ಬಿಸಿಲಿಗೆ ಬಳಲಿದ್ದ ಗೋಶಾಲೆಯ ಗೋವುಗಳಿವೆ 3 ಸಾವಿರ ಕೆ.ಜಿ ಕಲ್ಲಂಗಡಿ ಕೊಟ್ಟು ಖುಷಿಪಟ್ಟ ಯುವಕರ ತಂಡ

ವಾತಾವರಣದಲ್ಲಿನ ಉಷ್ಣತೆ ಕೇವಲ ಮನುಷ್ಯರನ್ನು ಮಾತ್ರವಲ್ಲ, ಪ್ರಾಣಿಗಳನ್ನು ಕೂಡ ಕಾಡುತ್ತಿದೆ. ಅದರಲ್ಲೂ ಕೊಟ್ಟಿಗೆಯಿಂದ ಹೊರಗೆ ತಿರುಗಾಡುವ ಹಸುಗಳು ನೀರಿಗಾಗಿ ಸಂಕಟಪಡುತ್ತಿವೆ. ಗೋಪಾರ್ಟಿ ಹೆಸರಲ್ಲಿ ಗೋ ಸೇವೆ ನಡೆಸುತ್ತಿರುವ ಯುವಕರ ತಂಡವೊಂದು ನೀಲಾವರ ಗೋಶಾಲೆಯ ಬಳಲಿದ ಹಸುಗಳಿಗೆ ಕೆ.ಜಿಗಟ್ಟಲೆ ಕಲ್ಲಂಗಡಿ ಕೊಟ್ಟು, ಸಾರ್ಥಕತೆ ಮೆರೆದಿದ್ದಾರೆ.

ಬಿಸಿಲಿಗೆ ಬಳಲಿದ್ದ ಗೋಶಾಲೆಯ ಗೋವುಗಳಿವೆ 3 ಸಾವಿರ ಕೆ.ಜಿ ಕಲ್ಲಂಗಡಿ ಕೊಟ್ಟು ಖುಷಿಪಟ್ಟ ಯುವಕರ ತಂಡ
ಗೋಶಾಲೆಯ ಗೋವುಗಳಿವೆ 3 ಸಾವಿರ ಕೆ.ಜಿ ಕಲ್ಲಂಗಡಿ ಕೊಟ್ಟು ಖುಷಿಪಟ್ಟ ಯುವಕರ ತಂಡ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: May 01, 2024 | 7:28 PM

ಉಡುಪಿ, ಮೇ.01: ಅನಾಥ ಹಸುಗಳ ಆಪ್ತರಕ್ಷಕ ಈ ನೀಲಾವರ ಗೋಶಾಲೆ. ಉಡುಪಿ(Udupi) ಜಿಲ್ಲೆಯಲ್ಲಿ ಪೇಜಾವರ ಮಠಾಧೀಶರ ನಡೆಸುವ ಗೋಶಾಲೆಯಲ್ಲಿ ಸಾವಿರಾರು ಗೋವುಗಳಿವೆ. ಸೆಖೆಯಿಂದ ಸಂಕಟ ಪಡುತ್ತಿರುವ ಗೋವುಗಳಿಗೆ ಯುವಕರ ತಂಡದವರು 3,000 ಕೆ.ಜಿ ಕಲ್ಲಂಗಡಿ ಕೊಟ್ಟು ಖುಷಿಪಟ್ಟಿದ್ದಾರೆ. ಗೋಶಾಲೆಗೆ ಬಂದು ಕಲ್ಲಂಗಡಿ(Watermelon) ಗಳನ್ನು ತಾವೇ ಕೈಯಾರೆ ಕೊಯ್ದು, ತುಂಡು ಮಾಡಿ ಗೋವುಗಳ ಬಾಯಿಗೆ ಕೊಟ್ಟು ಸಂಭ್ರಮಿಸಿದ್ದಾರೆ. ಬಿಸಿಲಿಗೆ ಬಳಲಿದ್ದ ಗೋವುಗಳು ಈ ಸಿಹಿ ನೀರಿನ ಹಣ್ಣುಗಳನ್ನು ತಿಂದು ಖುಷಿಪಟ್ಟವು.

ಗೋ ಸೇವೆ ನಡೆಸುತ್ತಿದೆ ಈ ತಂಡ

ಇದೊಂದು ಅಪರೂಪದ ಯುವಕರ ತಂಡ. ರಘುನಂದನ್ ಹೆಬ್ಬಾರ್ ಎಂಬವರ ನೇತೃತ್ವದಲ್ಲಿ, ಈ ತಂಡ ಗೋ ಸೇವೆ ನಡೆಸುತ್ತಿದೆ. ಯುಗಾದಿ ಗೋಪಾರ್ಟಿ ಹೆಸರಲ್ಲಿ, ಗೋವುಗಳಿಗೆ ಕಾಲ ಕಾಲಕ್ಕೆ ತಿನ್ನಲು ಕೊಡುತ್ತಾ ಬಂದಿದ್ದಾರೆ. ನೀಲಾವರ ಗೋಶಾಲೆಯೂ ಸೇರಿದಂತೆ ಪರಿಸರದ ಹತ್ತಾರು ಗೋಶಾಲೆಗಳಿಗೆ ಈ ತಂಡ ಭೇಟಿ ನೀಡುತ್ತದೆ. ತಮ್ಮ ಕೈಯಲ್ಲಾದಷ್ಟು ಸಹಾಯ ಮಾಡಿ ವಾಪಸ್ ಬರುತ್ತದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಹಿಂದೂ ಕಾರ್ಯಕರ್ತರಿಂದ ನೈತಿಕ ಪೊಲೀಸ್​ಗಿರಿ: ಅಕ್ರಮವಾಗಿ ಗೋವು ಸಾಗಾಟ ಮಾಡ್ತಿದ್ದ ಚಾಲಕನಿಗೆ ಥಳಿತ

ಪ್ರತಿಯೊಬ್ಬರೂ ಕೂಡ ಗೋಸೇವೆ ನಡೆಸಬೇಕು ತಿಂಗಳ ಗಳಿಕೆಯಲ್ಲಿ ಒಂದು ಸಣ್ಣ ಮೊತ್ತವನ್ನು ಪರಿಸರದಲ್ಲಿ ಅಡ್ಡಾಡುವ ಗೋವುಗಳ ಹಿತರಕ್ಷಣೆಗೆ ಬಳಸಬೇಕು ಎನ್ನುವುದು ಇವರ ಆಶಯವಾಗಿದೆ. ಅಕ್ರಮ ಸಾಗಾಟದ ವೇಳೆ ಸಿಕ್ಕಿ ಬಿದ್ದ ಅನಾಥ ಹಸುಗಳಿಗೆ ನೀಲಾವರ ಗೋಶಾಲೆಯೇ ಆಶ್ರಯ ತಾಣವಾಗಿದೆ. ಪಾರ್ಟಿ ಹೆಸರಲ್ಲಿ ಮೋಜು ಮಸ್ತಿ ಮಾಡುವ ಜನರು ಈ ರೀತಿಯ ಗೋಪಾರ್ಟಿ ನಡೆಸಿದರೆ, ಮನಸ್ಸಿಗೂ ಸಂತೋಷ, ಗೋವುಗಳಿಗೂ ಸಂಭ್ರಮ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ