AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಭಾರತ ಜೋಡೋ ಪಾದಯಾತ್ರೆಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ವ್ಯಂಗ್ಯ

ಕಾಂಗ್ರೆಸ್ ಭಾರತ ಜೋಡೋ ಪಾದಯಾತ್ರೆಯನ್ನು 1947ರಲ್ಲಿ ಮಾಡಿದ್ದರೇ ಪೋರ್ಚಗೀಸರಿಂದ ಗೋವಾ ವಿಮೋಚನೆ ಮಾಡುವುದು ತಡವಾಗುತ್ತಿರಲಿಲ್ಲ ಎಂದು ಉಡುಪಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಕಾಂಗ್ರೆಸ್​ ಭಾರತ ಜೋಡೋ ಪಾದಯಾತ್ರೆಗೆ ಗೋವಾ ಸಿಎಂ ಪ್ರಮೋದ್ ಸಾವಂತ್ ವ್ಯಂಗ್ಯ
ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್​
TV9 Web
| Updated By: ವಿವೇಕ ಬಿರಾದಾರ|

Updated on: Oct 08, 2022 | 7:18 PM

Share

ಉಡುಪಿ: ಕಾಂಗ್ರೆಸ್ (Congress)​ ಭಾರತ ಜೋಡೋ ಪಾದಯಾತ್ರೆಯನ್ನು (Bharat Jodo Yatra) 1947ರಲ್ಲಿ ಮಾಡಿದ್ದರೇ ಪೋರ್ಚಗೀಸರಿಂದ ಗೋವಾ ವಿಮೋಚನೆ ಮಾಡುವುದು ತಡವಾಗುತ್ತಿರಲಿಲ್ಲ ಎಂದು ಉಡುಪಿಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Sawant) ಹೇಳಿದ್ದಾರೆ. ಪ್ರಮೋದ್ ಸಾವಂತ್ ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಪ್ರಮೋದ್ ಸಾವಂತ್ ಅವರಿಗೆ ಪರ್ಯಾಯ ಕೃಷ್ಣಾಪುರ ಮಠದಿಂದ ಗೌರವ ಸಮರ್ಪಣೆ ಮಾಡಲಾಗಿದೆ.

1947ರಲ್ಲಿ ಪಾದಯಾತ್ರೆ ಮಾಡಿದ್ದರೇ, 1950 ಕ್ಕಾದರೂ ನಮಗೆ ವಿಮೋಚನೆ ಸಿಗುತ್ತಿತ್ತು. 1955ರಲ್ಲಿ ಪೋರ್ಚುಗೀಸರ ವಿರುದ್ಧ ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಯುದ್ಧ ಮಾಡಬೇಕಾಯಿತು. ಅನೇಕ ಸ್ವಾತಂತ್ರ್ಯ ಹೋರಾಟಗಾರರು ಹುತಾತ್ಮರಾದರು. ಅಂದು ಭಾರತ ಜೋಡೋ ಮಾಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಈಶಾನ್ಯ ಭಾರತ ಸಂಪೂರ್ಣ ನಮ್ಮ ಅವಿಭಾಜ್ಯ ಅಂಗವಾಗಿ ಇರುತ್ತಿತ್ತು. ಪೂರ್ಣ ಕಾಶ್ಮೀರ ಒಳಗೊಂಡ ಅಖಂಡ ಭಾರತ ಇರುತ್ತಿತ್ತು. ಪ್ರಧಾನಮಂತ್ರಿಗಳ ದೂರದರ್ಶಿತ್ವ ಕಂಡು ಅನ್ಯ ಪಕ್ಷಗಳ ನಾಯಕರು ಬಿಜೆಪಿಗೆ ಬರುತ್ತಿದ್ದಾರೆ. ಅಖಂಡ ಭಾರತ, ನವ ಭಾರತದ ಕನಸು ಕಾಣುವ ಯುವಕರಿಗೆ ಪ್ರಧಾನಿ ಪ್ರೇರಣೆಯಾಗಿದ್ದಾರೆ ಎಂದು ತಿಳಿಸಿದರು.

ಯುವಕರು ಕ್ಲೀನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಕನಸಿಗೆ ಕೈಜೋಡಿಸುತ್ತಿದ್ದಾರೆ. ನವ ಭಾರತದ ನಿರ್ಮಾಣದ ಕನಸಿನಿಂದಲೇ ಗೋವಾದಲ್ಲಿ ಅನ್ಯಪಕ್ಷೀಯರು ಬಿಜೆಪಿಗೆ ಬಂದಿದ್ದಾರೆ. ಅಲ್ಲಿ ನಡೆದ ಮ್ಯಾಜಿಕ್ ದೇಶದ ಬೇರೆಡೆಯೂ ಆಗಬಹುದು ಎಂದು ಮಾತನಾಡಿದರು.

ನಮಸ್ತೆ ಆರತಿ ಎಂದು ಮಾಡಿದರಾಯತು: ಶಾಸಕ ರಘುಪತಿ ಭಟ್

ಸಲಾಂ ಆರತಿ ಅನ್ನೋದರ ಬದಲು ನಮಸ್ತೆ ಆರತಿ ಎಂದು ಮಾಡಿದರಾಯತು. ಪೂಜೆಯಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಸಲಾಂ ಆರತಿ ಎಂದು ಹೇಳುವ ಅವಶ್ಯಕತೆ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್​ ಹೇಳಿದ್ದಾರೆ.

ಟಿಪ್ಪು ಎಕ್ಸ್​ಪ್ರೆಸ್​ ರೈಲಿಗೆ ಒಡೆಯರ್ ಹೆಸರಿಟ್ಟು ತುಂಬಾ ಒಳ್ಳೆಯ ಕೆಲಸ ಮಾಡಿದ್ದಾರೆ. ಈ ರಾಜ್ಯಕ್ಕೆ ಒಡೆಯರ್ ಕೊಡುಗೆ ತುಂಬಾ ಇದೆ. ಕೇಂದ್ರ ಸರಕಾರ ಬಹಳ ಒಳ್ಳೆಯ ಕೆಲಸ ಮಾಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?