AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರನ್ನೂ ಬಿಡದ ಖದೀಮರು: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ವಂಚನೆ

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್​ಸೈಟ್​​ ಮೂಲಕ ಕಿಡಿಗೇಡಿಗಳು ಭಕ್ತರಿಂದ ಹಣ ಪಡೆದು ವಂಚಿಸಿರುವಂತಹ ಘಟನೆ ನಡೆದಿದೆ. ಸದ್ಯ ಈ ಕುರಿತಾಗಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ರೀತಿಯ ಘಟನೆ ಹಿಂದೊಮ್ಮೆ ನಡೆದಿತ್ತು.

ದೇವರನ್ನೂ ಬಿಡದ ಖದೀಮರು: ಕೊಲ್ಲೂರು ಮೂಕಾಂಬಿಕಾ ದೇಗುಲದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ವಂಚನೆ
ಕೊಲ್ಲೂರು ಮೂಕಾಂಬಿಕೆ Image Credit source: tv9 kannada
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Sep 10, 2026 | 4:05 PM

Share

ಉಡುಪಿ, ಸೆಪ್ಟೆಂಬರ್​ 10: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಂದ ಹಣ ಪಡೆದು ವಂಚಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ದೇವಸ್ಥಾನ ಹಾಗೂ ಜಗದಾಂಬಿಕಾ ಅತಿಥಿಗೃಹದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಕಿಡಿಗೇಡಿಗಳು ವಂಚಿಸಿದ್ದಾರೆ. ಸದ್ಯ ಈ ಕುರಿತಾಗಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅತಿಥಿಗೃಹದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿ

ದೇವಸ್ಥಾನಕ್ಕೆ ಬರುವ ಭಕ್ತರಿಗೆ ಕೊಠಡಿಗಳನ್ನು ಕಾಯ್ದಿರಿಸುವುದಾಗಿ ನಂಬಿಸಲು ಖದೀಮರು ಜಗದಾಂಬಿಕಾ ಅತಿಥಿಗೃಹದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ರೂಪಿಸಿದ್ದಾರೆ. ಕೊಠಡಿ ಬುಕಿಂಗ್ ಹೆಸರಿನಲ್ಲಿ ಭಕ್ತರನ್ನು ವಾಟ್ಸಾಪ್ ಮೂಲಕ ಸಂಪರ್ಕಿಸಿ, ಫೋನ್ ಪೇ ಕ್ಯೂಆರ್ ಕೋಡ್ ಕಳುಹಿಸಿ ಹಣ ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದರು. ಹಣ ಪಾವತಿಯಾದ ಬಳಿಕ ನಕಲಿ ರಶೀದಿ ನೀಡಿ ಹಲವು ಭಕ್ತರಿಗೆ ವಂಚಿಸಿದ್ದಾರೆ.

LIVE TV

ಇದನ್ನೂ ಓದಿ: 11.32 ಕೋಟಿ ರೂ. ವೆಚ್ಚದಲ್ಲಿ ಹೊಸ ರೂಪ ಪಡೆದ ಬೈಂದೂರಿನ ಸೋಮೇಶ್ವರ ಬೀಚ್: ಪ್ರವಾಸಿಗರನ್ನು ಸೆಳೆಯುತ್ತಿದೆ ‘ಪ್ರಕೃತಿ-ಆಧುನಿಕತೆಯ’ ಸಂಗಮ

ಈ ವಂಚನೆ ಜಾಲದ ಕುರಿತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಅವರು ಕೊಲ್ಲೂರು ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮತ್ತೆ ಖದೀಮರಿಂದ ವಂಚನೆ: ಭಕ್ತರಲ್ಲಿ ಆತಂಕ 

ಈ ಹಿಂದೆ ಕೂಡ ಇದೇ ರೀತಿ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರಿಗೆ ವಂಚನೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದರು. ಇದೀಗ ಮತ್ತೆ ಅದೇ ರೀತಿಯ ಪ್ರಕರಣ ನಡೆದಿರುವುದು ಭಕ್ತರಲ್ಲಿ ತೀವ್ರ ಆತಂಕವನ್ನುಂಟು ಮಾಡಿದೆ.

ಇದನ್ನೂ ಓದಿ: ‘ಆನ್​​ಲೈನ್​​ನಲ್ಲಿಯೇ ಕಥೆ-ಕಾದಂಬರಿ ಓದಿ ಹಣ ಸಂಪಾದಿಸಿ’: ಬಣ್ಣದ ಮಾತು ನಂಬಿ ಹಣ ಕಳೆದುಕೊಂಡ ಸಾವಿರಾರು ಮಂದಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್