AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಂದೂರು ಅರೆಗುಂಡಿ ಜನರ ಗೋಳು ಕೇಳೋರಿಲ್ಲ: 20 ವರ್ಷಗಳಿಂದ ಜೀವದ ಹಂಗು ತೊರೆದು ಮುರಿದ ಕಾಲುಸಂಕ ದಾಟುವ ಗ್ರಾಮಸ್ಥರು

Udupi News: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಪ್ಪಾಡಿ ಅರೆಗುಂಡಿ ಗ್ರಾಮದಲ್ಲಿ ಕಳೆದ ಎರಡು ದಶಕಗಳಿಂದ ಮುರಿದ ಕಾಲುಸಂಕವನ್ನೇ ಗ್ರಾಮಸ್ಥರು ಬಳಸುತ್ತಿದ್ದಾರೆ. ಆದರೂ ಜನಪ್ರತಿನಿಧಿಗಳು ಇತ್ತ ಗಮನಹರಿಸುತ್ತಿಲ್ಲ. ಮಳೆಗಾಲದಲ್ಲಿ ಜೀವಭಯದ ನಡುವೆಯೇ ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕರು ಸಂಚರಿಸುತ್ತಿದ್ದು, ಶಾಶ್ವತ ಸೇತುವೆ ನಿರ್ಮಿಸಬೇಕೆಂದು ಒತ್ತಾಯಿಸಿದ್ದಾರೆ.

ಬೈಂದೂರು ಅರೆಗುಂಡಿ ಜನರ ಗೋಳು ಕೇಳೋರಿಲ್ಲ: 20 ವರ್ಷಗಳಿಂದ ಜೀವದ ಹಂಗು ತೊರೆದು ಮುರಿದ ಕಾಲುಸಂಕ ದಾಟುವ ಗ್ರಾಮಸ್ಥರು
ಅಪಾಯಕಾರಿ ಕಾಲುಸಂಕImage Credit source: tv9
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jul 14, 2026 | 1:59 PM

Share

ಮುಖ್ಯಾಂಶಗಳು

  • 20 ವರ್ಷಗಳಿಂದ ಮುರಿದ ಕಾಲುಸಂಕ ಬಳಕೆ
  • ಶಾಲಾ ಮಕ್ಕಳಿಗೆ ಪ್ರತಿದಿನ ಜೀವಭಯ
  • ಶಾಶ್ವತ ಸೇತುವೆಗೆ ಗ್ರಾಮಸ್ಥರ ಆಗ್ರಹ

ಉಡುಪಿ, ಜುಲೈ 14: ಚುನಾವಣೆ ಬಂದಾಗ ಮಾತ್ರ ಜನಪ್ರತಿನಿಧಿಗಳು ಗ್ರಾಮಕ್ಕೆ ಬರುತ್ತಾರೆ. ಭರವಸೆಗಳ ಸುರಿಮಳೆ ಸುರಿಸುತ್ತಾರೆ. ಆದರೆ ಚುನಾವಣೆ ಮುಗಿದ ಬಳಿಕ ಗ್ರಾಮದ ಸಮಸ್ಯೆಗಳನ್ನು ಮರೆತು ಬಿಡುತ್ತಾರೆ ಎಂಬ ಆಕ್ರೋಶ ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಪ್ಪಾಡಿ ಅರೆಗುಂಡಿ ನಿವಾಸಿಗಳದ್ದು. ಕಳೆದ 15ರಿಂದ 20 ವರ್ಷಗಳಿಂದ ಮುರಿದು ಶಿಥಿಲಗೊಂಡಿರುವ ಕಾಲುಸಂಕವನ್ನೇ ನೂರಾರು ಗ್ರಾಮಸ್ಥರು ಜೀವದ ಹಂಗು ತೊರೆದು ಸಂಪರ್ಕ ಮಾರ್ಗವಾಗಿ ಬಳಸುತ್ತಿದ್ದು, ಶಾಶ್ವತ ಸೇತುವೆ ನಿರ್ಮಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಮಳೆಗಾಲದಲ್ಲಿ ಅಪಾಯಕಾರಿ ಸಂಚಾರ

ಗ್ರಾಮದಲ್ಲಿ ಕಾಲ ಬದಲಾದರೂ, ಸರ್ಕಾರಗಳು ಬದಲಾದರೂ, ಜನಪ್ರತಿನಿಧಿಗಳು ಬದಲಾದರೂ ಜನರ ಸಂಕಷ್ಟ ಮಾತ್ರ ಬದಲಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶೇಷವಾಗಿ ಮಳೆಗಾಲದಲ್ಲಿ ಕಾಲುಸಂಕದ ಮೇಲೆ ನೀರಿನ ಹರಿವು ಹೆಚ್ಚಾಗುವುದರಿಂದ ಪ್ರತಿದಿನ ಸಂಚಾರವೇ ಅಪಾಯಕಾರಿಯಾಗುತ್ತದೆ.

ಪ್ರಾಣ ಭಯದಲ್ಲೇ ಶಾಲೆಗೆ ಹೋಗುವ ಪುಟ್ಟ ಮಕ್ಕಳು

ಶಾಲೆಗೆ ಹೋಗುವ ಪುಟ್ಟ ಮಕ್ಕಳು ಪುಸ್ತಕದ ಚೀಲ ಹೊತ್ತು ಇದೇ ಕಾಲುಸಂಕ ದಾಟಬೇಕಾದ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಒಂದು ಕಡೆ ವೇಗವಾಗಿ ಹರಿಯುವ ನೀರು, ಮತ್ತೊಂದು ಕಡೆ ಮುರಿದು ಹಾಳಾಗಿರುವ ಸಂಕ. ಕಾಲು ಜಾರಿದರೆ ಜೀವಕ್ಕೆ ಅಪಾಯ ಎಂಬ ಆತಂಕದಲ್ಲೇ ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದಾರೆ.

ಆಂಬುಲೆನ್ಸ್ ಬರೋದಕ್ಕೂ ದಾರಿಯಿಲ್ಲ!

ವಯೋವೃದ್ಧರು, ಗರ್ಭಿಣಿಯರು ಹಾಗೂ ಅನಾರೋಗ್ಯ ಪೀಡಿತರು ಆಸ್ಪತ್ರೆಗೆ ತೆರಳಬೇಕಾದರೂ ಇದೇ ದಾರಿಯನ್ನು ಅವಲಂಬಿಸಬೇಕಾಗಿದೆ. ತುರ್ತು ಸಂದರ್ಭಗಳಲ್ಲಿ ಆಂಬುಲೆನ್ಸ್ ಕೂಡ ಈ ಭಾಗಕ್ಕೆ ತಲುಪಲು ಸಾಧ್ಯವಾಗುವುದಿಲ್ಲ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಕದಿಂದ ಬಿದ್ದು ನೀರುಪಾಲಾಗಿದ್ದ ಮಹಿಳೆಯರು

ಕೆಲವು ವರ್ಷಗಳ ಹಿಂದೆ ಇದೇ ಕಾಲುಸಂಕ ದಾಟುವ ವೇಳೆ ಇಬ್ಬರು ಮಹಿಳೆಯರು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದರು. ಗ್ರಾಮಸ್ಥರು ಸಮಯೋಚಿತವಾಗಿ ನಡೆಸಿದ ರಕ್ಷಣಾ ಕಾರ್ಯಾಚರಣೆಯಿಂದ ಅವರ ಜೀವ ಉಳಿದಿತ್ತು. ಆ ಘಟನೆ ಬಳಿಕವಾದರೂ ಅಧಿಕಾರಿಗಳು ಶಾಶ್ವತ ಪರಿಹಾರ ಕಲ್ಪಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ವರ್ಷಗಳು ಕಳೆದರೂ ಪರಿಸ್ಥಿತಿ ಬದಲಾಗಿಲ್ಲ.

ಕಾಲು ಸಂಕ ಸಮಸ್ಯೆ, ಅಪಾಯಗಳ ಬಗ್ಗೆ ‘ಟಿವಿ9’ ವಿಡಿಯೋ

ಈ ದಾರಿಯನ್ನು ಬಿಟ್ಟು ಪರ್ಯಾಯ ಮಾರ್ಗ ಬಳಸಬೇಕಾದರೆ ಸುಮಾರು ಐದು ಕಿಲೋಮೀಟರ್ ಸುತ್ತುವರಿದು ಹೋಗಬೇಕಾಗುತ್ತದೆ. ಇದರಿಂದ ವಿದ್ಯಾರ್ಥಿಗಳು, ರೈತರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರು ಪ್ರತಿದಿನ ಹೆಚ್ಚುವರಿ ಸಮಯ, ಹಣ ಮತ್ತು ಶ್ರಮ ವ್ಯಯಿಸಬೇಕಾಗಿದೆ.

ಪ್ರತಿ ಚುನಾವಣೆಯಲ್ಲೂ ಶಾಶ್ವತ ಕಾಲುಸಂಕ ನಿರ್ಮಾಣದ ಭರವಸೆ ನೀಡಲಾಗುತ್ತದೆ. ಆದರೆ ಚುನಾವಣೆ ಮುಗಿದ ಬಳಿಕ ಆ ಭರವಸೆಗಳು ಕಡತಗಳಲ್ಲೇ ಉಳಿಯುತ್ತವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಹಲವು ಬಾರಿ ಅಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಅವರ ಅಳಲು.

ಇದನ್ನೂ ಓದಿ: ಉಡುಪಿ ಶ್ರೀಕೃಷ್ಣದಲ್ಲಿ ಆದಿ ಶಂಕರಾಚಾರ್ಯರ ನಿಂದನೆ ವಿವಾದ: ಕ್ಷಮೆ ಯಾಚಿಸಿದ ಹರಿಕಥೆ ಕಲಾವಿದೆ, ಶಿರೂರು ಮಠದಿಂದಲೂ ಸ್ಪಷ್ಟನೆ

‘ನಮ್ಮ ಹಿಂದಿನ ತಲೆಮಾರೂ ಇದೇ ಸಂಕಷ್ಟ ಅನುಭವಿಸಿತು. ಈಗ ನಮ್ಮ ಮಕ್ಕಳೂ ಅದೇ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ. ನಮಗೆ ದೊಡ್ಡ ಅಭಿವೃದ್ಧಿ ಬೇಡ. ಜೀವ ಉಳಿಸುವ ಒಂದು ಶಾಶ್ವತ ಕಾಲುಸಂಕ ನಿರ್ಮಿಸಿ ಕೊಡಿ’ಎಂದು ಗ್ರಾಮಸ್ಥರು ಭಾವುಕರಾಗಿ ಮನವಿ ಮಾಡಿದ್ದಾರೆ. ಗ್ರಾಮಸ್ಥರ ಬೇಡಿಕೆಗೆ ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆ ಯಾವಾಗ ಸ್ಪಂದಿಸುತ್ತದೆ? ಮತ್ತೊಂದು ಅನಾಹುತ ಸಂಭವಿಸುವ ಮುನ್ನ ಶಾಶ್ವತ ಸೇತುವೆ ನಿರ್ಮಾಣವಾಗುತ್ತದೆಯೇ ಎಂಬ ಪ್ರಶ್ನೆ ಇದೀಗ ಸ್ಥಳೀಯರನ್ನು ಕಾಡುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು