AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಹಿಜಬ್ ಕೂಡ ಮುಖ್ಯ ಶಿಕ್ಷಣ ಕೂಡ ಅಷ್ಟೇ ಮುಖ್ಯ: ಉಡುಪಿಯಲ್ಲಿ ಹಿಜಬ್​ಗಾಗಿ ತರಗತಿ ಬಹಿಷ್ಕಾರ ಮುಂದುವರಿಕೆ

ಉಡುಪಿಯಲ್ಲಿ ಹಿಜಬ್ ಗಾಗಿ ತರಗತಿ ಬಹಿಷ್ಕಾರ ಮುಂದುವರೆದಿದೆ. ಹಿಜಬ್ ನಮ್ಮ ಧಾರ್ಮಿಕ ಹಕ್ಕು, ಹಿಜಬ್ ಧರಿಸಿ ತರಗತಿಯಲ್ಲಿ ಕುಳಿತು ಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಮುಸಲ್ಮಾನ ವಿದ್ಯಾರ್ಥಿನೀಯರಿಂದ ಪ್ರತಿಭಟನೆ.

ನಮಗೆ ಹಿಜಬ್ ಕೂಡ ಮುಖ್ಯ ಶಿಕ್ಷಣ ಕೂಡ ಅಷ್ಟೇ ಮುಖ್ಯ: ಉಡುಪಿಯಲ್ಲಿ ಹಿಜಬ್​ಗಾಗಿ ತರಗತಿ ಬಹಿಷ್ಕಾರ ಮುಂದುವರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 20, 2022 | 4:00 PM

Share

ಉಡುಪಿ: ಉಡುಪಿಯಲ್ಲಿ ಹಿಜಬ್ ಗಾಗಿ ತರಗತಿ ಬಹಿಷ್ಕಾರ ಮುಂದುವರೆದಿದೆ. ಹಿಜಬ್ ನಮ್ಮ ಧಾರ್ಮಿಕ ಹಕ್ಕು, ಹಿಜಬ್ ಧರಿಸಿ ತರಗತಿಯಲ್ಲಿ ಕುಳಿತು ಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಪ್ರತಿಭಟನಾನಿರತ ಮುಸಲ್ಮಾನ ವಿದ್ಯಾರ್ಥಿನೀಯರು ಹೇಳಿದರು. ನಗರದ ಮಹಿಳಾ ಸರ್ಕಾರಿ ಪಿಯು ಕಾಲೇಜ್ ಮುಂದೆ ಪ್ಲೇ ಕಾರ್ಡ್ ಹಿಡಿದು ವಿದ್ಯಾರ್ಥಿನೀಯರು ಪ್ರತಿಭಟಿಸಿದರು.

ಮಹಿಳಾ ಕಾಲೇಜ್ ಆದರೂ ಪುರುಷ ಪ್ರಾಧ್ಯಾಪಕರು ಇದ್ದಾರೆ. ಕಾರ್ಯಕ್ರಮ ನಡೆಯುವ ವೇಳೆ ಹಲವಾರು ಪುರುಷ ಅತಿಥಿಗಳು ಕಾಲೇಜಿಗೆ ಬರುತ್ತಾರೆ. ನಾವು ಯಾರ ಮುಂದೆ ಹಿಜಬ್ ಇಲ್ಲದೆ ಓಡಾಡುವ ಹಾಗಿಲ್ಲ. ನಮಗೆ ಹಿಜಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳುವ ಅವಕಾಶ ಮಾಡಿಕೊಡಿ. ನಮಗೆ ಹಿಜಬ್ ಕೂಡ ಮುಖ್ಯ ಶಿಕ್ಷಣ ಕೂಡ ಅಷ್ಟೇ ಮುಖ್ಯ ಮುಖ್ಯವೆಂದು ಪ್ರತಿಭಟನಾನಿರತ ಮುಸಲ್ಮಾನ ವಿದ್ಯಾರ್ಥಿನೀಯರು ಹೇಳುತ್ತಿದ್ದಾರೆ.

ಹಿಜಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳುವ ಅವಕಾಶ ಮಾಡಿಕೊಡಿ ಎಂದು ಮುಸ್ಲಿಂ ಸಮುದಾಯದ 8ಮಂದಿ ವಿದ್ಯಾರ್ಥಿನಿಯರಿಂದ ತರಗತಿ ಬಹಿಷ್ಕಾರ ನಡೆದಿದೆ. ಡಿಸೆಂಬರ್ 27ರಿಂದ ವಿದ್ಯಾರ್ಥಿನೀಯರು ಹೊರಗೆ ಉಳಿದಿದ್ದಾರೆ. ಹಿಜಬ್ ಧರಿಸಿ ಕ್ಲಾಸ್ ಗೆ ಬರಲು ಅವಕಾಶ ನೀಡದ ಕಾಲೇಜು ಸಮವಸ್ತ್ರ ಪಾಲಿಸುವಂತೆ ಪಟ್ಟು ಹಿಡಿದಿದೆ. ಇನ್ನೂ ಈ ಕುರಿತಾಗಿ ಕಾಲೇಜಿನ ಪ್ರಾಂಶುಪಾಲರು ಪದವಿಪೂರ್ವ ಬೋರ್ಡ್ ಗೆ ಪತ್ರ ಬರೆದಿದ್ದು, ಪಿಯು ಬೋರ್ಡ್ ನಿರ್ದೇಶಕರ ಉತ್ತರಕ್ಕಾಗಿ  ಇಡೀ ಆಡಳಿತ ಮಂಡಳಿ ಕಾಯುತ್ತಿದೆ.

ಇದನ್ನು ಓದಿ:

ಮಂಡ್ಯ ನಗರದ ಪೊಲೀಸರಿಂದ ಅಮಾನವೀಯ ನಡೆ; ಮಹಿಳೆ ಅಸ್ವಸ್ಥ

ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ; ವಿಚಾರಣೆ ಜನವರಿ 31ಕ್ಕೆ‌ ಮುಂದೂಡಿದ ಹೈಕೋರ್ಟ್

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ