ಮೀನುಗಾರಿಕೆ ವಿಚಾರದಲ್ಲಿ ಗಲಾಟೆ; ಮೊಗವೀರ ಹಾಗೂ ಶಿಳ್ಳೆಕ್ಯಾತ ಅಲೆಮಾರಿ ಬೆಸ್ತರ ನಡುವೆ ಮಾರಾಮಾರಿ

ಸಮುದ್ರ ಮತ್ತು ನದಿಯಲ್ಲಿ ಕಸುಬು ಮಾಡುವ ಸಾಹಸಿಗಳ ನಡುವೆ ವೈಷಮ್ಯ ಏರ್ಪಟ್ಟಿದೆ. ಕರಾವಳಿಯ ಮೊಗವೀರ ಮತ್ತು ಮಲೆನಾಡ ಅಲೆಮಾರಿ ಬೆಸ್ತರು ನಡುವೆ ಕಲಹ ನಡೆದಿದೆ. ಮಾತಿಗೆ ಮಾತು ಬೆಳೆದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನಮಗೆ ಕೂಲಿ ಮಾಡಲು ಅವಕಾಶ ಕೊಟ್ಟು ಬದುಕಲು ಬಿಡಿ ಎಂದು ಉಡುಪಿ ಜಿಲ್ಲಾಡಳಿತದ ಮುಂದೆ ಶಿಳ್ಳೆಕ್ಯಾತರು ಬೇಡಿಕೆಯಿಟ್ಟಿದ್ದಾರೆ. ಏನಾಗಿದೆ ಅಂತೀರಾ? ಈ ಸ್ಟೋರಿ ಓದಿ.

ಮೀನುಗಾರಿಕೆ ವಿಚಾರದಲ್ಲಿ ಗಲಾಟೆ; ಮೊಗವೀರ ಹಾಗೂ ಶಿಳ್ಳೆಕ್ಯಾತ ಅಲೆಮಾರಿ ಬೆಸ್ತರ ನಡುವೆ ಮಾರಾಮಾರಿ
ಮೊಗವೀರ ಹಾಗೂ ಶಿಳ್ಳೆಕ್ಯಾತ ಅಲೆಮಾರಿ ಬೆಸ್ತರ ನಡುವೆ ಮಾರಾಮಾರಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 20, 2024 | 6:03 PM

ಉಡುಪಿ, ಜೂ.20: ಸ್ಥಳಿಯ ಮೊಗವೀರ(Mogaveera) ಸಮುದಾಯದವರು, ಶಿಳ್ಳೆಕ್ಯಾತ(Sillekyatha)ರ ಅಲೆಮಾರಿ ಜನಾಂಗದ ಜೊತೆ ಕ್ಯಾತೆ ತೆಗೆದು ಜಗಳವಾಡಿದ್ದಾರೆ. ಈ ವೇಳೆ ಅಲೆಮಾರಿಗಳು ಗಾಯಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾರೆ. ಗುಲ್ವಾಡಿ ಹೊಳೆಯಲ್ಲಿ ಕಳೆದ 10 ರಿಂದ 20 ವರ್ಷಗಳಿಂದ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯದ ಐದಾರು ಕುಟುಂಬಗಳು ಮೀನು ಹಿಡಿದು ಜೀವನ ನಡೆಸುತ್ತಿದೆ. ನದಿ ಮತ್ತು ಹೊಳೆಯ ತೀರದಲ್ಲಿ ಸಣ್ಣಪುಟ್ಟ ಬಲೆಗಳನ್ನು ಹಾಕಿ ದಿನಗೂಲಿಯನ್ನು ದುಡಿಯುತ್ತಾರೆ. ಇದೇ ವಿಚಾರಕ್ಕೆ ಸ್ಥಳೀಯ ಮೊಗವೀರ ಹಾಗೂ ಶಿಳ್ಳೆಕ್ಯಾತರ ಸಮುದಾಯದ ನಡುವೆ ಜಗಳ ಶುರುವಾಗಿದೆ.

ಹಲವಾರು ವರ್ಷಗಳಿಂದ ಜಗಳ ಹೊಡೆದಾಟಗಳು ನಡೆಯುತ್ತಾ ಬಂದಿದೆ. ಈವರೆಗೆ ವಿಕೋಪಕ್ಕೆ ಹೋಗಿರಲಿಲ್ಲ. ಆದರೆ, ಕಳೆದ ವಾರ ದೊಡ್ಡ ಮಾರಾ ಮಾರಿಯೇ ನಡೆದುಬಿಟ್ಟಿದೆ. ಸುಮಾರು 25 ಜನ ಗಂಗೊಳ್ಳಿ ಭಾಗದ ಮೀನುಗಾರರು ತೆಪ್ಪಗಳಿಗೆ ದಾಳಿ ಮಾಡಿ, ಮಹಿಳೆಯರು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇನ್ನು ಮುಂದೆ ನದಿಗೆ ಇಳಿಯಬಾರದು, ಕಸುಬು ನಡೆಸಬಾರದು ಎಂದು ತಾಕೀತು ಮಾಡಿದ್ದಾರೆ.

ಇದನ್ನೂ ಓದಿ:ವಾಯುಭಾರ ಕುಸಿತ: 5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಅಲೆಮಾರಿ ಸಮುದಾಯ ಜೊತೆ ಬೆಂಬಲಕ್ಕೆ ನಿಂತ ಎಡಪಂಥೀಯ ಸಂಘಟನೆಗಳು

ಹಲ್ಲೆ ನಡೆಸಿದವರು ವಿರುದ್ಧ ಶಿಳ್ಳೆಕ್ಯಾತ ಸಮುದಾಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ. ಅಲೆಮಾರಿ ಸಮುದಾಯ ಜೊತೆ ಎಡಪಂಥೀಯ ಸಂಘಟನೆಗಳು ಬೆಂಬಲವಾಗಿ ನಿಂತಿದೆ. ಈ ಘಟನೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಅಲೆಮಾರಿ ಸಮುದಾಯಕ್ಕೆ ಶಿಕ್ಷಣ ಮತ್ತು ಆರ್ಥಿಕ ಶಕ್ತಿಯನ್ನು ಸರಕಾರ ನೀಡಬೇಕು ಎಂದು ಒತ್ತಾಯಿಸಿದೆ. ಮಳೆಗಾಲದಲ್ಲಿ ಅಪಾಯದಲ್ಲಿ ಜೀವನ ನಡೆಸುವ ಅಲೆಮಾರಿ ಜನಾಂಗಕ್ಕೆ ಜಿಲ್ಲಾಡಳಿತ ರಕ್ಷಣೆ ಕೊಡಬೇಕು. ಇಡೀ ಜಿಲ್ಲೆಯಲ್ಲಿ ಬೆರಳೆಣಿಕೆಯ ಕುಟುಂಬಗಳು ಮಾತ್ರ ಅಲ್ಲಲ್ಲಿ ತೆಪ್ಪ ಮೀನುಗಾರಿಕೆಯಲ್ಲಿ ತೊಡಗಿರೋದರಿಂದ ಮೊಗವೀರರ ಜೊತೆ ಸಂಧಾನ ನಡೆಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲೂ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್