AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore Rains: ಮಂಗಳೂರಿನ ಕೋಟೆಕಾರಿನಲ್ಲಿ ಒಂದೇ ದಿನ 245 ಮಿಮೀ ಮಳೆ, ಕರಾವಳಿ ಕರ್ನಾಟಕದಲ್ಲಿ ವರ್ಷಧಾರೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಹತ್ತು ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

Mangalore Rains: ಮಂಗಳೂರಿನ ಕೋಟೆಕಾರಿನಲ್ಲಿ ಒಂದೇ ದಿನ 245 ಮಿಮೀ ಮಳೆ, ಕರಾವಳಿ ಕರ್ನಾಟಕದಲ್ಲಿ ವರ್ಷಧಾರೆ ಸಾಧ್ಯತೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jun 29, 2023 | 4:22 PM

Share

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಬುಧವಾರ ಭಾರೀ ಮಳೆಯಾಗಿದ್ದು, ಮಂಗಳೂರಿನ (Mangaluru) ಕೋಟೆಕಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೇ ದಿನ ಗರಿಷ್ಠ 245 ಮಿಮೀ ಮಳೆಯಾಗಿದೆ. ಕರಾವಳಿಯ ಜಿಲ್ಲೆಗಳಾದ (Coastal Karnataka) ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಂಗಳವಾರ ರಾತ್ರಿಯಿಂದ ಮಳೆ ಸುರಿದಿದ್ದು, ಬುಧವಾರ ಬೆಳಗಿನ ಜಾವದವರೆಗೂ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 169 ಮಿಮೀ ಮಳೆಯಾಗಿದ್ದರೆ, ಉತ್ತರ ಕನ್ನಡದಲ್ಲಿ 122 ಮಿಮೀ ಮತ್ತು ಉಡುಪಿಯಲ್ಲಿ 123 ಮಿಮೀ ಗಿಂತ ಹೆಚ್ಚು ಮಳೆ ದಾಖಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಹತ್ತು ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಜೂನ್ 1-27 ರವರೆಗೆ ಕರಾವಳಿ ಪ್ರದೇಶಗಳಲ್ಲಿ 263 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ದತ್ತಾಂಶಗಳಿಂದ ತಿಳಿದುಬಂದಿದೆ. ಈ ಅವಧಿಯಲ್ಲಿ ಶೇ 67ರಷ್ಟು ಮಳೆ ಕೊರತೆಯಾಗಿದೆ ಎಂಬುದು ತಿಳಿದುಬಂದಿದೆ.

ಇಂದು (ಗುರುವಾರ) ಮತ್ತು ಶುಕ್ರವಾರ ರಾಜ್ಯದಾದ್ಯಂತ ಅನೇಕ ಕಡೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಡಿವೈಡರ್​ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಅಪ್ರಾಪ್ತರು ದುರ್ಮರಣ, ಲಾಡ್ಜ್​ನಲ್ಲಿ ನೇಣಿಗೆ ಶರಣಾದ ಯುವಕ

ಉತ್ತರ ಕನ್ನಡದ ಕಾರವಾರ ತಾಲೂಕಿನ ಅಮದಳ್ಳಿಯಲ್ಲಿ ಅತಿ ಹೆಚ್ಚು ಅಂದರೆ 181ಮಿಮೀ ಮಳೆಯಾಗಿದ್ದು, ಭಟ್ಕಳ ತಾಲೂಕಿನ ಮಾವಿನಕುರ್ವೆಯಲ್ಲಿ ಅತಿ ಕಡಿಮೆ ಅಂದರೆ 122 ಮಿಮೀ ಮಳೆಯಾಗಿದೆ. ಉಡುಪಿಯಲ್ಲಿ ಅತಿ ಹೆಚ್ಚು ಅಂದರೆ, ಪಡುಬಿದ್ರಿಯಲ್ಲಿ 155 ಮಿಮೀ ಮಳೆಯಾಗಿದ್ದು, ಪಾಂಡೇಶ್ವರದಲ್ಲಿ ಕನಿಷ್ಠ 123 ಮಿಮೀ ಮಳೆಯಾಗಿದೆ.

ಕೆಎಸ್‌ಎನ್‌ಎಂಡಿಸಿ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಮೂಡುಬಿದಿರೆ ಮತ್ತು ಕಡಬ ತಾಲೂಕುಗಳು, ಕುಂದಾಪುರ, ಉಡುಪಿ, ಬೈಂದೂರು, ಬ್ರಹ್ಮಾವರ, ಕಾಪು ಮತ್ತು ಉಡುಪಿ ಜಿಲ್ಲೆಯ ಹೆಬ್ರಿ ಮತ್ತು ಅಂಕೋಲಾ, ಭಟ್ಕಳ ತಾಲೂಕುಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ