AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಕಾಣದ ಗ್ರಾಮ, ಗ್ರಾ.ಪಂ ಸಂಪೂರ್ಣ ವಿಫಲ: ಗ್ರಾಮಸ್ಥರು ಕೊಟ್ಟ ಎಚ್ಚರಿಕೆ ಏನು?

ಉಡುಪಿ: ಸರಕಾರದಿಂದ ಬರುವ ಅನುದಾನವನ್ನು ಬಳಸಿ ಗ್ರಾಮದ ಅಭಿವೃದ್ಧಿ ಪಡಿಸುವಲ್ಲಿ ಗ್ರಾಮ ಪಂಚಾಯತಿ ಸಂಪೂರ್ಣ ವಿಫಲವಾಗಿದೆ ಎಂದು ಗ್ರಾಮಸ್ಥರು ಉಚ್ಚಿಲ ಬಡಾ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ಗ್ರಾಮದ ಅಭಿವೃದ್ದಿಗಾಗಿ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ನೀಡಿದ ಮನವಿಗಳು ಮೂಲೆ ಸೇರಿವೆ. ಮೂಲಭೂತ ಸೌಕರ್ಯ ನೀಡುವಲ್ಲಿ ಎಡವಿದ ಗ್ರಾ.ಪಂ: ಅಧಿಕಾರಿಗಳು ಕೊಟ್ಟ ಯಾವ ಭರವಸೆಗಳು ಕೂಡ ಇದುವರೆಗೆ ಈಡೆರಲೇ ಇಲ್ಲ. ಇಲ್ಲಿನ ಗ್ರಾಮಸ್ಥರು ಇಂದಿಗೂ ಸಮಸ್ಯೆಗಳ ಸರಮಾಲೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. […]

ಅಭಿವೃದ್ಧಿ ಕಾಣದ ಗ್ರಾಮ, ಗ್ರಾ.ಪಂ ಸಂಪೂರ್ಣ ವಿಫಲ: ಗ್ರಾಮಸ್ಥರು ಕೊಟ್ಟ ಎಚ್ಚರಿಕೆ ಏನು?
ಆಯೇಷಾ ಬಾನು
|

Updated on:Jun 02, 2020 | 7:28 PM

Share

ಉಡುಪಿ: ಸರಕಾರದಿಂದ ಬರುವ ಅನುದಾನವನ್ನು ಬಳಸಿ ಗ್ರಾಮದ ಅಭಿವೃದ್ಧಿ ಪಡಿಸುವಲ್ಲಿ ಗ್ರಾಮ ಪಂಚಾಯತಿ ಸಂಪೂರ್ಣ ವಿಫಲವಾಗಿದೆ ಎಂದು ಗ್ರಾಮಸ್ಥರು ಉಚ್ಚಿಲ ಬಡಾ ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವು ವರ್ಷಗಳಿಂದ ಗ್ರಾಮದ ಅಭಿವೃದ್ದಿಗಾಗಿ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ನೀಡಿದ ಮನವಿಗಳು ಮೂಲೆ ಸೇರಿವೆ.

ಮೂಲಭೂತ ಸೌಕರ್ಯ ನೀಡುವಲ್ಲಿ ಎಡವಿದ ಗ್ರಾ.ಪಂ: ಅಧಿಕಾರಿಗಳು ಕೊಟ್ಟ ಯಾವ ಭರವಸೆಗಳು ಕೂಡ ಇದುವರೆಗೆ ಈಡೆರಲೇ ಇಲ್ಲ. ಇಲ್ಲಿನ ಗ್ರಾಮಸ್ಥರು ಇಂದಿಗೂ ಸಮಸ್ಯೆಗಳ ಸರಮಾಲೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಮೂಲಭೂತ ಸೌಕರ್ಯ ನೀಡುವಲ್ಲಿ ಇಲ್ಲಿನ ಅಧಿಕಾರಿಗಳು ಸೋತಿದ್ದಾರೆ. ಮಳೆಗಾಲಕ್ಕೆ ಪೂರ್ವಭಾವಿಯಾಗಿ ಆಗಬೇಕಿದ್ದ ಚರಂಡಿ ನಿರ್ಮಾಣ, ನಿರ್ವಹಣೆ ಕಾಮಗಾರಿ ನಡೆಯುತ್ತಿಲ್ಲ.

ಜೋರಾಗಿ ಮಳೆ ಬಂತೆಂದರೆ ರಸ್ತೆಯಲ್ಲೇ ಕೆಂಪು ಮಣ್ಣು ಮಿಶ್ರಿತ ಮಳೆ ನೀರು ಹರಿದು ಬರುತ್ತಿದ್ದು, ಸಾರ್ವಜನಿಕರು ಇದರ ಪರಿಣಾಮ ಎದುರಿಸಬೇಕಾಗಿದೆ. ಗ್ರಾಮದ ಅತಿದೊಡ್ಡ ಕೆರೆ ಎನ್ನುವ ಸುಮಾರು 13 ಎಕರೆ ಜಾಗ ಹೊಂದಿರುವ ಕಟ್ಟಿಂಗೇರಿ ಕೆರೆ ಅಭಿವೃದ್ಧಿ ಕಾಣದೆ ನಿಷ್ಪ್ರಯೋಜಕ ಎನಿಸಿದೆ. ಗ್ರಾಮದಲ್ಲಿ ವ್ಯವಸ್ಥಿತವಾದ ಮೀನು ಮಾರುಕಟ್ಟೆ ಇಲ್ಲದೆ ವಂಚಿತರಾದ ಮೀನು ಮಾರಾಟಗಾರರು ರಸ್ತೆಯ ಪಕ್ಕದಲ್ಲಿ ಮೀನು ಮಾರುವಂತಾಗಿದೆ. ತ್ಯಾಜ್ಯ ವಿಲೇವಾರಿಗೆ ಸಮರ್ಪಕವಾದ ವ್ಯವಸ್ಥೆಗಳಿಲ್ಲದೆ ಜನ ಅಲ್ಲಲ್ಲಿ ತ್ಯಾಜ್ಯ ಎಸೆಯುತ್ತಿದ್ದು, ಕೆಲವೆಡೆ ತ್ಯಾಜ್ಯಕ್ಕೆ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿವೆ.

ಗ್ರಾಮ ಪಂಚಾಯಿತಿಗೆ ಗ್ರಾಮಸ್ಥರ ಎಚ್ಚರಿಕೆ: ಗ್ರಾಮದ ನಾಲ್ಕನೇ ವಾರ್ಡಿನಲ್ಲಿರುವ ಯುವಕ ಮಂಡಳಿ ವಾರಸುದಾರರಿಲ್ಲದೆ ಪಾಳುಬಿದ್ದು ಜಾನುವಾರುಗಳಿಗೆ ಮನೆಯಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ‌ವ್ಯಕ್ತಪಡಿಸಿದ್ದಾರೆ. ಸಂಪೂರ್ಣವಾಗಿ ಅಭಿವೃದ್ಧಿಯಲ್ಲಿ ವಿಫಲತೆ ಕಂಡಿರುವ ಈ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯದ ವ್ಯವಸ್ಥೆಯೂ ಇಲ್ಲ. ಒಂದು ವೇಳೆ ಸಮಸ್ಯೆ ಬಗ್ಗೆ ಕೂಡಲೇ ಸ್ಪಂದನೆ ದೊರಕದಿದ್ದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುವುದಾಗಿ ಗ್ರಾಮದ ಜನ ಎಚ್ಚರಿಕೆ ನೀಡಿದ್ದಾರೆ.

Published On - 6:55 pm, Tue, 2 June 20

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?