AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕಿಯ ಸಾವಿಗೆ ಹೇತುವಾದ ಕಿರುಸೇತುವೆ ಹೇಗಿದೆ ಗೊತ್ತಾ? ಯಮನೊಂದಿಗೆ ಸೆಣೆಸುತ್ತಾ, ಮುರಿದ ಸೇತುವೆ ದಾಟುವ ದುಃಸ್ಥಿತಿ ಇಲ್ಲಿದೆ

ಕಾಲ್ಪೋಡು ಗ್ರಾಮ ಮೂಲಭೂತ ಸೌಕರ್ಯದಿಂದಲೇ ವಂಚಿತವಾಗಿದೆ. ಇಲ್ಲಿನ ಗ್ರಾಮಸ್ಥರೇ ಹರಿಯುವ ನದಿಗೆ ಸೇತುವೆಯನ್ನು ನಿರ್ಮಿಸಿಕೊಂಡಿದ್ದಾರೆ. ಆದ್ರೆ ಅದರ ಸ್ಥಿತಿ ಈಗ ಮತ್ತಷ್ಟು ಹಾಳಾಗಿದೆ.

ಬಾಲಕಿಯ ಸಾವಿಗೆ ಹೇತುವಾದ ಕಿರುಸೇತುವೆ ಹೇಗಿದೆ ಗೊತ್ತಾ? ಯಮನೊಂದಿಗೆ ಸೆಣೆಸುತ್ತಾ, ಮುರಿದ ಸೇತುವೆ ದಾಟುವ ದುಃಸ್ಥಿತಿ ಇಲ್ಲಿದೆ
ಕಾಲು ಸಂಕ
TV9 Web
| Edited By: |

Updated on:Aug 09, 2022 | 7:03 PM

Share

ಉಡುಪಿ: ಬೈಂದೂರು (Baindur) ತಾಲೂಕಿನ ಕಾಲ್ತೋಡು ಗ್ರಾಮದಲ್ಲಿ ಆಗಸ್ಟ್ 8ರಂದು ಕಾಲು ಸಂಕ(Bridge) ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದಿದ್ದ ಏಳು ವರ್ಷದ ಸನ್ನಿಧಿಗಾಗಿ ಶೋಧಕಾರ್ಯ ಮುಂದುವರಿದಿದೆ. ಆದ್ರೆ ಸನ್ನಿಧಿಯ ಸಾವಿಗೆ ಕಾರಣವಾದ ಕಿರು ಸೇತುವೆ ಹೇಗಿದೆ ಗೊತ್ತಾ? ಮಕ್ಕಳು ಬಿಡಿ ದೊಡ್ಡವರಿಗೂ ಈ ಸೇತುವೆಯಲ್ಲಿ ನಡೆಯಲು ಸಾಧ್ಯವಿಲ್ಲ. ತಮ್ಮ ಕಷ್ಟ ಕಾಲಕ್ಕೆ ತಾವೇ ಮಾಡಿಕೊಂಡ ಸೇತುವೆಯಲ್ಲಿ ಜನ ನಿತ್ಯವೂ ಓಡಾಡಿ ಹೈರಾಣಾಗಿದ್ದಾರೆ. ಅಪಾಯಕಾರಿ ನೀರಿನ ಸೇತುವೆಯ ಮೇಲೆ ಜಾರುವ ಮರದ ದಿಮ್ಮಿಗಳಲ್ಲಿ ನಡೆದಾಡುವುದೇ ಒಂದು ಸಾಹಸಮಯ ಕೆಲಸ.

ಕಾಲ್ಪೋಡು ಗ್ರಾಮ ಮೂಲಭೂತ ಸೌಕರ್ಯದಿಂದಲೇ ವಂಚಿತವಾಗಿದೆ. ಇಲ್ಲಿನ ಗ್ರಾಮಸ್ಥರೇ ಹರಿಯುವ ನದಿಗೆ ಸೇತುವೆಯನ್ನು ನಿರ್ಮಿಸಿಕೊಂಡಿದ್ದಾರೆ. ಆದ್ರೆ ಅದರ ಸ್ಥಿತಿ ಈಗ ಮತ್ತಷ್ಟು ಹಾಳಾಗಿದೆ. ಸೇತುವೆ ಮುರಿದಿದೆ. ಮುರಿದ ಸೇತುವೆ ಮೇಲೆಯೇ ಪ್ರತಿ ದಿನ ಮಕ್ಕಳು, ವೃದ್ಧರು ಸೇರಿದಂತೆ ಎಲ್ಲರೂ ಓಡಾಡುತ್ತಾರೆ. ಬೀಜಮಕ್ಕಿ ಪರಿಸರದಲ್ಲಿ ಇಂತಹ ಹತ್ತಕ್ಕೂ ಅಧಿಕ ಕಾಲು ಸಂಕಗಳಿವೆ. ಶಾಶ್ವತ ಸೇತುವೆ ನಿರ್ಮಾಣವೊಂದೇ ಸಮಸ್ಯೆಗೆ ಪರಿಹಾರವಾಗಿದೆ.

ಈಗಾಗಲೇ ಎರಡು ಕಡೆ ಸೇತುವೆ ನಿರ್ಮಾಣಕ್ಕೆ ಮಂಜೂರಾತಿ ಸಿಕ್ಕಿದೆ. ಆದ್ರೆ ಗ್ರಾಮಸ್ಥರು ಇನ್ನಷ್ಟು ಸೇತುವೆಗಳಿಗೆ ಬೇಡಿಕೆ ಇಟ್ಟಿದ್ದಾರೆ. ಹಾಗೂ ನಿರ್ಲಕ್ಷ್ಯ ತೋರುತ್ತಿರುವ ಜನಪ್ರತಿನಿಧಿಗಳ ಬಗ್ಗೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಚುನಾವಣೆ ಬಂದಾಗ ಮಾತ್ರ ಜನಪ್ರತಿನಿಧಿಗಳು ಬರುತ್ತಾರೆ. ಶಾಲೆಯಿಂದ ಮನೆಗೆ ತೆರಳುವ ದಾರಿಯಲ್ಲಿ ಇದೇ ಮುರಿದ ಕಾಲು ಸಂಕವಿದೆ. ಈಗಾಗಲೇ ಹಲವಾರು ಮಂದಿ ನೀರಿಗೆ ಬಿದ್ದು ಬಚಾವಾಗಿದ್ದರು. ಇದೇ ಮೊದಲ ಬಾರಿಗೆ ಶಾಲಾ ಬಾಲಕಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಶಾಶ್ವತ ಸೇತುವೆ ಕಟ್ಟಿಕೊಡಲು ಗ್ರಾಮಸ್ಥರು ಬೇಡಿಕೆ ಇಟ್ಟಿದ್ದಾರೆ.

ಉಡುಪಿಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:02 pm, Tue, 9 August 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್