AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀನುಗಾರಿಕೆ ವಿಚಾರದಲ್ಲಿ ಗಲಾಟೆ; ಮೊಗವೀರ ಹಾಗೂ ಶಿಳ್ಳೆಕ್ಯಾತ ಅಲೆಮಾರಿ ಬೆಸ್ತರ ನಡುವೆ ಮಾರಾಮಾರಿ

ಸಮುದ್ರ ಮತ್ತು ನದಿಯಲ್ಲಿ ಕಸುಬು ಮಾಡುವ ಸಾಹಸಿಗಳ ನಡುವೆ ವೈಷಮ್ಯ ಏರ್ಪಟ್ಟಿದೆ. ಕರಾವಳಿಯ ಮೊಗವೀರ ಮತ್ತು ಮಲೆನಾಡ ಅಲೆಮಾರಿ ಬೆಸ್ತರು ನಡುವೆ ಕಲಹ ನಡೆದಿದೆ. ಮಾತಿಗೆ ಮಾತು ಬೆಳೆದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನಮಗೆ ಕೂಲಿ ಮಾಡಲು ಅವಕಾಶ ಕೊಟ್ಟು ಬದುಕಲು ಬಿಡಿ ಎಂದು ಉಡುಪಿ ಜಿಲ್ಲಾಡಳಿತದ ಮುಂದೆ ಶಿಳ್ಳೆಕ್ಯಾತರು ಬೇಡಿಕೆಯಿಟ್ಟಿದ್ದಾರೆ. ಏನಾಗಿದೆ ಅಂತೀರಾ? ಈ ಸ್ಟೋರಿ ಓದಿ.

ಮೀನುಗಾರಿಕೆ ವಿಚಾರದಲ್ಲಿ ಗಲಾಟೆ; ಮೊಗವೀರ ಹಾಗೂ ಶಿಳ್ಳೆಕ್ಯಾತ ಅಲೆಮಾರಿ ಬೆಸ್ತರ ನಡುವೆ ಮಾರಾಮಾರಿ
ಮೊಗವೀರ ಹಾಗೂ ಶಿಳ್ಳೆಕ್ಯಾತ ಅಲೆಮಾರಿ ಬೆಸ್ತರ ನಡುವೆ ಮಾರಾಮಾರಿ
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jun 20, 2024 | 6:03 PM

Share

ಉಡುಪಿ, ಜೂ.20: ಸ್ಥಳಿಯ ಮೊಗವೀರ(Mogaveera) ಸಮುದಾಯದವರು, ಶಿಳ್ಳೆಕ್ಯಾತ(Sillekyatha)ರ ಅಲೆಮಾರಿ ಜನಾಂಗದ ಜೊತೆ ಕ್ಯಾತೆ ತೆಗೆದು ಜಗಳವಾಡಿದ್ದಾರೆ. ಈ ವೇಳೆ ಅಲೆಮಾರಿಗಳು ಗಾಯಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾರೆ. ಗುಲ್ವಾಡಿ ಹೊಳೆಯಲ್ಲಿ ಕಳೆದ 10 ರಿಂದ 20 ವರ್ಷಗಳಿಂದ ಶಿಳ್ಳೆಕ್ಯಾತ ಅಲೆಮಾರಿ ಸಮುದಾಯದ ಐದಾರು ಕುಟುಂಬಗಳು ಮೀನು ಹಿಡಿದು ಜೀವನ ನಡೆಸುತ್ತಿದೆ. ನದಿ ಮತ್ತು ಹೊಳೆಯ ತೀರದಲ್ಲಿ ಸಣ್ಣಪುಟ್ಟ ಬಲೆಗಳನ್ನು ಹಾಕಿ ದಿನಗೂಲಿಯನ್ನು ದುಡಿಯುತ್ತಾರೆ. ಇದೇ ವಿಚಾರಕ್ಕೆ ಸ್ಥಳೀಯ ಮೊಗವೀರ ಹಾಗೂ ಶಿಳ್ಳೆಕ್ಯಾತರ ಸಮುದಾಯದ ನಡುವೆ ಜಗಳ ಶುರುವಾಗಿದೆ.

ಹಲವಾರು ವರ್ಷಗಳಿಂದ ಜಗಳ ಹೊಡೆದಾಟಗಳು ನಡೆಯುತ್ತಾ ಬಂದಿದೆ. ಈವರೆಗೆ ವಿಕೋಪಕ್ಕೆ ಹೋಗಿರಲಿಲ್ಲ. ಆದರೆ, ಕಳೆದ ವಾರ ದೊಡ್ಡ ಮಾರಾ ಮಾರಿಯೇ ನಡೆದುಬಿಟ್ಟಿದೆ. ಸುಮಾರು 25 ಜನ ಗಂಗೊಳ್ಳಿ ಭಾಗದ ಮೀನುಗಾರರು ತೆಪ್ಪಗಳಿಗೆ ದಾಳಿ ಮಾಡಿ, ಮಹಿಳೆಯರು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಅವರ ಗುಡಿಸಲುಗಳಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಇನ್ನು ಮುಂದೆ ನದಿಗೆ ಇಳಿಯಬಾರದು, ಕಸುಬು ನಡೆಸಬಾರದು ಎಂದು ತಾಕೀತು ಮಾಡಿದ್ದಾರೆ.

ಇದನ್ನೂ ಓದಿ:ವಾಯುಭಾರ ಕುಸಿತ: 5 ದಿನ ಮೀನುಗಾರಿಕೆಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಸೂಚನೆ

ಅಲೆಮಾರಿ ಸಮುದಾಯ ಜೊತೆ ಬೆಂಬಲಕ್ಕೆ ನಿಂತ ಎಡಪಂಥೀಯ ಸಂಘಟನೆಗಳು

ಹಲ್ಲೆ ನಡೆಸಿದವರು ವಿರುದ್ಧ ಶಿಳ್ಳೆಕ್ಯಾತ ಸಮುದಾಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ. ಅಲೆಮಾರಿ ಸಮುದಾಯ ಜೊತೆ ಎಡಪಂಥೀಯ ಸಂಘಟನೆಗಳು ಬೆಂಬಲವಾಗಿ ನಿಂತಿದೆ. ಈ ಘಟನೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು, ಅಲೆಮಾರಿ ಸಮುದಾಯಕ್ಕೆ ಶಿಕ್ಷಣ ಮತ್ತು ಆರ್ಥಿಕ ಶಕ್ತಿಯನ್ನು ಸರಕಾರ ನೀಡಬೇಕು ಎಂದು ಒತ್ತಾಯಿಸಿದೆ. ಮಳೆಗಾಲದಲ್ಲಿ ಅಪಾಯದಲ್ಲಿ ಜೀವನ ನಡೆಸುವ ಅಲೆಮಾರಿ ಜನಾಂಗಕ್ಕೆ ಜಿಲ್ಲಾಡಳಿತ ರಕ್ಷಣೆ ಕೊಡಬೇಕು. ಇಡೀ ಜಿಲ್ಲೆಯಲ್ಲಿ ಬೆರಳೆಣಿಕೆಯ ಕುಟುಂಬಗಳು ಮಾತ್ರ ಅಲ್ಲಲ್ಲಿ ತೆಪ್ಪ ಮೀನುಗಾರಿಕೆಯಲ್ಲಿ ತೊಡಗಿರೋದರಿಂದ ಮೊಗವೀರರ ಜೊತೆ ಸಂಧಾನ ನಡೆಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲೂ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!