ಹುಟ್ಟುಹಬ್ಬದ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಬೈಂದೂರಿನ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಪೋಕ್ಸೋ ಕೋರ್ಟ್​

ಎರಡು ವರ್ಷ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ 23 ವರ್ಷದ ಸಾಹಿಲ್‌ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಹುಟ್ಟುಹಬ್ಬದ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಬೈಂದೂರಿನ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಪೋಕ್ಸೋ ಕೋರ್ಟ್​
ಬೈಂದೂರಿನ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಉಡುಪಿ ಪೋಕ್ಸೋ ಕೋರ್ಟ್​
Follow us
|

Updated on:Apr 20, 2023 | 11:42 AM

ಉಡುಪಿ: ಬೈಂದೂರಿನ ಯುವತಿಯೊಂದಿಗೆ ಸ್ನೇಹ ಬೆಳೆಸಿದ ನಂತರ ಹಲವು ಬಾರಿ ಅತ್ಯಾಚಾರ ಎಸಗಿದ (rape) ಯುವಕನಿಗೆ ಕರ್ನಾಟಕದ ಉಡುಪಿ (Udupi) ಜಿಲ್ಲೆಯ ತ್ವರಿತ ಪೋಕ್ಸೋ ನ್ಯಾಯಾಲಯವು (POCSO court) 20 ವರ್ಷಗಳ ಕಠಿಣ ಜೈಲು ಶಿಕ್ಷೆ (imprisonment) ವಿಧಿಸಿದೆ. ಆರೋಪಪಟ್ಟಿ ಪ್ರಕಾರ ಸಾಹಿಲ್ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಹೋಟೆಲ್ ಬಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಸಂತ್ರಸ್ತೆ ಉಡುಪಿಯ ಬೈಂದೂರು ಮೂಲದವರಾಗಿದ್ದು, ಆಕೆಯ ತಂದೆ ಸಾಗರದಲ್ಲಿ ಹೋಟೆಲ್ ಹೊಂದಿದ್ದರಿಂದ ಅಲ್ಲಿಯೇ ವಾಸವಾಗಿದ್ದರು. ಯುವಕ ಅವಳೊಂದಿಗೆ (girl) ಸಂಬಂಧವನ್ನು ಬೆಳೆಸಿದನು.

ಜುಲೈ 2021 ರಲ್ಲಿ, ಹುಡುಗಿಯ ಹುಟ್ಟುಹಬ್ಬದ (Birthday) ಆಚರಣೆಗಾಗಿ ಸಾಹಿಲ್ ಬೈಂದೂರಿಗೆ ಪ್ರಯಾಣ ಬೆಳೆಸಿದ್ದ. ಹುಟ್ಟುಹಬ್ಬದ ಪಾರ್ಟಿಯ ನಂತರ ಸಂತ್ರಸ್ತೆಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಯುವಕ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಮೊದಲ ಘಟನೆಯ ನಂತರ ಪದೇ ಪದೇ ಕೃತ್ಯ ಎಸಗಿದ್ದಾನೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ:

ಇನ್ಮುಂದೆ ಕೋರ್ಟ್ ತೀರ್ಪು ಕನ್ನಡದಲ್ಲೇ ಓದಿ: ಕನ್ನಡ ಭಾಷೆ ತೀರ್ಪುಗಳು ಇರುವ ವೆಬ್ ಸೈಟ್​​ ಆರಂಭಿಸಿದ ಹೈಕೋರ್ಟ್

ಸಂತ್ರಸ್ತೆಯ ತಾಯಿಗೆ ಈ ಸಂಬಂಧ ತಿಳಿದಾಗ ಅವರು ಬೈಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಸಂತೋಷ ಕಾಯ್ಕಿಣಿ ಅವರು ಪ್ರಕರಣದ ಆರೋಪಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ಸಾಂದರ್ಭಿಕ ಸಾಕ್ಷ್ಯವನ್ನು ಪರಿಗಣಿಸಿದ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ್ ಸುವರ್ಣ ಅವರು ಆರೋಪಿಯನ್ನು ಅಪರಾಧಿ ಎಂದು ಘೋಷಿಸಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 22,500 ರೂಪಾಯಿ ದಂಡವನ್ನು ವಿಧಿಸಿದ್ದಾರೆ.

ಸಂತ್ರಸ್ತೆಗೆ 1.5 ಲಕ್ಷ ರೂ ಪರಿಹಾರ ನೀಡುವಂತೆ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ ಟಿ ರಾಘವೇಂದ್ರ ವಾದ ಮಂಡಿಸಿದ್ದರು.

ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:38 am, Thu, 20 April 23

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ