AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿಯಲ್ಲಿ ಸ್ತ್ರೀ ರೂಪ ತಾಳುತ್ತಾನೆ ಉಡುಪಿ ಶ್ರೀಕೃಷ್ಣ! ಏನಿದು ಅಪರೂಪದ ಪೂಜಾ ಕ್ರಮ? ಇಲ್ಲಿದೆ ಮಾಹಿತಿ

ಕೃಷ್ಣ ದೇವರು ಸ್ತ್ರೀಲೋಲ ಎನ್ನುತ್ತಾರೆ. ಆದರೆ ಕೃಷ್ಣನೇ ಹೆಣ್ಣಾಗಿ ರೂಪ ಬದಲಿಸುವುದನ್ನು ಎಲ್ಲಾದರೂ ಕಂಡಿದ್ದೀರಾ? ನವರಾತ್ರಿ ಬಂದಾಗ ಒಂಭತ್ತು ದಿನಗಳ ಕಾಲ ಉಡುಪಿಯ ಶ್ರೀಕೃಷ್ಣ ಮಠದ ಕಡೆಗೋಲು ಕೃಷ್ಣ ಹೆಣ್ಣಿನ ರೂಪ ಧರಿಸಿ ದೇವಿಯ ಸ್ವರೂಪ ಪಡೆಯುತ್ತಾನೆ! ಪುರುಷ ದೇವರು ಸ್ತ್ರೀಯಾಗಿ ಬದಲಾಗುವ ಅಪರೂಪದ ಆರಾಧನಾ ಪದ್ಧತಿಯ ಕುರಿತ ಮಾಹಿತಿ ಇಲ್ಲಿದೆ.

ನವರಾತ್ರಿಯಲ್ಲಿ ಸ್ತ್ರೀ ರೂಪ ತಾಳುತ್ತಾನೆ ಉಡುಪಿ ಶ್ರೀಕೃಷ್ಣ! ಏನಿದು ಅಪರೂಪದ ಪೂಜಾ ಕ್ರಮ? ಇಲ್ಲಿದೆ ಮಾಹಿತಿ
ನವರಾತ್ರಿಯಲ್ಲಿ ಸ್ತ್ರೀ ರೂಪ ತಾಳುತ್ತಾನೆ ಉಡುಪಿ ಶ್ರೀಕೃಷ್ಣ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Oct 02, 2025 | 10:40 AM

Share

ಉಡುಪಿ, ಅಕ್ಟೋಬರ್ 2: ದೇವರಿಗೆ ನೂರೆಂಟು ಬಗೆಯ ಅಲಂಕಾರ ಮಾಡುವ ಬಗ್ಗೆ ಕೇಳಿರುತ್ತೀರಿ. ಆದರೆ, ಪುರುಷ ದೇವರನ್ನು ಹೆಣ್ಣಿನ ಸ್ವರೂಪದಲ್ಲಿ, ಅಂದರೆ ಶಕ್ತಿ ಸ್ವರೂಪದಲ್ಲಿ ಪೂಜಿಸುತ್ತಾರೆ ಎಂಬುದು ಗೊತ್ತಿದೆಯಾ? ಉಡುಪಿಯ (Udupi) ಶ್ರೀ ಕೃಷ್ಣನಿಗೆ ನವರಾತ್ರಿಯ ಒಂಭತ್ತು ದಿನವೂ ಹೆಣ್ಣಿನ ಅಲಂಕಾರ ಮಾಡಲಾಗುತ್ತದೆ. ಇದೊಂದು ಅಪರೂಪದ ಪೂಜಾಕ್ರಮ. ಶಕ್ತಿಯ ಆರಾಧನೆಯ ಜೊತೆಗೆ ಅನುಸಂಧಾನ ಮಾಡುವ ಈ ಅಪರೂಪದ ಅಲಂಕಾರಗಳು ಭಕ್ತರಿಗೆ ಹೊಸ ಅನುಭವ ನೀಡುತ್ತದೆ. ಉಡುಪಿ ಕೃಷ್ಣ ಮಠ (Udupi Sri Krishna Matha) ಬಿಟ್ಟರೆ ಬೇರೆಲ್ಲೂ ಈ ಪದ್ಧತಿ ಇಲ್ಲ. ಕೃಷ್ಣನ ಅಲಂಕಾರದಲ್ಲಿ ಹೊಸ ದಾಖಲೆ ಬರೆದ ವಾದಿರಾಜ ಯತಿಗಳ ಕಾಲದಿಂದ ಅಂದರೆ, ಸುಮಾರು ನಾಲ್ಕು ಶತಮಾನಗಳಿಂದ ಈ ಕ್ರಮ ಬೆಳೆದು ಬಂದಿದೆ ಎನ್ನಲಾಗಿದೆ.

ಉಡುಪಿ ಕೃಷ್ಣನಿಗೆ ಪೂಜೆ ಮಾಡುವ ಅಧಿಕಾರ ಕೇವಲ ಯತಿಗಳದ್ದು. ಹಾಗಾಗಿ ಅಲಂಕಾರ ಮಾಡುವ ಜವಾಬ್ದಾರಿಯೂ ಅವರದ್ದೇ. ಉಡುಪಿಯ ಕೃಷ್ಣನನ್ನು ಸ್ವತಃ ವಿಶ್ವಕರ್ಮ ದೇವರು ರುಕ್ಮಿಣೀ ದೇವಿಗೆಂದೇ ತಯಾರಿಸಿಕೊಟ್ಟರು ಎಂಬ ಪೌರಾಣಿಕ ಕಥೆಯಿದೆ. ಹಾಗಾಗಿ ಇದೊಂದು ಬಾಲಕೃಷ್ಣನ ವಿಗ್ರಹ. ಬಾಲರೂಪಿ ಕೃಷ್ಣನಿಗೆ ಏನು ಅಲಂಕಾರ ಮಾಡಿದರೂ ಸೊಗಸೇ ಎಂಬುದು ಭಕ್ತರ ನಂಬಿಕೆ.Udupi Sri Krishna Goddess Alankara

ಐದು ಶತಮಾನಗಳ ಹಿಂದೆ ವಾದಿರಾಜ ಸ್ವಾಮಿಗಳು ಈ ಬಾಲಕೃಷ್ಣನಿಗೆ ಮುನ್ನೂರು ಬಗೆಯ ಅಲಂಕಾರ ಮಾಡಿ ಸಂಭ್ರಮಿಸಿದ್ದರು ಎಂಬ ಇತಿಹಾಸ ಇದೆ. ರೂಪಗಳು ಬೇರೆಯಾದರೂ ಒಳಗಿನ ಶಕ್ತಿಯೊಂದೇ ಎಂಬುದು ಉಡುಪಿ ಕೃಷ್ಣನ ಬಗೆಗಿರುವ ನಂಬಿಕೆ.

Udupi Sri Krishna Goddess Alankara Photo

ಈ ಬಾರಿಯೂ ಪರ್ಯಾಯ ಪುತ್ತಿಗೆ ಮಠಾಧೀಶರು, ಅತ್ಯಂತ ಕಲಾತ್ಮಕವಾಗಿ ಅಲಂಕಾರ ಮಾಡಿದ್ದಾರೆ. ಮಯೂರ ವಾಹಿನಿ ಮಹಾಸರಸ್ವತಿ, ಲಕ್ಷ್ಮಿ ಹೃದಯ, ಮುತ್ತುಲಕ್ಷ್ಮಿ, ಶ್ರೀ ಚಕ್ರ ಲಕ್ಷ್ಮಿ, ರುಕ್ಮಿಣಿ, ನೀರೆ ತೋರೆಲೆ ಹೀಗೆ ಕಡೆಗೋಲು ಕೃಷ್ಣ ದೇವರು ನಾನಾ ರೂಪಗಳಲ್ಲಿ ಕಂಗೊಳಿಸಿದ್ದಾನೆ. ಯಾವುದೇ ಸ್ವರೂಪಕ್ಕೂ ಉಡುಪಿಯ ಕಡೆಗೋಲು ಕೃಷ್ಣನ ವಿಗ್ರಹ ಒಗ್ಗಿಕೊಳ್ಳುತ್ತದೆ ಎಂಬುದು ಇನ್ನೊಂದು ವಿಶೇಷ.

ಇದನ್ನೂ ಓದಿ: ಸುಭದ್ರೆಗಾಗಿ ಸಂಘರ್ಷ:ಉಡುಪಿ ಮಠ-ಹಿರೇಕಲ್ಮಠಗಳ ನಡುವೆ ಆನೆಗಾಗಿ ಹಕ್ಕು ಯುದ್ಧ

ಕೃಷ್ಣ ಸ್ತ್ರೀ ಲೋಲ ಎಂಬ ಮಾತನ್ನು ಕೇಳಿದ್ದೇವೆ. ಆದರೆ ಕೃಷ್ಣ ದೇವರು ಸ್ವತಃ ಶಕ್ತಿ ಸ್ವರೂಪಿಣಿಯಾಗಿ ಕಂಗೊಳಿಸುವ ಅಪರೂಪದ ಅವತಾರಗಳನ್ನು ನವರಾತ್ರಿ ಮಾತ್ರವಲ್ಲದೆ ಪ್ರತಿ ಶುಕ್ರವಾರವೂ ಉಡುಪಿಯ ಶ್ರೀಕೃಷ್ಣಮಠದಲ್ಲಿ ನೀವು ಕಾಣಬಹುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್