AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಯುವಂತೆ ಕಿರುಕುಳ; ದೈಹಿಕ ಶಿಕ್ಷಕ ಅಮಾನತು

ಉಡುಪಿಯ ಕಾರ್ಕಳ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯಲು ಒತ್ತಾಯಿಸಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಆಡಳಿತ ಮಂಡಳಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಯುವಂತೆ ಕಿರುಕುಳ; ದೈಹಿಕ ಶಿಕ್ಷಕ ಅಮಾನತು
ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಯುವಂತೆ ಕಿರುಕುಳ
ಭಾವನಾ ಹೆಗಡೆ
|

Updated on:Nov 19, 2025 | 12:29 PM

Share

ಉಡುಪಿ, ನವೆಂಬರ್ 19: ಕಾರ್ಕಳದ ಮೊರಾರ್ಜಿ ದೇಸಾಯಿ ಇಂಗ್ಲಿಷ್ (Morarji Desai English Medium Residential School) ಮಾಧ್ಯಮ ವಸತಿ ಶಾಲೆಯ ದೈಹಿಕ ಶಿಕ್ಷಕನೊಬ್ಬ ವಿದ್ಯಾರ್ಥಿಗಳ ಜನಿವಾರ ತೆಗೆಯುವಂತೆ ಹೇಳಿದ್ದಲ್ಲದೆ ಬಸ್ಕಿ ಹೊಡೆಸಿರುವ ಘಟನೆ ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಕ ಮತ್ತು ಪೋಷಕರ ನಡುವಿನ ವಿವಾದದ ವೀಡಿಯೋ ವೈರಲ್ ಆಗಿದ್ದು, ಶಿಕ್ಷಕನನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ.

ಮಕ್ಕಳಿಂದ 200 ಬಸ್ಕಿ ಹೊಡೆಸಿದ್ದ ಶಿಕ್ಷಕ

ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ಮತ್ತು ಕೈಗೆ ಕಟ್ಟುವ ದಾರಗಳ ಬಗ್ಗೆ ಪ್ರಶ್ನಿಸಿದ್ದ ಅತಿಥಿ ಶಿಕ್ಷಕ ಮದರಶಾ ಎಸ್ ಮಕಂದಾರ್, ಮಕ್ಕಳಿಂದ 200 ಬಸ್ಕಿ ಹೊಡೆಸಿದ್ದ. ಆತನ ಈ ವರ್ತನೆಯಿಂದ ನೊಂದ ಮಕ್ಕಳು ಶಾಲೆಯ ಪ್ರಾಂಶುಪಾಲರಿಗೆ ಈ ಬಗ್ಗೆ ದೂರು ನೀಡಿದ್ದರು. ನಂತರ ಈ ಘಟನೆಯನ್ನರಿತ ಪಾಲಕರು ಮತ್ತು ಗ್ರಾಮಸ್ಥರು ಶಾಲೆಯ ಮುಂದೆ ಜಮಾಯಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಇದನ್ನೂ ಓದಿ ಕರ್ನಾಟಕ ಸಿಇಟಿ ಪರೀಕ್ಷೆ ಮತ್ತು ಜನಿವಾರ ವಿವಾದ: ಈವರೆಗೆ ನಡೆದಿದ್ದೇನು? ಇಲ್ಲಿದೆ ವಿವರ

ಶಿಕ್ಷಕನ ದುರ್ವರ್ತನೆಯ ಕುರಿತು ಪ್ರಶ್ನೆ ಮಾಡಿದ್ದ ಪಾಲಕರು ಮತ್ತು ಶಿಕ್ಷಕ ನಡುವಿನ ಈ ಗಲಾಟೆಯ ವೀಡಿಯೋ ವೈರಲ್ ಆಗಿತ್ತು. ಮಾತುಕತೆ ವೇಳೆ ಶಿಕ್ಷಕ ತಾನು ಮಾಡಿದ ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ್ದ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಆಡಳಿತ ಮಂಡಳಿ ಶಿಕ್ಷಕ ಮದರಶಾನನ್ನು ಕೆಲಸದಿಂತ ಕಿತ್ತು ಹಾಕಿದೆ.

ಶಿಕ್ಷಕನಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ

ಈ ಘಟನೆಯು ಸಮುದಾಯದ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಾಮಾಜಿಕ ಚಿಂತಕಿ ರಮಿತಾ ಸೂರ್ಯವಂಶಿ, ಹಿಂದೂ ಧಾರ್ಮಿಕ ಭಾವನೆಗಳಿಗೆ ಶಿಕ್ಷಕ ಧಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ. ಜನಿವಾರದ ಧಾರ್ಮಿಕ ಮಹತ್ವ ಮತ್ತು ಮಾನಸಿಕ, ದೈಹಿಕ ಯೋಗಕ್ಷೇಮದಲ್ಲಿ ಅದರ ಪಾತ್ರದ ಬಗ್ಗೆ ವಿವರಿಸಿದ ಅವರು, ಚಿಕ್ಕ ಮಕ್ಕಳ ಮೇಲಿನ ಕಿರುಕುಳ ಸ್ವೀಕಾರಾರ್ಹವಲ್ಲ ಎಂದಿದ್ದಾರೆ. ಶಿಕ್ಷಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂರ್ಯವಂಶಿ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:28 pm, Wed, 19 November 25