Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ವೈದ್ಯರ ತಂಡ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ, ಐವರ ಬಂಧನ

ಸರ್ಕಾರ ಎಷ್ಟು ಖಡಕ್ ಎಚ್ಚರಿಕೆ ನೀಡುದರೂ ಕರಾವಳಿಯಲ್ಲಿ ನೈತಿಕ ಪೊಲೀಸ್​ಗಿರಿ ನಿಲ್ಲುತ್ತಿಲ್ಲ. ಇದೀಗ ಉಡುಪಿಯಲ್ಲಿ ನೈತಿಕ ಪೊಲೀಸ್​ ಗಿರಿ ಮಾಡಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ.

Udupi News: ವೈದ್ಯರ ತಂಡ ತೆರಳುತ್ತಿದ್ದ ಕಾರು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ, ಐವರ ಬಂಧನ
ನೈತಿಕ ಪೊಲೀಸ್ ಗಿರಿ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ರಮೇಶ್ ಬಿ. ಜವಳಗೇರಾ

Updated on: Aug 02, 2023 | 11:14 AM

ಉಡುಪಿ, (ಆಗಸ್ಟ್ 02): ಉಡುಪಿ(Udupi) ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪ್ರಕರಣಕ್ಕೆ ಹಿಂದೂ ಮುಸ್ಲಿಂ ಬಣ್ಣ ಬಳಿದುಕೊಂಡಿದ್ದು, ರಾಷ್ಟ್ರಮಟ್ಟದವರೆಗೂ ಭಾರೀ ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಇದೀಗ ಉಡುಪಿಯಲ್ಲಿ ನೈತಿಕ ಪೊಲೀಸ್​ಗಿರಿ(Moral Policing) ಬೆಳಕಿಗೆ ಬಂದಿದೆ. ಹೌದು…ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಗ್ರಾಮದ ಬಳಿ ಮಂಗಳೂರಿನ ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರು ತಡೆದು ಅವಾಜ್​ ಹಾಕಿ ಪೊಲೀಸ್​ಗಿರಿ ನಡೆಸಿದ್ದಾರೆ. ಈ ಸಂಬಂಧ ಕಾರ್ಕಳ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಬಂಧಿತ ಆರೋಪಿಗಳು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್​ ಗಿರಿ; ಖಾಸಗಿ ಸುದ್ದಿ ವೆಬ್​ಸೈಟ್ ವರದಿಗಾರನ ಮೇಲೆ ಹಲ್ಲೆ ಯತ್ನ

ಮಾಳ ಎಸ್.ಕೆ. ಗಡಿ ಬಳಿಯಿಂದ ಕಾರು ಹಿಂಬಾಲಿಸಿದ್ದ ಗುಂಪು, ಕುಂಟಲ್ಪಾಡಿ ಬಳಿ ಕಾರು ಅಡ್ಡಗಟ್ಟಿ ವಿಭಿನ್ನ ಕೋಮಿಗೆ ಸೇರಿದವರು ನೀವು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಅವಾಜ್ ಹಾಕುವುದರ ಜೊತೆಗೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾರೆ. ಆ ವೇಳೆ ಕಾರಿನಲ್ಲಿದ್ದ ಮಹಿಳೆ 112ಗೆ ಕರೆಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿದ ಕಾರ್ಕಳ ಪೊಲೀಸರು, ಐವರನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

ಮಂಗಳೂರಿನ ಹೆಸರಾಂತ ಕಾಲೇಜಿನ ವೈದ್ಯರ ತಂಡ ಕಾರಿನಲ್ಲಿ ಶೃಂಗೇರಿಗೆ ತೆರಳಿ ಕಾರ್ಕಳದ ಕುಂಟಲ್ಪಾಡಿ ಮೂಲಕ ಮಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಆರೋಪಿಗಳು, ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಕಾರನ್ನು ಹಿಂಬಾಲಿಸಿ ಕುಂಟಲ್ಪಾಡಿ ಬಳಿ ಕಾರನ್ನು ಅಡ್ಡಗಟ್ಟಿದ್ದಾರೆ. ಅಲ್ಲದೇ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ ಹೋಗುತ್ತಿದ್ದೀರಿ ಎಂದು ಕೂಗಾಡಿದ್ದಾರೆ. ಕಾರಿನಲ್ಲಿದ್ದ ಮಹಿಳೆ ಕೂಡಲೇ ನೇರವಾಗಿ 112ಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಮಾಹಿತಿ ಆಧರಿಸಿ ಕೂಡಲೇ ಸ್ಥಳಕ್ಕೆ ಡಿ ವೈ ಎಸ್ ಪಿ ಅರವಿಂದ್ ಕಲಗುಜ್ಜೆ, ಸರ್ಕಲ್ ಇನ್ಸ್​ಪೆಕ್ಟರ್ ನಾಗರಾಜ್, ನಗರ ಠಾಣಾಧಿಕಾರಿ ಸಂದೀಪ್ ಶೆಟ್ಟಿ, ಗ್ರಾಮಾಂತರ ಠಾಣಾಧಿಕಾರಿ ದಿಲೀಪ್ ಭೇಟಿ ನೀಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ