AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಕಾಣದ ಗ್ರಾಮ, ಗ್ರಾ.ಪಂ ಸಂಪೂರ್ಣ ವಿಫಲ: ಗ್ರಾಮಸ್ಥರು ಕೊಟ್ಟ ಎಚ್ಚರಿಕೆ ಏನು?

ಉಡುಪಿ: ಸರಕಾರದಿಂದ ಬರುವ ಅನುದಾನವನ್ನು ಬಳಸಿ ಗ್ರಾಮದ ಅಭಿವೃದ್ಧಿ ಪಡಿಸುವಲ್ಲಿ ಗ್ರಾಮ ಪಂಚಾಯತಿ ಸಂಪೂರ್ಣ ವಿಫಲವಾಗಿದೆ ಎಂದು ಗ್ರಾಮಸ್ಥರು ಉಚ್ಚಿಲ ಬಡಾ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ಗ್ರಾಮದ ಅಭಿವೃದ್ದಿಗಾಗಿ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ನೀಡಿದ ಮನವಿಗಳು ಮೂಲೆ ಸೇರಿವೆ. ಮೂಲಭೂತ ಸೌಕರ್ಯ ನೀಡುವಲ್ಲಿ ಎಡವಿದ ಗ್ರಾ.ಪಂ: ಅಧಿಕಾರಿಗಳು ಕೊಟ್ಟ ಯಾವ ಭರವಸೆಗಳು ಕೂಡ ಇದುವರೆಗೆ ಈಡೆರಲೇ ಇಲ್ಲ. ಇಲ್ಲಿನ ಗ್ರಾಮಸ್ಥರು ಇಂದಿಗೂ ಸಮಸ್ಯೆಗಳ ಸರಮಾಲೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. […]

ಅಭಿವೃದ್ಧಿ ಕಾಣದ ಗ್ರಾಮ, ಗ್ರಾ.ಪಂ ಸಂಪೂರ್ಣ ವಿಫಲ: ಗ್ರಾಮಸ್ಥರು ಕೊಟ್ಟ ಎಚ್ಚರಿಕೆ ಏನು?
ಆಯೇಷಾ ಬಾನು
ಆಯೇಷಾ ಬಾನು|

Updated on:Jun 02, 2020 | 7:28 PM

Share

ಉಡುಪಿ: ಸರಕಾರದಿಂದ ಬರುವ ಅನುದಾನವನ್ನು ಬಳಸಿ ಗ್ರಾಮದ ಅಭಿವೃದ್ಧಿ ಪಡಿಸುವಲ್ಲಿ ಗ್ರಾಮ ಪಂಚಾಯತಿ ಸಂಪೂರ್ಣ ವಿಫಲವಾಗಿದೆ ಎಂದು ಗ್ರಾಮಸ್ಥರು ಉಚ್ಚಿಲ ಬಡಾ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ಗ್ರಾಮದ ಅಭಿವೃದ್ದಿಗಾಗಿ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ನೀಡಿದ ಮನವಿಗಳು ಮೂಲೆ ಸೇರಿವೆ.

ಮೂಲಭೂತ ಸೌಕರ್ಯ ನೀಡುವಲ್ಲಿ ಎಡವಿದ ಗ್ರಾ.ಪಂ: ಅಧಿಕಾರಿಗಳು ಕೊಟ್ಟ ಯಾವ ಭರವಸೆಗಳು ಕೂಡ ಇದುವರೆಗೆ ಈಡೆರಲೇ ಇಲ್ಲ. ಇಲ್ಲಿನ ಗ್ರಾಮಸ್ಥರು ಇಂದಿಗೂ ಸಮಸ್ಯೆಗಳ ಸರಮಾಲೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಮೂಲಭೂತ ಸೌಕರ್ಯ ನೀಡುವಲ್ಲಿ ಇಲ್ಲಿನ ಅಧಿಕಾರಿಗಳು ಸೋತಿದ್ದಾರೆ. ಮಳೆಗಾಲಕ್ಕೆ ಪೂರ್ವಭಾವಿಯಾಗಿ ಆಗಬೇಕಿದ್ದ ಚರಂಡಿ ನಿರ್ಮಾಣ, ನಿರ್ವಹಣೆ ಕಾಮಗಾರಿ ನಡೆಯುತ್ತಿಲ್ಲ.

ಜೋರಾಗಿ ಮಳೆ ಬಂತೆಂದರೆ ರಸ್ತೆಯಲ್ಲೇ ಕೆಂಪು ಮಣ್ಣು ಮಿಶ್ರಿತ ಮಳೆ ನೀರು ಹರಿದು ಬರುತ್ತಿದ್ದು, ಸಾರ್ವಜನಿಕರು ಇದರ ಪರಿಣಾಮ ಎದುರಿಸಬೇಕಾಗಿದೆ. ಗ್ರಾಮದ ಅತಿದೊಡ್ಡ ಕೆರೆ ಎನ್ನುವ ಸುಮಾರು 13 ಎಕರೆ ಜಾಗ ಹೊಂದಿರುವ ಕಟ್ಟಿಂಗೇರಿ ಕೆರೆ ಅಭಿವೃದ್ಧಿ ಕಾಣದೆ ನಿಷ್ಪ್ರಯೋಜಕ ಎನಿಸಿದೆ. ಗ್ರಾಮದಲ್ಲಿ ವ್ಯವಸ್ಥಿತವಾದ ಮೀನು ಮಾರುಕಟ್ಟೆ ಇಲ್ಲದೆ ವಂಚಿತರಾದ ಮೀನು ಮಾರಾಟಗಾರರು ರಸ್ತೆಯ ಪಕ್ಕದಲ್ಲಿ ಮೀನು ಮಾರುವಂತಾಗಿದೆ. ತ್ಯಾಜ್ಯ ವಿಲೇವಾರಿಗೆ ಸಮರ್ಪಕವಾದ ವ್ಯವಸ್ಥೆಗಳಿಲ್ಲದೆ ಜನ ಅಲ್ಲಲ್ಲಿ ತ್ಯಾಜ್ಯ ಎಸೆಯುತ್ತಿದ್ದು, ಕೆಲವೆಡೆ ತ್ಯಾಜ್ಯಕ್ಕೆ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿವೆ.

ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರ ಎಚ್ಚರಿಕೆ: ಗ್ರಾಮದ ನಾಲ್ಕನೇ ವಾರ್ಡಿನಲ್ಲಿರುವ ಯುವಕ ಮಂಡಳಿ ವಾರಸುದಾರರಿಲ್ಲದೆ ಪಾಳುಬಿದ್ದು ಜಾನುವಾರುಗಳಿಗೆ ಮನೆಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ‌ವ್ಯಕ್ತಪಡಿಸಿದ್ದಾರೆ. ಸಂಪೂರ್ಣವಾಗಿ ಅಭಿವೃದ್ಧಿಯಲ್ಲಿ ವಿಫಲತೆ ಕಂಡಿರುವ ಈ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯದ ವ್ಯವಸ್ಥೆಯೂ ಇಲ್ಲ. ಒಂದು ವೇಳೆ ಸಮಸ್ಯೆ ಬಗ್ಗೆ ಕೂಡಲೇ ಸ್ಪಂದನೆ ದೊರಕದಿದ್ದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುವುದಾಗಿ ಗ್ರಾಮದ ಜನ ಎಚ್ಚರಿಕೆ ನೀಡಿದ್ದಾರೆ.

Published On - 6:55 pm, Tue, 2 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ