ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​ ಅರೆಸ್ಟ್

ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಕಾರ್ಯಕರ್ತ, ರೌಡಿಶೀಟರ್​ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿದ್ದು, ಈ ಕೊಲೆ ಬಳಿಕ ದಕ್ಷಿಣ ಕನ್ನಡದಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನುಂಟು ಮಾಡಿತ್ತು. ಎಲ್ಲವೂ ತಣ್ಣಹಾಯ್ತು ಎನ್ನುವರಷ್ಟರಲ್ಲಿ ಇದೀಗ ಏಟಿಗೆ ಎದುರೇಟು, ಪ್ರತೀಕಾರದ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇನಕಾರಿ ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​​ ಅರೆಸ್ಟ್ ಆಗಿದ್ದಾನೆ.

ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್​ ಅರೆಸ್ಟ್
ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್
Edited By:

Updated on: May 05, 2025 | 3:42 PM

ಉಡುಪಿ, (ಮೇ 04): ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ (Suhas Shetty Murder Case) ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು (Mangaluru Police) 8 ಜನರನ್ನು ಬಂಧಿಸಿದ್ದು, ತನಿಖೆ ತನಿಖೆ ನಡೆಸಿದ್ದಾರೆ. ಇದರ ಮಧ್ಯ ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು ಹರಿದಾಡುತ್ತಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೋಂ ಗಾರ್ಡ್​ ಅವಹೇಳಕನಕಾರಿ ಕಮೆಂಟ್ ಮಾಡಿದ್ದಾನೆ. ಹೌದು…ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್​ ಬಂಧನವಾಗಿದೆ.

ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್​  ಎನ್ನುವಾತ ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಸಂಪತ್ ಸಾಮಾಜಿಕ ಜಾಲತಾಣದಲ್ಲಿ ಕಮೆಂಟ್ ಹಾಕಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್​ನನ್ನು ಬಂಧಿಸಿದ್ದಾರೆ.

ಇದನ್ನು ಓದಿ: ಮಂಗಳೂರಿನಲ್ಲಿ ಮುಂದುವರಿದ ಪ್ರತೀಕಾರದ ಎಚ್ಚರಿಗಳು: ಕೊಚ್ಚಿ ಕೊಲ್ಲುವ ಸಂದೇಶಗಳು

ಹಿಂದೂ ಮುಖಂಡರಿಗೆ ಬೆದರಿಕೆ

ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಏಟಿಗೆ ಎದುರೇಟು, ಪ್ರತೀಕಾರದ ಸಂದೇಶಗಳು ಹರಿದಾಡುತ್ತಿವೆ.  ವಿಹೆಚ್​ಪಿ ಮತ್ತು ಬಜರಂಗದಳ ಮುಖಂಡರಿಗೆ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ವಿಶ್ವ ಹಿಂದೂ ಪರಿಷತ್​ ಶರಣ್​ ಪಂಪ್​ವೆಲ್​ ಮತ್ತು ಬಜರಂಗದಳ ಮುಖಂಡ ಭರತ್​ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್​ ಹಾಕಲಾಗಿದೆ.

ಇದನ್ನೂ ಓದಿ
ಶರಣ್​ ಪಂಪ್ವೆಲ್​, ಕುಮ್ಡೇಲ್​​ಗೆ ಬೆದರಿಕೆ: ಮಂಗಳೂರಿನಲ್ಲಿ ಕೇಸ್ ದಾಖಲು
ಮಂಗಳೂರು: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ FIR
ಮಂಗಳೂರು: ಮುಂದುವರಿದ ಪ್ರತೀಕಾರದ ಎಚ್ಚರಿಗಳು, ಕೊಚ್ಚಿ ಕೊಲ್ಲುವ ಸಂದೇಶಗಳು
ಮಂಗಳೂರು: ಸುಹಾಸ್ ಬೆನ್ನಲ್ಲೇ ಮತ್ತಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ!

2018ರಲ್ಲಿ ಮಂಗಳೂರಿನ ಕೊಟ್ಟಾರ ಚೌಕಿ ಬಳಿ ನಡೆದಿದ್ದ ಬಷೀರ್ ಹತ್ಯೆ ಆರೋಪಿ ಶ್ರೀಜಿತ್​ಗೆ ಮತ್ತೆ ಕೊಲೆ ಬೆದರಿಕೆ ಹಾಕಲಾಗಿದೆ. ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ಪ್ರತೀಕಾರಕ್ಕೆ ಬಷೀರ್ ಕೊಲೆಯಾಗಿತ್ತು. ಬಷೀರ್ ಕೊಲೆ ಪ್ರಕರಣದ ಆರೋಪಿ ಶ್ರೀಜಿತ್ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದಾರೆ. ನೆಕ್ಸ್ಟ್​​ ಟಾರ್ಗೆಟ್ ಈ ಶ್ರೀಜಿತ್ ಅಂತ ‘Killers_target’ ಎಂಬ ಫೇಸಬುಕ್​ ಪೇಜ್​ನಿಂದ ಈ ಹಿಂದೆ ಪೋಸ್ಟ್ ಮಾಡಲಾಗಿತ್ತು. ರವಿವಾರ ಮತ್ತೆ ‘Abu_Sifiyan678′ ಪೇಜ್​ನಿಂದ ಶ್ರೀಜಿತ್​ಗೆ ‘ಎಲ್ಲಿದೀಯಾ ನೀನು, ನೆಕ್ಸ್ಟ್ ನೀನೆ’ ಅಂತ ಮಲಯಾಳಂನಲ್ಲಿ ಕೊಲೆ ಬೆದರಿಕೆ ಮೆಸೇಜ್ ಕಳುಹಿಸಿದ್ದಾರೆ.

ಹೆಚ್ಚಾದ ಪ್ರತೀಕಾರದ ಸಂದೇಶಗಳು

“ಸುಹಾಸ್ ಶೆಟ್ಟಿಯನ್ನು ಕೊಂದವರು, ಕೊಂದವರ ಮನೆಯವರು, ಅಲ್ಲಿ ಯಾರು ಸಿಗುತ್ತಾರೆ ಅವರನ್ನು ಕೊಚ್ಚಿ ಕೊಲ್ಲುತ್ತೇವೆ” ಎಂದು ​ ಧನುಷ್.ಸಿ ಎಂಬುವರು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದ ಫೇಸ್​​ಬುಕ್ ಫೋಸ್ಟ್​ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ತಣ್ಣೀರುಪಂಥ ನಿವಾಸಿ ಧನುಷ್.ಸಿ ಪುಂಜಾಲಕಟ್ಟೆ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಕೋಮುದ್ವೇಷ ಹರಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂಥ ಪ್ರಚೋದನಾತ್ಮಕ ವಿಡಿಯೋವನ್ನು ಪ್ರಸಾರಮಾಡಿದ ಹಿನ್ನೆಲೆಯಲ್ಲಿ ಬಿಎನ್​ಎಸ್​ 196(1)(A), 353(1)(C)ರ ಅಡಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Follow Us