AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಂದೂರಿನಲ್ಲಿ ಈಶ್ವರಪ್ಪ ಸಮಾವೇಶದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ; ಕಾರ್ಯಕರ್ತರಿಗೆ ಸಿಗದ ಬಿರಿಯಾನಿ

ಬಿಎಸ್ ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ತೊಡೆತಟ್ಟಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪ ಅವರು ಇಂದು ಉಡುಪಿ ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಸಮಾವೇಶ ನಡೆಸಿದರು. ಕಾರ್ಯಕರ್ತರಿಗಾಗಿ ಬಿರಿಯಾನಿ ಕೂಡ ಸಿದ್ಧಪಡಿಸಲಾಗುತ್ತಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಫ್ಲೈಯಿಂಗ್ ಸ್ಕ್ವಾಡ್ ಸಮಾವೇಶದ ಮೇಲೆ ದಾಳಿ ನಡೆಸಿ ಬಿರಿಯಾನಿ ನೀಡದಂತೆ ಎಚ್ಚರಿಕೆ ನೀಡಿದೆ.

ಬೈಂದೂರಿನಲ್ಲಿ ಈಶ್ವರಪ್ಪ ಸಮಾವೇಶದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ; ಕಾರ್ಯಕರ್ತರಿಗೆ ಸಿಗದ ಬಿರಿಯಾನಿ
ಬೈಂದೂರಿನಲ್ಲಿ ಈಶ್ವರಪ್ಪ ಸಮಾವೇಶದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ; ಕಾರ್ಯಕರ್ತರಿಗೆ ಸಿಗದ ಬಿರಿಯಾನಿ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Mar 31, 2024 | 5:50 PM

Share

ಉಡುಪಿ, ಮಾ.31: ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಮಕ್ಕಳ ವಿರುದ್ಧ ತೊಡೆತಟ್ಟಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಸ್ ಈಶ್ವರಪ್ಪ (KS Eshwarappa) ಅವರು ಇಂದು ಉಡುಪಿ (Udupi) ಜಿಲ್ಲೆಯ ಬೈಂದೂರಿನ ಉಪ್ಪಂದದಲ್ಲಿ ಸಮಾವೇಶ ನಡೆಸಿದರು. ಕಾರ್ಯಕರ್ತರಿಗಾಗಿ ಬಿರಿಯಾನಿ ಕೂಡ ಸಿದ್ಧಪಡಿಸಲಾಗುತ್ತಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಫ್ಲೈಯಿಂಗ್ ಸ್ಕ್ವಾಡ್ (Flying Squad) ಸಮಾವೇಶದ ಮೇಲೆ ದಾಳಿ ನಡೆಸಿ ಬಿರಿಯಾನಿ ಹಂಚದಂತೆ ಎಚ್ಚರಿಕೆ ನೀಡಿದೆ.

ಈಶ್ವರಪ್ಪ ಸಮಾವೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು. ಕಾರ್ಯಕರ್ತರಿಗೆ ಮಧ್ಯಾಹ್ನದ ಊಟಕ್ಕೆಂದು ಬಿರಿಯಾನಿ ಕೂಡ ಸಿದ್ಧಪಡಿಸಲಾಗಿತ್ತು. ಆದರೆ, ಸಮಾವೇಶ ನಡೆಯುತ್ತಿದ್ದ ಸಭಾಂಗಣಕ್ಕೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿದ್ದು, ಬಿರಿಯಾನಿ ಸಪ್ಲೈ ಮಾಡಿದರೆ ಚುನಾವಣೆ ವೆಚ್ಚಕ್ಕೆ ಸೇರ್ಪಡೆಗೊಳಿಸುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ತಯಾರಿಸುತ್ತಿದ್ದ ಬಿರಿಯಾನಿ ಅಲ್ಲೇ ಬಾಕಿಯಾಗಿದ್ದು, ಬಿರಿಯಾನಿಗಾಗಿ ಕಾದು ಸುಸ್ತಾದ ಕಾರ್ಯಕರ್ತರು, ಬಿರಿಯಾನಿ ತಿನ್ನದೇ ವಾಪಸಾದರು.

ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ರೀತಿಯಲ್ಲಿ ರಾಜ್ಯದಲ್ಲೂ ಕುಟುಂಬ ರಾಜಕಾರಣ ಇದೆ. ಬಿಜೆಪಿ 28 ಸ್ಥಾನ ಗೆಲ್ಲುವುದು ಮುಖ್ಯ ಅಲ್ಲ, ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಯಡಿಯೂರಪ್ಪನಿಗೆ ಮುಖ್ಯವಾಗಿದೆ. ಆದರೆ, ಈ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಅಭ್ಯರ್ಥಿ ರಾಘವೇಂದ್ರ ಸೋಲುತ್ತಾನೆ, ವಿಜಯೇಂದ್ರ ರಾಜೀನಾಮೆ ಕೊಡುತ್ತಾನೆ. ರಾಜ್ಯದಲ್ಲಿ ಕುಟುಂಬ ರಾಜಕಾರಣ ಅಂತ್ಯವಾಗಬೇಕು ಎಂದರು.

ಇದನ್ನೂ ಓದಿ: ಬಂಡಾಯ ಸ್ಪರ್ಧೆಗೆ ಪ್ರಧಾನಿ ಮೋದಿ, ಅಮಿತ್ ಶಾ ಕಾರಣವೇ? ಈಶ್ವರಪ್ಪ ಸ್ಫೋಟಕ ಹೇಳಿಕೆ

ಚುನಾವಣೆಗೆ ಮುನ್ನ ನಾನು ಯಾವುದೇ ಆಶ್ವಾಸನೆ ಕೊಡುವುದಿಲ್ಲ. ಗೆದ್ದು ಬಂದು ಎಲ್ಲಾ ಕೆಲಸವನ್ನು ಮಾಡುತ್ತೇನೆ. ಶಿವಮೊಗ್ಗದಲ್ಲೂ ಬೈಂದೂರಲ್ಲಿ ಯಾರು ಲೀಡ್ ನೋಡೋಣ. ನಾಮಪತ್ರ ಸಲ್ಲಿಕೆ ದಿನ ಯಡಿಯೂರಪ್ಪ ರಾಘವೇಂದ್ರನಿಗೆ ನಡುಕ ಆಗಬೇಕು. ರಾಷ್ಟ್ರಭಕ್ತ ಬಳಗ ನಾಮಪತ್ರ ದಿನ ಶಿವಮೊಗ್ಗದಲ್ಲಿ ಜಾತ್ರೆ ಮಾಡುತ್ತದೆ ಎಂದರು.

ಕಾಂಗ್ರೆಸ್ ಜೊತೆ ಕೈ ಜೋಡಿಸಿದ ಬಿಜೆಪಿ

ಕಾಂಗ್ರೆಸ್ ಜೊತೆ ಬಿಜೆಪಿ ಕೈಜೋಡಿಸಿದ್ದು, ಒಪ್ಪಂದ ಮಾಡಿದ್ದು ದುರ್ದೈವ ಎಂದು ಆಕ್ರೋಶ ಹೊರಹಾಕಿದ ಈಶ್ವರಪ್ಪ, ಈ ಬಾರಿಯ ಶಿವಮೊಗ್ಗದ ಲೋಕಸಭೆ ಚುನಾವಣೆ ದುಡ್ಡು ಮತ್ತು ಹಿಂದುತ್ವದ ಕಾರ್ಯಕರ್ತರ ನಡುವಿನ ಚುನಾವಣೆಯಾಗಿದೆ. ಗೀತಾ ಶಿವರಾಜ್ ಕುಮಾರ್ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಬೆಂಬಲಿಸಿದ್ದಾರೆ. ಯಡಿಯೂರಪ್ಪನ ದುಡ್ಡು, ಜಾತಿ ಮೀರಿ ಲೋಕಸಭೆಗೆ ಹೋಗುತ್ತೇನೆ ಎಂದರು.

ಬಿಜೆಪಿಯಲ್ಲಿ ಹಿಂದುತ್ವ ನಾಯಕರ ಮೂಲೆಗುಂಪು

ಹಿಂದುತ್ವ ನಾಯಕರನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಈಶ್ವರಪ್ಪ, ಹಿಂದೂ, ರಾಮ ಮಂದಿರ, ಗೋವು ಬಗ್ಗೆ ಮಾತಾಡುವವರು ಪಕ್ಷದಲ್ಲಿ ಮೂಲೆಗುಂಪಾಗುತ್ತಿದ್ದಾರೆ. ಸಿ.ಟಿ ರವಿಯನ್ನು ರಾಜೀನಾಮೆ ಕೊಡಿಸಿದರು. ಪಕ್ಷ ಸಂಘಟನೆ ಬಗ್ಗೆ ಇಡೀ ದೇಶ ಸುತ್ತಿಸಿದರೂ ಅವರಿಗೆ ಎಂಪಿ ಟಿಕೆಟ್ ಕೊಡಲಿಲ್ಲ. ನಮ್ಮ ಹಿಂದೂ ಕಾರ್ಯಕರ್ತರು ಕೂಲಿಯಾಳುಗಳಲ್ಲ. ಹಿಂದುತ್ವ ಬಗ್ಗೆ ಮಾತಾಡುವವರನ್ನು ಪಕ್ಷದಲ್ಲಿ ಪಕ್ಕಕ್ಕಿಡುತ್ತಿದ್ದಾರೆ. ಸದಾನಂದ ಗೌಡ, ಯತ್ನಾಳ್, ಪ್ರತಾಪ್ ಸಿಂಹನಿಗೆ ಮೋಸವಾಗುತ್ತಿದೆ ಎಂದರು.

ಕೆಜೆಪಿ ಕಟ್ಟಿದ ಯಡಿಯೂರಪ್ಪಗೆ ಸಿಕ್ಕಿದ್ದು 6 ಸೀಟು ಮಾತ್ರ. ಶಿಕಾರಿಪುರದಲ್ಲಿ ಬಿಜೆಪಿ ಅಂತರ 60 ಸಾವಿರದಿಂದ 10 ಸಾವಿರಕ್ಕೆ ಇಳಿದಿದೆ. ಈಶ್ವರಪ್ಪ ಯಾವತ್ತಿದ್ದರೂ ಬಿಜೆಪಿಯೇ, ಮತ್ತೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಎಂಪಿಯಾಗಿ ಗೆದ್ದು ಮೋದಿಯನ್ನು ಪ್ರಧಾನಿ ಮಾಡಲು ಕೈ ಎತ್ತುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್