AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ; ಟ್ವೀಟ್ ಮೂಲಕ ಬಿಲ್ಲವ ಸಮುದಾಯಕ್ಕೆ ಸಚಿವ ಕೋಟ ಶ್ರೀನಿವಾಸ್ ಭರವಸೆ

ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಟ್ವೀಟ್ ಮಾಡಿದ್ದಾರೆ.

ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ; ಟ್ವೀಟ್ ಮೂಲಕ ಬಿಲ್ಲವ ಸಮುದಾಯಕ್ಕೆ ಸಚಿವ ಕೋಟ ಶ್ರೀನಿವಾಸ್ ಭರವಸೆ
ಕೋಟ ಶ್ರೀನಿವಾಸ್​ ಪೂಜಾರಿ
TV9 Web
| Edited By: ಆಯೇಷಾ ಬಾನು|

Updated on:Feb 19, 2023 | 11:46 AM

Share

ಉಡುಪಿ: ಇನ್ನೆರಡು ದಿನಗಳಲ್ಲಿ ನಾರಾಯಣ ಗುರು ನಿಗಮ ರಚನೆ ಮಾಡುವುದಾಗಿ ಘೋಷಣೆ ಮಾಡುತ್ತೇನೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ಟೀಟ್ ಮೂಲಕ ತಿಳಿಸಿದ್ದಾರೆ.

ನಾರಾಯಣ ಗುರು ನಿಗಮ ರಚನೆಯ ವಿಚಾರದಲ್ಲಿ ಯಾರಿಗೂ ಯಾವುದೇ ಆತಂಕ ಬೇಡ. ಮನ್ನಿಸಿ.. ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ. ಜವಾಬ್ದಾರಿ ನನ್ನದು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಾವೇರಿ: ಸಿಎಂ ತವರು ಜಿಲ್ಲೆಯಲ್ಲಿನ ಮೆಡಿಕಲ್ ಕಾಲೇಜಿನಲ್ಲಿ ಬೋಧಕರೇ ಇಲ್ಲ; ಕಂಗಾಲಾದ ವಿದ್ಯಾರ್ಥಿಗಳು

ಬಿಲ್ಲವ, ಈಡಿಗ ಸೇರಿದಂತೆ 26 ಉಪಪಂಗಡಗಳ ನಾರಾಯಣಗುರು ನಿಗಮ ರಚನೆ ಕುರಿತು ಬಹುದಿನಗಳಿಂದ ನಿರಂತರವಾಗಿ ಬೇಡಿಕೆ ಇದ್ದು ಅದು ಈ ಬಾರಿಯ ಬಜೆಟ್​ನಲ್ಲೂ ಈಡೇರದ ಹಿನ್ನೆಲೆಯಲ್ಲಿ ಬಿಲ್ಲವ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕೆಲವು ದಿನಗಳ ಹಿಂದೆ ಇಂಧನ ಸಚಿವ ಸುನೀಲ್ ಕುಮಾರ್ ಮತ್ತು ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಬಿಲ್ಲವ ಸಮಾಜದ ಗಣ್ಯರ ನಿಯೋಗವೊಂದು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಈ ವೇಳೆ ಫೆಬ್ರವರಿಯಲ್ಲಿ ಮಂಡಿಸುವ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೆ ಶುಕ್ರವಾರ ಸಿಎಂ ಮಂಡಿಸಿದ ಬಜೆಟ್ ನಲ್ಲಿ ನಿಗಮ ಘೋಷಣೆ ಮಾಡದಿರುವುದು ಬಿಲ್ಲವ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಟ್ವೀಟ್ ಮೂಲಕ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಹಾಗೂ ಇನ್ನೆರಡು ದಿನಗಳಲ್ಲಿ ನಿಗಮ ಘೋಷಿಸುತ್ತೇವೆ ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:46 am, Sun, 19 February 23

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?