ಉಡುಪಿ ಜಿಲ್ಲೆಯಲ್ಲಿ ವಿನೂತನ ಪ್ರಯೋಗ: ಸಂಚಾರಿ ಚಿತಾಗಾರ ಆರಂಭ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುದೂರಿನಲ್ಲಿ ಕರ್ನಾಟಕದ ಮೊದಲ ಸಂಚಾರಿ ಚಿತಾಗಾರವನ್ನು ಆರಂಭಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ವಿನೂತನ ಪ್ರಯೋಗ: ಸಂಚಾರಿ ಚಿತಾಗಾರ ಆರಂಭ
ಸಂಚಾರಿ ಚಿತಾಗಾರ (ಸಾಂಧರ್ಬಿಕ ಚಿತ್ರ)
Follow us
| Updated By: ವಿವೇಕ ಬಿರಾದಾರ

Updated on:Jan 29, 2023 | 6:46 AM

ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಮುದೂರಿನಲ್ಲಿ ಕರ್ನಾಟಕದ ಮೊದಲ ಸಂಚಾರಿ ಚಿತಾಗಾರವನ್ನು (Mobile Crematorium) ಆರಂಭಿಸಲಾಗಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್​ ವರದಿ ಮಾಡಿದೆ. ಮುದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಗ್ರಾಮೀಣ ಭಾಗದ ಜನರ ಶವ ಸಂಸ್ಕಾರದ ಸಮಸ್ಯೆಗಳನ್ನು ಪರಿಹರಿಸಲು ಈ ನಿರ್ಧಾರವನ್ನು ಕೈಗೊಂಡಿದೆ.

ಮುದೂರು ಗ್ರಾಮದಲ್ಲಿ ಸುಮಾರು 600 ಮನೆಗಳಿದ್ದು, ಯಾರಾದರೂ ಮೃತಪಟ್ಟರೆ ಪಾರ್ಥಿವ ಶರೀರವನ್ನು 40 ಕಿ.ಮೀ ದೂರದಲ್ಲಿರುವ ಕುಂದಾಪುರ ಸ್ಮಶಾನಕ್ಕೆ ಕೊಂಡೊಯ್ಯಬೇಕು. ಗ್ರಾಮಸ್ಥರ ಕಷ್ಟವನ್ನು ಪರಿಗಣಿಸಿ, ಸೊಸೈಟಿಯು ಕೇರಳದ ಸಂಸ್ಥೆಯೊಂದರಿಂದ 5.8 ಲಕ್ಷ ರೂ. ವೆಚ್ಚದ ಮೊಬೈಲ್ ಚಿತಾಗಾರವನ್ನು ಖರೀದಿಸಿತು.

ದೇಹನ್ನು ಸುಡಲು 10 ಕೆ.ಜಿ ತೂಕದ ಎಲ್‌ಪಿಜಿ ಸಿಲಿಂಡರ್ ಬಳಸಲಾಗಿದೆ. ಇದರಿಂದ ಶವ ಎರಡು ಗಂಟೆಯೊಳಗೆ ಬೂದಿಯಾಗುತ್ತದೆ. ಸಾವಿನ ಮನೆಗೆ ಈ ವಾಹನ ಹೋಗಲಿದ್ದು, ಅಂತಿಮಸಂಸ್ಕಾರಕ್ಕೆ ಯಾವುದೇ ಶುಲ್ಕವನ್ನು ತೆಗೆದುಕೊಳ್ಳುವುದಿಲ್ಲ.

ಸ್ಮಶಾನದೊಳಗೆ ಪಾರ್ಥಿವ ಶರೀರವನ್ನು ಇರಿಸುವ ಮೂಲಕ ಮಾಡಬೇಕಾದ ಎಲ್ಲಾ ಸಾಂಪ್ರದಾಯಿಕ ಆಚರಣೆಗಳನ್ನು ಕೈಗೊಳ್ಳಬಹುದು. ದಹನ ಪ್ರಕ್ರಿಯೆಯಲ್ಲಿ ಹೊಗೆ ಅಥವಾ ದುರ್ವಾಸನೆ ಹೊರಹೊಮ್ಮುವುದಿಲ್ಲ. ಆರು ಅಡಿ ಉದ್ದದ ಮತ್ತು ಉಕ್ಕಿನಿಂದ ಮಾಡಲಾದ ಮೊಬೈಲ್ ಸ್ಮಶಾನವನ್ನು ಯಾರ ಮನೆ ಬಾಗಿಲಿಗೆ ಟ್ರಕ್‌ನಲ್ಲಿ ಸಾಗಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:44 am, Sun, 29 January 23

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​