಂಟ್​ ಮಾಡಿ ಫೋನ್​ ಪೇ ಮೂಲಕ ಹಣ ಪಾವತಿಸಿ ಎಂಬ ಬೇಡಿಕೆ ಇಟ್ಟಿರುವ ಮಾಹಿತಿ ತಿಳಿದುಬಂದಿದೆ.

ಆರೋಪಿಗಳು ಸಂಬಂಧಿಕರ ಅಕೌಂಟಿಗೆ ಹಣ ವರ್ಗಾಯಿಸುವಂತೆ ಮೆಸೇಜ್ ಮಾಡಿದ್ದಾರೆ. ಅಧಿಕಾರಿಗಳನ್ನೇ ಟಾರ್ಗೆಟ್​ ಮಾಡಿ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಕೆಲ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ದೂರು ನೀಡಿದ್ದೇನೆ ಯಾರೂ ಹಣ ಕೊಡಬೇಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಫೇಸ್ ಬುಕ್ ಮೂಲಕ ವಿನಂತಿಸಿಕೊಂಡಿದ್ದಾರೆ.

ಈ ಮೊದಲು ಸಚಿವ ಸುರೇಶ್​ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದಿದ್ದರು

ಸಾರ್ವಜನಿಕರ ಹೆಸರಲ್ಲಿ ಫೇಸ್​ಬುಕ್​​ ನಕಲಿ ಖಾತೆಗಳನ್ನು ತೆರೆದಿರುವುದು ಕೇಳಿದ್ದೇವೆ. ಅದಾದಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳಿಗೇ ಚಳ್ಳೆಹಣ್ಣು ತಿನ್ನಿಸುವಂತೆ ಕೆಲ ಅಧಿಕಾರಿಗಳ ಹೆಸರಿನಲ್ಲಿಯೂ ಫೇಸ್​ಬುಕ್​​ ನಕಲಿ ಖಾತೆಗಳನ್ನು ತೆರೆದು ಒಂದಷ್ಟು ದುಡ್ಡು ಮಾಡಿಕೊಂಡಿದ್ದಾರೆ ಖದೀಮರು! ಸಚಿವರ ಹೆಸರಲ್ಲೂ ಫೇಸ್​ಬುಕ್​​ ನಕಲಿ ಖಾತೆಗಳು ತೆರೆಯುವ ಆಟ ಶುರುವಾಗಿತ್ತು. ಯಾವುದೇ ಆತಂಕ, ಭಯವಿಲ್ಲದೇ ಈ ರೀತಿಯ ಕೆಲಸಗಳು ನಡೆಯುತ್ತಿದ್ದು,  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆಯನ್ನು ತೆರೆದಿದ್ದರು. ನಕಲಿ ಖಾತೆಗಳನ್ನು ತೆರೆದು ಸಾಮಾನ್ಯವಾಗಿ ವಂಚಕರು ದುಡ್ಡನ್ನು ಬೇಡಿಕೆ ಇಡುತ್ತಾರೆ. ಅದರಂತೆ ಸಚಿವ ಸುರೇಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆ ತೆರೆದ ಖಾತೆದಾರರು ಇದೇ ರೀತಿಯ ಬೇಡಿಕೆಯನ್ನು ಇಟ್ಟಿರುವುದು ಈ ಹಿಂದೆ ತಿಳಿದುಬಂದಿತ್ತು.

ಇದನ್ನೂ ಓದಿ: ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ

Facebook Fraud | ಸಚಿವ ಸುರೇಶ್​ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ; ನಕಲಿ ಖಾತೆದಾರರಿಂದ ಹಣಕ್ಕೆ ಬೇಡಿಕೆ

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,