AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭಾ ಚುನಾವಣೆ ಗಮನದಲ್ಲಿರಿಸಿ ಹಿಜಾಬ್ ವಿವಾದ ಸೃಷ್ಟಿಸಲಾಗಿದೆ: ಎಸ್​ಡಿಪಿಐನ ಅತಾವುಲ್ಲಾ ಜೋಕಟ್ಟೆ ಹೇಳಿಕೆ

ಹಿಜಾಬ್, ಕೇಸರಿ ಶಾಲು ವಿವಾದದ ಬಗ್ಗೆ ತನಿಖೆಯಾಗಬೇಕು. ಮುಂದಿನ ವಿಧಾನಸಭಾ ಚುನಾವಣೆ ಗಮನದಲ್ಲಿರಿಸಿ ವಿವಾದ ಸೃಷ್ಟಿ ಮಾಡಲಾಗಿದೆ. ಇದೀಗ ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದೆ ಎಂದು ಅತಾವುಲ್ಲಾ ಜೋಕಟ್ಟೆ ಹೇಳಿದ್ದಾರೆ.

ವಿಧಾನಸಭಾ ಚುನಾವಣೆ ಗಮನದಲ್ಲಿರಿಸಿ ಹಿಜಾಬ್ ವಿವಾದ ಸೃಷ್ಟಿಸಲಾಗಿದೆ: ಎಸ್​ಡಿಪಿಐನ ಅತಾವುಲ್ಲಾ ಜೋಕಟ್ಟೆ ಹೇಳಿಕೆ
ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
TV9 Web
| Updated By: ganapathi bhat|

Updated on: Feb 11, 2022 | 2:42 PM

Share

ಉಡುಪಿ: ನಾವು ಯಾವುದೇ ಧರ್ಮವನ್ನು ಆಧರಿಸಿ ಪಕ್ಷವನ್ನು ಕಟ್ಟಿಲ್ಲ. ಎಸ್​ಡಿಪಿಐ ಸ್ಥಾಪಿಸಿದವರು ಮುಸಲ್ಮಾನ ಆಗಿರಬಹುದು. ಆದರೆ ನಮ್ಮ ಪಕ್ಷದಲ್ಲಿ ಕ್ರೈಸ್ತರು, ಹಿಂದುಳಿದವರು ಇದ್ದಾರೆ. ಪ್ರಜಾಪ್ರಭುತ್ವ ದೇಶವಾಗಿರಬೇಕೆನ್ನುವ ನಿಟ್ಟಿನಲ್ಲಿ ಸಂಘಟನೆ ಇದೆ. ಹಿಂದುಳಿದವರು, ಅಲ್ಪಸಂಖ್ಯಾತರಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಉಡುಪಿಯಲ್ಲಿ ಎಸ್​ಡಿಪಿಐ ಸದಸ್ಯ ಅತಾವುಲ್ಲಾ ಜೋಕಟ್ಟೆ ಶುಕ್ರವಾರ ಹೇಳಿಕೆ ನೀಡಿದ್ದಾರೆ.

ನಮ್ಮ ವಿರುದ್ಧ ಶಾಸಕ ರಘುಪತಿ ಭಟ್​ ಆರೋಪ ನಿರಾಧಾರ ಆಗಿದೆ. ಶಾಲೆಯ ಆರಂಭದಿಂದಲೂ ಹಿಜಾಬ್ ಧರಿಸಿ ಹೋಗುತ್ತಿದ್ದರು. ಆದರೆ, ಈಗ ಪರೀಕ್ಷೆ ಸಂದರ್ಭದಲ್ಲಿ ಕೇಸರಿ ಧರಿಸಿ ಸಮಸ್ಯೆ ಸೃಷ್ಟಿಸಿದ್ಯಾರು? ಇದು ರಘುಪತಿ ಭಟ್, ಸಂಘ ಪರಿವಾರದವರ ಷಡ್ಯಂತ್ರ. ಹಿಜಾಬ್, ಕೇಸರಿ ಶಾಲು ವಿವಾದದ ಬಗ್ಗೆ ತನಿಖೆಯಾಗಬೇಕು. ಮುಂದಿನ ವಿಧಾನಸಭಾ ಚುನಾವಣೆ ಗಮನದಲ್ಲಿರಿಸಿ ವಿವಾದ ಸೃಷ್ಟಿ ಮಾಡಲಾಗಿದೆ. ಇದೀಗ ಹೈಕೋರ್ಟ್​ ಮಧ್ಯಂತರ ಆದೇಶ ನೀಡಿದೆ ಎಂದು ಅತಾವುಲ್ಲಾ ಜೋಕಟ್ಟೆ ಹೇಳಿದ್ದಾರೆ.

ಹೈಕೋರ್ಟ್​ನ ಅಂತಿಮ ತೀರ್ಪಿಗಾಗಿ ಕಾಯುತ್ತಿದ್ದೇವೆ. ಹೈಕೋರ್ಟ್, ಸುಪ್ರೀಂಕೋರ್ಟ್​ ಮೇಲೆ ನಮಗೆ ಗೌರವವಿದೆ. ಹೈಕೋರ್ಟ್​ ನಮಗೆ ನ್ಯಾಯ ಒದಗಿಸುವ ಆಶಾಭಾವನೆಯಿದೆ. ಯಾವುದೇ ಧಾರ್ಮಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ಸರಿಯಲ್ಲ. ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾರಿಗೆ ಹಕ್ಕು ನೀಡಿದೆ. ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯ ಕಸಿಯುವ ಹಕ್ಕು ಇಲ್ಲ. ಧಾರ್ಮಿಕ ಸ್ವಾತಂತ್ರ್ಯ ಕಸಿಯುವುದಕ್ಕೆ ಎಸ್​ಡಿಪಿಐ ವಿರೋಧವಿದೆ ಎಂದು ಎಸ್​ಡಿಪಿಐ ರಾಜ್ಯ ಸಮಿತಿ ಸದಸ್ಯ ಅತಾವುಲ್ಲಾ ಜೋಕಟ್ಟೆ ತಿಳಿಸಿದ್ದಾರೆ.

ಈಗ ಬಂದಿರುವುದು ಮಧ್ಯಂತರ ಆದೇಶವಷ್ಟೆ. ಅದು ಸಂಪೂರ್ಣ ತೀರ್ಪಲ್ಲ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಬಗ್ಗೆ ನಮಗೆ ಗೌರವವಿದೆ. ಕೋರ್ಟ್​ನ ನಿರ್ಣಯದ ಬಗ್ಗೆ ಆಶಾಭಾವವಿದೆ. ದೇಶದಲ್ಲಿ ಸಂವಿಧಾನವಿದೆ. ಸಂವಿಧಾನದಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಲಾಗಿದೆ. ಈ ನಿಟ್ಟಿನಲ್ಲಿ ಹೈಕೋರ್ಟ್ ಕೂಡ ನಮಗೆ ನ್ಯಾಯ ಒದಗಿಸಲಿದೆ ಎನ್ನುವ ಆಶಾಭಾವವಿದೆ. ಬಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಪ್ರತಿಯೊಂದು ಜಾತಿ ಧರ್ಮಕ್ಕೂ ಹಕ್ಕನ್ನು ನೀಡಲಾಗಿದೆ. ಸಂವಿಧಾನ ನೀಡಿದ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಹಕ್ಕು ಯಾರಿಗೂ ಕೂಡ ಇಲ್ಲ. ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವುದಕ್ಕೆ ಎಸ್​ಡಿಪಿಐ ವಿರೋಧ ವ್ಯಕ್ತಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಅವಕಾಶ ನಿರಾಕರಣೆ; ಬೀದರ್‌ನ ಬ್ರಿಮ್ಸ್‌ ಕಾಲೇಜಿನ ವಿಡಿಯೋ ವೈರಲ್

ಇದನ್ನೂ ಓದಿ: ಸೂಕ್ತ ಸಮಯ ಬಂದಾಗ ನಾವು ಮಧ್ಯ ಪ್ರವೇಶಿಸುತ್ತೇವೆ; ಹಿಜಾಬ್ ವಿವಾದದ ಕುರಿತು ತುರ್ತು ವಿಚಾರಣೆ ಅಸಾಧ್ಯ ಎಂದ ಸುಪ್ರೀಂ ಕೋರ್ಟ್​

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ