AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಶ್ರೀಕೃಷ್ಣ ದೇವರಿಗೆ ಕಾಶೀ ಮಠಾಧೀಶರಿಂದ ಪಚ್ಚೆ ಕಲ್ಲಿನ ಸ್ವರ್ಣ ಹಾರ ಸಮರ್ಪಣೆ

ಪ್ರಪಂಚದ ಎಲ್ಲಾ ವಸ್ತುಗಳೂ ಭಗವಂತನ ಕೊಡುಗೆಗಳಾಗಿವೆ ಎಂಬ ಅನುಸಂಧಾನದ ಮೂಲಕ ದೇವರಿಗೆ ವಸ್ತುಗಳ ಸಮರ್ಪಣೆಯಾಗಬೇಕು ಎಂದು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚಿಸಿದರು.

ಉಡುಪಿ ಶ್ರೀಕೃಷ್ಣ ದೇವರಿಗೆ ಕಾಶೀ ಮಠಾಧೀಶರಿಂದ ಪಚ್ಚೆ ಕಲ್ಲಿನ ಸ್ವರ್ಣ ಹಾರ ಸಮರ್ಪಣೆ
ಪಚ್ಚೆ ಕಲ್ಲಿನ ಸ್ವರ್ಣ ಹಾರ ಸಮರ್ಪಣೆ
TV9 Web
| Updated By: ganapathi bhat|

Updated on: Dec 31, 2021 | 5:48 PM

Share

ಉಡುಪಿ: ಉಡುಪಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕೃಷ್ಣ ಮಠದ ಕೃಷ್ಣ ದೇವರಿಗೆ ಸಮರ್ಪಿಸಲು ಕಾಶೀ ಮಠ ಸಂಸ್ಥಾನದ ಶ್ರೀ ಸಂಯಮೀಂದ್ರತೀರ್ಥ ಶ್ರೀಪಾದರು ಕೊಡಮಾಡಿದ ಪಚ್ಚೆ ಕಲ್ಲಿನ ಸ್ವರ್ಣ ಹಾರವನ್ನು ಶುಕ್ರವಾರ ಗೌಡ ಸಾರಸ್ವತ ಸಮಾಜದ ದೇವಸ್ಥಾನಗಳ ಪ್ರಮುಖರು ಹಸ್ತಾಂತರಿಸಿದರು. ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪಚ್ಚೆ ಕಲ್ಲಿನ ಸ್ವರ್ಣ ಹಾರವನ್ನು ಸ್ವೀಕರಿಸಿದರು.

ಪ್ರಪಂಚದ ಎಲ್ಲಾ ವಸ್ತುಗಳೂ ಭಗವಂತನ ಕೊಡುಗೆಗಳಾಗಿವೆ ಎಂಬ ಅನುಸಂಧಾನದ ಮೂಲಕ ದೇವರಿಗೆ ವಸ್ತುಗಳ ಸಮರ್ಪಣೆಯಾಗಬೇಕು ಎಂದು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶೀರ್ವಚಿಸಿದರು. ಶ್ರೀಕೃಷ್ಣನ ವಿಗ್ರಹದಲ್ಲಿ ದೇವರನ್ನು ನೋಡಿ ಈ ಹಾರವನ್ನು ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ಸಮರ್ಪಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಶ್ರೀಕೃಷ್ಣನ ಅಂತರಂಗದ ಭಕ್ತನಾಗಿದ್ದ ಉದ್ದವನಿಗೆ ಶ್ರೀಕೃಷ್ಣನ ಅಗಲುವಿಕೆ ತಾಳಲಾರದೆ ಹೋಯಿತು. ಆಗ ಶ್ರೀಕೃಷ್ಣ ತಾನು ಗ್ರಂಥದಲ್ಲಿ (ಶ್ರೀಮದ್ಭಾಗವತ) ಮತ್ತು ಜ್ಞಾನಿಗಳಲ್ಲಿರುವುದಾಗಿ ತಿಳಿಸಿದ. ಜ್ಞಾನವೆಂದರೆ ಯಾವುದನ್ನು ತಿಳಿದುಕೊಂಡರೆ ಭಗವಂತನನ್ನು ತಿಳಿಯಲಾಗುತ್ತದೋ ಅದು. ಮಧ್ವಾಚಾರ್ಯರು ಸ್ವತಂತ್ರ ತತ್ವ ಮತ್ತು ಅಸ್ವತಂತ್ರ ತತ್ವ ಎಂಬೆರಡು ಚಿಂತನೆಗಳನ್ನು ತಿಳಿಸಿದ್ದಾರೆ. ಸ್ವತಂತ್ರ ತತ್ವವೆಂದರೆ ಭಗವಂತನ ಅರಿವು. ಉಳಿದೆಲ್ಲವೂ ಭಗವಂತನ ಅಧೀನವಾದ ಅಸ್ವತಂತ್ರ ತತ್ವ. ಮಧ್ವಾಚಾರ್ಯರು ಭಗವಂತನ ವಿಶೇಷ ಸನ್ನಿಧಾನವಿರುವ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿ ಸಾಧಕರಿಗೆ ಅನುವು ಮಾಡಿಕೊಟ್ಟರು ಎಂದು ಅದಮಾರು ಶ್ರೀಪಾದರು ನುಡಿದರು.

ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ಇತ್ತೀಚಿಗೆ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ದ್ಯೋತಕವಾಗಿ ಈ ಹಾರವನ್ನು ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಕೊಟ್ಟಿದ್ದಾರೆಂದು ಜಿ.ಎಸ್‌.ಬಿ ದೇವಸ್ಥಾನಗಳ ಒಕ್ಕೂಟದ ಉಪಾಧ್ಯಕ್ಷ ದಿನೇಶ್ ಕಾಮತ್ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್, ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ರಾಘವೇಂದ್ರ ಕಿಣಿ, ಕೋಟೇಶ್ವರ ಪಟ್ಟಾಾಭಿರಾಮಚಂದ್ರ ದೇವಸ್ಥಾನದ ಆಡಳಿತೆ ಮೊಕ್ತೇಸರ ಶ್ರೀಧರ ಕಾಮತ್, ಮಂಜೇಶ್ವರ ಅನಂತೇಶ್ವರ ದೇವಸ್ಥಾನದ ಆಡಳಿತೆ ಮೊಕ್ತೇಸರ ದಿನೇಶ್ ಕಾಮತ್, ಮಂಗಳೂರಿನ ನರೇಶ ಶೆಣೈ, ಮೂಲ್ಕಿ ವೆಂಕಟರಮಣ ದೇವಸ್ಥಾನದ ಮೊಕ್ತೇಸರ ಅತುಲ್ ಕುಡ್ವ, ಸೋಮೇಶ್ವರ ವೆಂಕಟರಮಣ ದೇವಸ್ಥಾನದ ಮೊಕ್ತೇಸರರಾದ ರಾಘವೇಂದ್ರ ಭಕ್ತ, ಮಾಧವ ಕಾಮತ್, ಉಡುಪಿ ವೆಂಕಟರಮಣ ದೇವಸ್ಥಾನದ ಆಡಳಿತೆ ಮೊಕ್ತೇಸರ ಪಿ. ವಿಟ್ಠಲದಾಸ ಶೆಣೈ, ಮೊಕ್ತೇಸರ ಎಂ. ವಿಶ್ವನಾಥ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೇಷರತ್ ಆಗಿ ನನ್ನ ಹೇಳಿಕೆಯನ್ನು ಹಿಂಪಡೆಯುತ್ತೇನೆ; ಉಡುಪಿ ಶ್ರೀಕೃಷ್ಣ ಮಠದಲ್ಲಿ ನೀಡಿದ್ದ ಹೇಳಿಕೆ ಹಿಂಪಡೆದ ಸಂಸದ ತೇಜಸ್ವಿ ಸೂರ್ಯ

ಇದನ್ನೂ ಓದಿ: ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡಲು ವಿದ್ಯಾರ್ಥಿನಿಯರ ಮನವಿ; ಉಡುಪಿಯ ಸರ್ಕಾರಿ ಕಾಲೇಜೊಂದರಲ್ಲಿ ಘಟನೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ