AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲಾತಿಗಳ ಸೃಷ್ಟಿಸಿ ಬ್ಯಾಂಕ್ ಗಳಲ್ಲಿ ಲಕ್ಷಾಂತರ ರೂ ಸಾಲ ಎತ್ತಿದ ವಂಚಕರು, ಕ್ರಮ ಕೈಗೊಳ್ಳದ ಕುಂದಾಪುರ ಪೊಲೀಸರು!

ಕುಂದಾಪುರದಲ್ಲಿ ವಂಚಕರು ತಮ್ಮ ಬುದ್ದಿವಂತಿಕೆ ಉಪಯೋಗಿಸಿ ಎರಡು ಬ್ಯಾಂಕ್ಗಳಿಗೆ ಲಕ್ಷಾಂತರ ರೂಪಾಯಿ ಮೋಸ ಮಾಡಿದ್ದು, ರಾಜಾರೋಷವಾಗಿ ಐಷಾರಾಮಿ ಜೀವನ ನಡೆಸುತ್ತಾ ತಿರುಗಾಡಿಕೊಂಡಿದ್ದಾರೆ. ಆದರೆ ಇತ್ತ ಸಾಲ ಕೊಟ್ಟ ಬ್ಯಾಂಕಿನವರು ಮಾತ್ರ ಸಾಲ ಮರುಪಾವತಿಯಾಗದೆ ಕಂಗಾಲಾಗಿದ್ದು ನ್ಯಾಯಾಂಗದ ಮೊರೆ ಹೋಗಿದ್ದಾರೆ.

ನಕಲಿ ದಾಖಲಾತಿಗಳ ಸೃಷ್ಟಿಸಿ ಬ್ಯಾಂಕ್ ಗಳಲ್ಲಿ ಲಕ್ಷಾಂತರ ರೂ ಸಾಲ ಎತ್ತಿದ ವಂಚಕರು, ಕ್ರಮ ಕೈಗೊಳ್ಳದ ಕುಂದಾಪುರ ಪೊಲೀಸರು!
ನಕಲಿ ದಾಖಲು ಸೃಷ್ಟಿಸಿ ಬ್ಯಾಂಕ್ ಗಳಲ್ಲಿ ಲಕ್ಷಾಂತರ ಸಾಲ ಎತ್ತಿದ ವಂಚಕರು
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Dec 02, 2023 | 2:03 PM

Share

ನಕಲಿ ದಾಖಲಾತಿಗಳನ್ನು ಸೃಷ್ಟಿ ಮಾಡಿ (fake documents) ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳಲ್ಲಿ ಸಾಲ ಪಡೆದು ಮೋಸ ಮಾಡುತ್ತಿರುವ ಪ್ರಕರಣ (Fraudsters) ಕುಂದಾಪುರದಲ್ಲಿ ವರದಿಯಾಗಿದೆ. ಸಹಕಾರಿ ಬ್ಯಾಂಕ್ ನಲ್ಲಿ ಲೋನ್ ಪಡೆದು ಅದೇ ಬ್ಯಾಂಕಿನ ಸಾಲ ಚುಕ್ತಾ ದಾಖಲಾತಿಯನ್ನು ನಕಲಿಯಾಗಿ ಸೃಷ್ಟಿಸಿ ರಾಷ್ಟ್ರೀಕೃತ ಬ್ಯಾಂಕ್ (bank)ನಲ್ಲಿ ಮತ್ತೆ ಸಾಲ ಪಡೆದಿರುವ ಈ ತಂಡ ಕಳೆದ ಕೆಲವು ವರ್ಷಗಳಿಂದ ಕುಂದಾಪುರ ಭಾಗದಲ್ಲಿ ಸಕ್ರಿಯವಾಗಿದೆ. ಪೊಲೀಸ್ ಠಾಣೆಯಲ್ಲಿ (Kundapur police) ಈ ಕುರಿತು ಪ್ರಕರಣ ದಾಖಲಾಗಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಹೌದು ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಬುದ್ದಿವಂತರ ಜಿಲ್ಲೆ ಎಂದು ಹೆಸರು ಪಡೆದ ಜಿಲ್ಲೆ. ಇಲ್ಲಿ ಅಪರಾಧವನ್ನು ಕೂಡ ಅತಿ ಬುದ್ಧಿವಂತಿಕೆ ಉಪಯೋಗಿಸಿ ಮಾಡುತ್ತಾರೆ ಎನ್ನುವುದಕ್ಕೆ ಇದೊಂದು ಸ್ಪಷ್ಟ ನಿದರ್ಶನ. ಸಹಕಾರಿ ಬ್ಯಾಂಕ್ ನಲ್ಲಿ ಸಾಲ ಪಡೆಯುವ ಉದ್ದೇಶಕ್ಕೆ ಜಾಗವನ್ನ ಅಡಮಾನವಾಗಿರಿಸಿ ಸಾಲ ಪಡೆದ ಈ ತಂಡ. ಕೆಲವೇ ತಿಂಗಳುಗಳಲ್ಲಿ ಸಾಲ ಚುಕ್ತಾ ಆಗಿದೆ ಎನ್ನುವ ನಕಲಿ ದಾಖಲಾತಿಯನ್ನು ಸೃಷ್ಟಿಸಿ ಅದೇ ದಾಖಲಾತಿಗಳನ್ನು ಹಿಡಿದು ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಕೂಡ ಸಾಲ ಪಡೆದಿದೆ.

ಈ ಘಟನೆ ಬೆಳಕಿಗೆ ಬಂದಿರುವುದು ಕುಂದಾಪುರ ತಾಲೂಕಿನಲ್ಲಿ. ಕುಂದಾಪುರ ನಗರದಲ್ಲಿರುವ ಹೋಲಿ ರೋಸರಿ ಸಹಕಾರಿ ಬ್ಯಾಂಕ್ ನ ಸಾಲಗಾರರಾದ ಈ ತಂಡದವರು ಲಕ್ಷಾಂತರ ರೂಪಾಯಿ ವಂಚನೆ ನಡೆಸಿರುವುದು ದಾಖಲೆಗಳ ಮೂಲಕ ಸಾಬೀತಾಗಿದೆ. ಈ ಬಗ್ಗೆ ಎರಡು ಬಾರಿ ಕುಂದಾಪುರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ರು ಕೂಡ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವ ಕೆಲಸ ಇದುವರೆಗೆ ಆಗಿಲ್ಲ ಎನ್ನುವುದು ಬ್ಯಾಂಕಿನವರ ದೂರು.

ಬೈಂದೂರು ತಾಲೂಕು ಆಲೂರು ಮೂಲದ ಶ್ರೀರಾಮಬಾಯಿರಿ ಎನ್ನುವರು 2015ರಲ್ಲಿ ಇದೇ ಹೋಲಿ ರೋಸರಿ ಬ್ಯಾಂಕ್ ನಿಂದ ಸರಿಸುಮಾರು 12 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ತಮ್ಮ ಜಾಗವನ್ನು ಅಡಮಾನವಿರಿಸಿ ಸಾಲ ಪಡೆದಿದ್ದ ಶ್ರೀರಾಮ ಬಾಯಿರಿ, ತಮ್ಮ ಕುಟುಂಬಸ್ಥರನ್ನೇ ಜಾಮೀನುದಾರರಾಗಿ ಮಾಡಿ ಸಾಲವನ್ನು ಕೂಡ ಮರು ಪಾವತಿ ಮಾಡದೆ, ಬ್ಯಾಂಕ್ ಹೆಸರಿನಲ್ಲಿ ಸಾಲ ಚುಕ್ತಾ ದಾಖಲೆಗಳನ್ನ ನಕಲಿಯಾಗಿ ಸೃಷ್ಟಿಸಿ ಎಸ್ ಬಿ ಐ ಬ್ಯಾಂಕ್ ನಲ್ಲಿ ಸುಮಾರು 52 ಲಕ್ಷ ರೂಪಾಯಿ ಸಾಲ ಪಡೆದಿದ್ದಾರೆ!

ಇದನ್ನೂ ಓದಿ: ಜಗಳ ಬಗೆಹರಿಸಲು ಬಂದ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿ:ಸಿನಿಮೀಯ ರೀತಿಯಲ್ಲಿ ಹಿಡಿದ ಖಾಕಿ

ಬ್ಯಾಂಕ್ ನವರು EC ಮೂಲಕ ಪರಿಶೀಲನೆ ನಡೆಸುವಾಗ ಆರೋಪಿಗಳ ಈ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ನಕಲಿ ದಾಖಲಾತಿ ಮತ್ತು ಬ್ಯಾಂಕ್ ಗೆ ಮೋಸ ಮಾಡಿರುವ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಈ ಪ್ರಕರಣದ ಜಾಮೀನುದಾರರಾಗಿರುವ ಗುರುಪ್ರಸಾದ್ ಎನ್ನುವವನು ಕೂಡ ಇದೇ ಹೋಲಿಕೆಯ ಕುಕತ್ಯವೆಸಗಿ, ನಕಲಿ ಸೃಷ್ಟಿ ಮಾಡಿ ಕೆನರಾ ಬ್ಯಾಂಕ್ ನಲ್ಲಿ ಅದೇ ದಾಖಲಾತಿಗೆ ಸುಮಾರು 60 ಲಕ್ಷ ರೂಪಾಯಿ ಸಾಲ ಮಾಡಿರುವುದು ಬೆಳಕಿಗೆ ಬಂದಿದೆ. ಈ ಎರಡು ಪ್ರಕರಣಗಳ ಕುರಿತು ಪೊಲೀಸರಿಗೆ ದೂರು ನೀಡಿದರು ಕೂಡ ಇದುವರೆಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನುವುದು ದೂರುದಾರರ ಆಕ್ಷೇಪ.

ಉಡುಪಿ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:02 pm, Sat, 2 December 23

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ