AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಿ ಹಂತ ತಲುಪಿದ ಅಗ್ನಿಶಾಮಕ ವಾಹನಗಳು; ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದರೆ ದೇವರೇ ಗತಿ

ಕರಾವಳಿಯ ಜಿಲ್ಲೆಯಾದ ಉಡುಪಿಯಲ್ಲಿ ಮಳೆಗಾಲ ಪ್ರಾರಂಭವಾಗುವವರೆಗೂ ಕೂಡ ಬೆಂಕಿ ಆಕಸ್ಮಿಕಗಳು ನಡೆಯುತ್ತಲೇ ಇರುತ್ತದೆ. ಅದರಲ್ಲೂ ಈ ಬಾರಿ ಅತಿ ಹೆಚ್ಚು ಉಷ್ಣತೆ ಉಡುಪಿಯಲ್ಲಿ ದಾಖಲಾಗಿದ್ದು, ಸಾಕಷ್ಟು ಅಗ್ನಿ ಅವಘಡಗಳು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಅಗ್ನಿ ಆಕಸ್ಮಿಕಗಳು ಸಂಭವಿಸಿದರೆ ತಕ್ಷಣಕ್ಕೆ ಉಪಯೋಗಕ್ಕೆ ಸಿಗಲಿ ಎನ್ನುವ ನಿಟ್ಟಿನಲ್ಲಿ ಅಗ್ನಿಶಾಮಕ ಘಟಕ ಒಂದು ಕಾರ್ಯನಿರ್ವಹಿಸುತ್ತಿದೆ. ಆದರೆ, ಸದ್ಯ ಸಿಬ್ಬಂದಿಗಳು ಇದ್ದರೂ ಕೂಡ ಅಗ್ನಿಶಾಮಕ ಇಲಾಖೆ ಮಾತ್ರ ಕೈಕಟ್ಟಿ ಕುಳಿತುಕೊಳ್ಳುವಂತಾಗಿದೆ.

ಗುಜರಿ ಹಂತ ತಲುಪಿದ ಅಗ್ನಿಶಾಮಕ ವಾಹನಗಳು; ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದರೆ ದೇವರೇ ಗತಿ
ಉಡುಪಿಯಲ್ಲಿ ಗುಜರಿ ಹಂತ ತಲುಪಿದ ಅಗ್ನಿಶಾಮಕ ವಾಹನಗಳು
ಪ್ರಜ್ವಲ್ ಅಮೀನ್​, ಉಡುಪಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 23, 2024 | 10:50 PM

Share

ಉಡುಪಿ, ಮೇ.23: ಜಿಲ್ಲೆಯಲ್ಲಿ ಈ ಬಾರಿ ಅತಿ ಹೆಚ್ಚು ಉಷ್ಣತೆ ದಾಖಲಾಗಿದೆ. ಸೂರ್ಯನ ಬಿಸಿ ತಾಪಕೆ ಸಣ್ಣ ಹಿಡಿಯು ಕೂಡ ದೊಡ್ಡ ಕೆನ್ನಾಲಿಗೆಯಾಗಿ ಸುತ್ತಮುತ್ತಲಿನ ಪ್ರದೇಶವನ್ನು ದಹಿಸಲು ಅನುಕೂಲವಾಗುವಂತ ಪರಿಸ್ಥಿತಿ ಜಿಲ್ಲೆಯಲ್ಲಿದೆ. ಇತ್ತೀಚಿಗೆ ಉಡುಪಿ(Udupi) ನಗರದಿಂದ ಸ್ವಲ್ಪ ದೂರದಲ್ಲಿರುವ ಮಲ್ಪೆ ಬಳಿ ಅಗ್ನಿ ಆಕಸ್ಮಿಕವನ್ನು ನಡೆದಿತ್ತು. ಸಾರ್ವಜನಿಕರ ಒತ್ತಾಯದ ಮೇರೆಗೆ ಅಗ್ನಿ ಆಕಸ್ಮಿಕ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು(Fire fighters) ಬಂದು ಗಮನಿಸಿದ್ದಾರೆ. ಆದರೆ, ಬೆಂಕಿ ನಂದಿಸಲು ಸೂಕ್ತ ವಾಹನದ ವ್ಯವಸ್ಥೆ ಇಲ್ಲದೆ ಸಾರ್ವಜನಿಕರ ಜೊತೆ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿ ನಂದಿಸಬೇಕಾದ ಪ್ರಮೇಯ ಎದುರಾಯಿತು.

ಹಾಗಂತ ಮಲ್ಪೆಯಲ್ಲಿ ಅಗ್ನಿಶಾಮಕ ದಳದ ಘಟಕ ಇಲ್ಲ ಅಂತೇನಿಲ್ಲ. ಮಲ್ಪೆ ಬಂದರಿನ ಒಳಗಡೆ ಸರ್ವ ಸುಸಜ್ಜಿತವಾದ ಅಗ್ನಿಶಾಮಕ ದಳದ ಕಚೇರಿ ಇದೆ. ವರ್ಷದ 365 ದಿನವೂ, ದಿನದ 24 ಗಂಟೆಯೂ ಕೂಡ ಕರ್ತವ್ಯ ನಿರ್ವಹಿಸಲು ಶಕ್ತರಾಗಿರುವ ಸಿಬ್ಬಂದಿಗಳು ಕೂಡ ಇಲ್ಲಿದ್ದಾರೆ. ಆದರೆ, ಈ ಅಗ್ನಿಶಾಮಕ ಘಟಕದಲ್ಲಿರುವ ಎರಡು ವಾಹನಗಳು ಕೂಡ  ನಿಷ್ಪ್ರಯೋಜಕವಾಗಿದ್ದು, ಎಲ್ಲಿಯಾದರೂ ಅಗ್ನಿ ಆಕಸ್ಮಿಕ ಸಂಭವಿಸಿದ ಕರೆ ಬಂದರೆ ಇಲಾಖೆಯ ಅಧಿಕಾರಿಗಳಿಂದ ಹಿಡಿದು ಸಿಬ್ಬಂದಿಗಳು ಕೂಡ ಮೇಲೆ ಕೆಳಗೆ ನೋಡುವ ಪರಿಸ್ಥಿತಿ ನಿರ್ಮಾಣ ಮಾಡಿದೆ.

ಇದನ್ನೂ ಓದಿ:ಅಗ್ನಿಶಾಮಕ ದಳದ ಮಹಾ ಎಡವಟ್ಟು! ಬೆಂಕಿ ನಂದಿಸಲು ಆಗಮಿಸಿದ್ದ ವಾಹನದಲ್ಲಿಯೇ ನೀರಿಲ್ಲ

ಗುಜರಿ ಹಂತ ತಲುಪಿದ ಅಗ್ನಿಶಾಮಕ ವಾಹನ

ಸುಮಾರು 2500 ಕ್ಕೂ ಅಧಿಕ ಮೀನುಗಾರಿಕಾ ಬೋಟುಗಳು ನೆಲೆ ಕಾಣುವ ಮಲ್ಪೆ ಬಂದರಿನ ಒಳಗಡೆ ಈ ಘಟಕವಿದ್ದು, ಸದ್ಯ ಊಟಕ್ಕಿಲ್ಲದ ಉಪ್ಪಿನಕಾಯಿ ಆಗಿದೆ. ಘಟಕ ಪ್ರಾರಂಭವಾದಾಗ ಬಳಸುತ್ತಿದ್ದ ಅಗ್ನಿಶಾಮಕ ವಾಹನ ಸದ್ಯ ಗುಜರಿ ಹಂತ ತಲುಪಿದ್ದು, ಬಾಗಿಲು ಕೂಡ ತೆಗೆಯಲಾರದ ಪರಿಸ್ಥಿತಿಯಲ್ಲಿದೆ. ಇನ್ನು ಇನ್ನೊಂದು ವಾಹನ 15 ವರ್ಷಗಳ ಕಾಲ ಸೇವೆ ಗೆ ಸಿಕ್ಕಿದ್ದು, ಸದ್ಯ ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದೆ ಸರಕಾರ ಸೇವೆಯಿಂದ ಹಿಂದೆ ಪಡೆದಿದೆ. ಏಷ್ಯಾದ ಅತಿ ದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎನಿಸಿಕೊಂಡಿರುವ ಮಲ್ಪೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಸ್ವತ್ತುಗಳಿವೆ. ಯಾವಾಗಲೂ ಸಣ್ಣ ಪುಟ್ಟ ಅಗ್ನಿ ಆಕಸ್ಮಿಕಗಳು ಸಂಭವಿಸುತ್ತಲೇ ಇರುವ ಈ ಬಂದರಿನಲ್ಲಿ, ಅಗ್ನಿಶಾಮಕ ದಳದ ಘಟಕ ಅತಿ ಅಗತ್ಯ. ಆದರೆ, ಈಗ ಅಗ್ನಿಶಾಮಕ ದಳದ ಘಟಕ ಇದ್ದರೂ ಕೂಡ ತುರ್ತು ಸಂದರ್ಭದಲ್ಲಿ ಬಳಸಲಾಗದ ಸ್ಥಿತಿಯಲ್ಲಿದೆ.

ಎಲ್ಲಿಯಾದರೂ ಬಂದರಿನಲ್ಲಿ ನಿಲ್ಲಿಸಲಾಗಿರುವ ಬೋಟಿನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದರೆ ಬೆಂಕಿ ಆವರಿಸಿ ಕೋಟ್ಯಂತರ ರೂಪಾಯಿ ನಷ್ಟವಾಗುವ ಸಂಭವವಿದೆ. ಹೀಗಾಗಿ ತಕ್ಷಣಕ್ಕೆ ಒಂದು ಅಗ್ನಿಶಾಮಕ ವಾಹನವನ್ನು ಇಲ್ಲಿಗೆ ಬರುವಂತೆ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಒಟ್ಟಾರೆಯಾಗಿ ಪೊಲೀಸ್ ಮತ್ತು ಆರೋಗ್ಯ ಇಲಾಖೆಗಳಿಗೆ ನೀಡುವ ವ್ಯವಸ್ಥೆಗಳಂತೆ ಅಗ್ನಿಶಾಮಕ ದಳಕ್ಕೂ ಕೂಡ ಕಾರ್ಯಕರ್ತ ಕಲ್ಪಿಸಿದರೆ ಮಾತ್ರ ತುರ್ತು ಸಂದರ್ಭದಲ್ಲಿ ನೆರವಿಗೆ ಬರುವಂತಾಗುತ್ತದೆ. ಇಲ್ಲವಾದರೆ ಮಲ್ಪೆಯ ಅಗ್ನಿಶಾಮಕ ದಳದ ಘಟಕದಂತೆ ಸಿಬ್ಬಂದಿಗಳು ಇದ್ದರೂ ಕೂಡ ಕೆಲಸಕ್ಕೆ ಅಗತ್ಯವಾದ ವಾಹನವಿಲ್ಲದೆ ಪರದಾಡುವಂಥಾಗುತ್ತದೆ, ಹೀಗಾಗಿ ಅತಿ ಶೀಘ್ರದಲ್ಲಿ ಇಲ್ಲ ಸಮಸ್ಯೆಗೆ ಪರಿಹಾರ ನೀಡಬೇಕು ಎನ್ನುವುದು ನಮ್ಮ ಆಶಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ