ನಮ್ಮ ಸಮುದಾಯ ಶಿಕ್ಷಣದಿಂದ ವಂಚಿತರಾಗಬಾರದು: ಮುಸ್ಲಿಂ ಸಮುದಾಯಕ್ಕೆ ಉಡುಪಿ ಖಾಜಿ ಕಿವಿಮಾತು

‘ಪೋಷಕರು ತಮ್ಮ ಮಕ್ಕಳ ಪರೀಕ್ಷೆ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಸೂಕ್ಷ್ಮ ವಿಷಯಗಳನ್ನು ದೀರ್ಘ ದೃಷ್ಟಿಯಿಂದ ನೋಡಬೇಕು’ ಎಂದು ಮನವಿ ಮಾಡಿದರು.

ನಮ್ಮ ಸಮುದಾಯ ಶಿಕ್ಷಣದಿಂದ ವಂಚಿತರಾಗಬಾರದು: ಮುಸ್ಲಿಂ ಸಮುದಾಯಕ್ಕೆ ಉಡುಪಿ ಖಾಜಿ ಕಿವಿಮಾತು
ಖಾಜಿ ಅಬ್ದುಲ್ ಹಮೀದ್ ಮುಸಲಿಯಾರ್ ಮಾಣಿ
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 27, 2022 | 2:45 PM

ಉಡುಪಿ: ಕರ್ನಾಟಕದಲ್ಲಿ ಸೋಮವಾರದಿಂದ (ಮಾರ್ಚ್ 28) ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಲಿದೆ. ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಕೆಲ ವಿದ್ಯಾರ್ಥಿನಿಯರು ವಿದ್ಯಾಭ್ಯಾಸಕ್ಕಿಂತಲೂ ಧರ್ಮವೇ ಮುಖ್ಯ ಎಂಬರ್ಥದಲ್ಲಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಉಡುಪಿಯ ಮುಸ್ಲಿಂ ಸಮುದಾಯದ ಧಾರ್ಮಿಕ ಮುಖಂಡ ಖಾಜಿ ಅಬ್ದುಲ್ ಹಮೀದ್ ಮುಸಲಿಯಾರ್ ಮಾಣಿ, ‘ಪೋಷಕರು ತಮ್ಮ ಮಕ್ಕಳ ಪರೀಕ್ಷೆ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಸೂಕ್ಷ್ಮ ವಿಷಯಗಳನ್ನು ದೀರ್ಘ ದೃಷ್ಟಿಯಿಂದ ನೋಡಬೇಕು. ದೇಶದಲ್ಲಿ ಕೋಮು ಸೌಹಾರ್ದತೆಗೆ ನಮ್ಮಿಂದ ಧಕ್ಕೆ ಆಗಬಾರದು’ ಎಂದು ಮನವಿ ಮಾಡಿದರು.

ಸಮವಸ್ತ್ರದ ಜತೆಗೆ ಹಿಜಾಬ್​ ವಿಚಾರವೂ ಇದೀಗ ಸುಪ್ರೀಂಕೋರ್ಟ್​ನಲ್ಲಿದೆ. ಸುಪ್ರೀಂಕೋರ್ಟ್​ನಲ್ಲಿ ನ್ಯಾಯ ಸಿಗುವ ಸಂಪೂರ್ಣ ವಿಶ್ವಾಸವಿದೆ. ನಮ್ಮ ಸಮುದಾಯ ಶಿಕ್ಷಣದಿಂದ ವಂಚಿತರಾಗಬಾರದು. ಭಾರತ ಒಂದು ಜಾತ್ಯತೀತ ರಾಷ್ಟ್ರ. ಸಂವಿಧಾನವು ಅವರವರ ಧರ್ಮ ಆಚರಣೆಗೆ ಅವಕಾಶ ನೀಡಿದೆ. ಸೋಷಿಯಲ್​ ಮೀಡಿಯಾದಲ್ಲಿ ವೈರಲ್ ಆಗುವ ತಪ್ಪು ಮಾಹಿತಿಗಳು ಸಮಸ್ಯೆ ಬಿಗಡಾಯಿಸಲು ಕಾರಣವಾಗಿದೆ ಎಂದು ನುಡಿದರು.

ಪರೀಕ್ಷೆಗೆ ತಪ್ಪಿಸಿಕೊಳ್ಳಬೇಡಿ: ವಿದ್ಯಾರ್ಥಿನಿಯರಿಗೆ ಉಲೆಮಾ ಕರೆ

ಮಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ತಪ್ಪದೆ ಪರೀಕ್ಷೆಗೆ ಹಾಜರಾಗಬೇಕು ಎಂದು ಮುಸ್ಲಿಂ ಧರ್ಮಗುರು, ಉಲೆಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಕಾಂತಾಪುರಂ ಕರೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರ ಸುಪ್ರಿಂಕೋರ್ಟ್​ನಲ್ಲಿದೆ. ಅಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ಅಲ್ಲಿಯವರೆಗೆ ಕಾಯುವುದರ ಜೊತೆಗೆ ಪರೀಕ್ಷೆಯೂ ಮುಖ್ಯ. ಎಲ್ಲರೂ ಗರಿಷ್ಠ ಅನುಕೂಲಗಳನ್ನು ಬಳಸಿ ಪರೀಕ್ಷೆ ಬರೆಯಬೇಕು ಎಂದು ಹೇಳಿದರು.

ಟಿಪ್ಪು ಕಥನ ಇರಬೇಕು: ಯು.ಟಿ.ಖಾದರ್

ಇತಿಹಾಸ ಪಠ್ಯಗಳಲ್ಲಿ ಟಿಪ್ಪು ಕಥನ ಕೈಬಿಡುವುದು ತಪ್ಪು. ಇಂಗ್ಲೆಂಡ್, ಫ್ರಾನ್ಸ್ ಮ್ಯೂಸಿಯಂಗಳಲ್ಲಿಯೂ ಟಿಪ್ಪು ಅವರ ಇತಿಹಾಸದ ಕುರುಹುಗಳಿವೆ. ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ಜೊತೆ ಹೋರಾಡಿದ್ದವರು ಟಿಪ್ಪುಸುಲ್ತಾನ್. ಕರ್ನಾಟಕದ ವಿವಿಧೆಡೆಯೂ ಟಿಪ್ಪು ಹೋರಾಟದ ಕಥೆಗಳಿವೆ. ಬೆಂಗಳೂರಿನ ನಂದಿಬೆಟ್ಟ, ಮಂಗಳೂರಿನ ಸುಲ್ತಾನ್ ಬತೇರಿ ಸೇರಿದಂತೆ ರಾಜ್ಯಾದ್ಯಂತ ಟಿಪ್ಪು ಸಾಧನೆಯ ಚಿತ್ರಣವಿದೆ. ಶೃಂಗೇರಿ ದೇವಸ್ಥಾನದಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ. ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ ಪೂಜೆ ನಡೆಯುತ್ತದೆ. ಇದನ್ನು ತೆಗೆಯಲು ಸಾಧ್ಯವಿಲ್ಲ. ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆದರೆ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ. ಭಾರತ ದೇಶದ ರಾಜರುಗಳು ಬ್ರಿಟಿಷರ ವಿರುದ್ಧ ಹೋರಾಡಿದ ಬಗ್ಗೆ ಇತಿಹಾಸ ಕಲಿಕೆಯಿಂದ ವಂಚಿತರಾಗುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ಧರಿಸಿಕೊಂಡು ಬಂದರೆ ಎಕ್ಸಾಂಗೆ ಅವಕಾಶ ಇಲ್ಲ

ಇದನ್ನೂ ಓದಿ: ಹಿಜಾಬ್, ವ್ಯಾಪಾರ ನಿಷೇಧ ಬೆನ್ನಲ್ಲೇ ಈಗ ಟಿಪ್ಪು ಪಠ್ಯ ಸರದಿ; ಶಿಕ್ಷಣ ಇಲಾಖೆಗೆ ಶುರುವಾಯ್ತು ಮತ್ತೊಂದು ಟೆನ್ಷನ್

Published On - 1:54 pm, Sun, 27 March 22

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು