AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಮಣ ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಬ್ರಹ್ಮಕಲಶೋತ್ಸವ ನಡೆಸಲು ನಿರ್ಧಾರ: ದೇವಸ್ಥಾನ ವ್ಯವಸ್ಥಾಪನಾ ಸಮಿತಿ

ಜನವರಿ 14 ಮಕರ ಸಂಕ್ರಮಣ ನಂತರ ಬ್ರಹ್ಮಕಲಶೋತ್ಸವ ನಡೆಸಬೇಕೆಂಬ ನಿರ್ಧಾರ ಮಾಡಿದ್ದೇವೆ ಎಂದು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಹೇಳಿದ್ದಾರೆ.

ಸಂಕ್ರಮಣ ನಂತರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಬ್ರಹ್ಮಕಲಶೋತ್ಸವ ನಡೆಸಲು ನಿರ್ಧಾರ: ದೇವಸ್ಥಾನ ವ್ಯವಸ್ಥಾಪನಾ ಸಮಿತಿ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ
TV9 Web
| Edited By: ವಿವೇಕ ಬಿರಾದಾರ|

Updated on:Nov 30, 2022 | 3:59 PM

Share

ಉಡುಪಿ: ಕೊಲ್ಲೂರು ಮೂಕಾಂಬಿಕಾ (kollur mookambika) ವ್ಯವಸ್ಥಾಪನಾ ಧಾರ್ಮಿಕ ವಿಧಿ ಬಗ್ಗೆ ಯಾವುದೇ ಗೊಂದಲಗಳು ಇಲ್ಲ. ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಸಂಬಂಧಪಟ್ಟಂತೆ 5 ಮೀಟಿಂಗ್​ಗಳು ನಡೆದಿವೆ. ಜನವರಿ 14 ಮಕರ ಸಂಕ್ರಮಣ ನಂತರ ಬ್ರಹ್ಮಕಲಶೋತ್ಸವ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವೆ ಎಂದು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಹೇಳಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಅನೇಕ ಚರ್ಚೆ ನಡೆದಿತ್ತು. ಫೆಬ್ರವರಿಯಲ್ಲಿ ಬ್ರಹ್ಮಕಲಶೋತ್ಸವ ನಡೆಸಿ ಮಾರ್ಚ್​ನಲ್ಲಿ ವಾರ್ಷಿಕ ಉತ್ಸವ ಮಾಡಲು ಅರ್ಚಕರಿಂದ ವಿರೋಧ ವ್ಯಕ್ತವಾಗಿತ್ತು. ಅಷ್ಟಬಂಧ ಲೇಪನ ಮಾಡಿ 48 ದಿನ ಕೊಲ್ಲೂರಿನ ಉತ್ಸವ ಮಾಡುವಂತಿಲ್ಲ ಎಂದು ಅರ್ಚಕರು ಪಟ್ಟು ಹಿಡದಿದ್ದರು. ಈ ಸಂಬಂಧ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಮಾತನಾಡಿ ಫೆಬ್ರವರಿ 7 ರಿಂದ 17 ರವರೆಗೆ ಮೂಲ ನಕ್ಷತ್ರದಲ್ಲಿ ವಾರ್ಷಿಕೋತ್ಸವ ಮಾಡಬೇಕೆಂಬ ಸಂಪ್ರದಾಯ ಇದೆ. ಫೆಬ್ರವರಿಯಲ್ಲಿ ದಿನಾಂಕ ನಿಗದಿ ಮಾಡಿದ್ದೇವೆ ಇದು ಅಂತಿಮ ಅಲ್ಲ ಎಂದು ತಿಳಿಸಿದರು.

ಆಡಳಿತ ಮಂಡಳಿ ಮತ್ತು ಅರ್ಚಕರ ನಡುವೆ ಈ ಬಗ್ಗೆ ಚರ್ಚೆಗಳು ಆಗಿವೆ. ಬ್ರಹ್ಮಕಲಶೋತ್ಸವ ನಡೆದು 48 ದಿವಸದ ನಂತರ ಉತ್ಸವ ಆಗಬೇಕು ಎಂದು ಸಭೆಯಲ್ಲಿ ಯಾರು ನಮ್ಮ ಗಮನಕ್ಕೆ ತಂದಿಲ್ಲ. ಮೂಕಾಂಬಿಕಾ ದೇವಿಯ ಸನ್ನಿಧಿಯಲ್ಲಿ ಏನೇ ಕಾರ್ಯಕ್ರಮ ಮಾಡಿದರು ಅದು ಲೋಕದ ಉದ್ದಾರಕ್ಕಾಗಿ. ನಾವು ಯಾವುದೇ ಶಿಷ್ಟಾಚಾರದ ವಿರುದ್ಧವಾಗಿ ಬ್ರಹ್ಮಕಲಶೋತ್ಸವವನ್ನು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪತ್ರ ಬರೆದ ನಂತರ ಮುಜರಾಯಿ ಇಲಾಖೆ ಶೈವಾಗಮ ಪಂಡಿತರನ್ನು ಕಳುಹಿಸಿಕೊಟ್ಟಿದೆ. ಅರ್ಚಕರು ವ್ಯವಸ್ಥಾಪರ ಸಮಿತಿ ಮತ್ತು ಶೈವಾಗಮ ಪಂಡಿತರ ಒಗ್ಗೂಡುವಿಕೆಯಲ್ಲಿ ಚರ್ಚೆಗಳು ಆಗಿವೆ. ಆಡಳಿತಾತ್ಮಕ ವಿಚಾರಗಳು ಮತ್ತು ಶಿಷ್ಟಾಚಾರಗಳ ಬಗ್ಗೆ ಚರ್ಚೆಗಳು ನಡೆಯಿತು. ಬ್ರಹ್ಮಕಲಶ ನಂತರ ದಡ ಸಂಪ್ರೋಕ್ಷಣೆ ಎಂಬುದನ್ನು ಮಾಡುತ್ತೇವೆ. ಚರ್ಚೆಯಲ್ಲಿ ಆದ ವಿಚಾರಗಳನ್ನು ಮುಜರಾಯಿ ಇಲಾಖೆಗೆ ಶೈವಾಗಮ ಪಂಡಿತರು ಸಲ್ಲಿಕೆ ಮಾಡುತ್ತಾರೆ. ಮುಜುರಾಯಿ ಇಲಾಖೆ ಸೂಚನೆ ಕೊಟ್ಟ ಪ್ರಕಾರ ನಾವು ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಅಷ್ಟ ಬಂದ ಬ್ರಹ್ಮಕಲಕೋತ್ಸವ ಮಾಡಲು ಅರ್ಚಕರು ವ್ಯವಸ್ಥಾಪನ ಸಮಿತಿ ಊರಿನ ಗ್ರಾಮಸ್ಥರು, ಭಕ್ತರು ಉತ್ತುಕರಾಗಿದ್ದೇವೆ. ಅರ್ಚಕರಿಗೂ ವ್ಯವಸ್ಥಾಪನ ಸಮಿತಿಗೂ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ದೇವಸ್ಥಾನದ ಗರ್ಭಗುಡಿಯಲ್ಲಿ ಅಷ್ಟಬಂಧ ಹಾಕಿದ ನಂತರ 48 ದಿವಸ ಅದು ಗಟ್ಟಿಯಾಗಲು ಬಿಡಬೇಕು ಎಂದು ಎಲ್ಲ ಲಿಖಿತ ರೂಪದಲ್ಲಿಲ್ಲ. ಅರ್ಧ ಮಂಡಲ ಅಥವಾ ಕಾಲು ಮಂಡಲ ಬಿಟ್ಟು ದಡ ಸಂಪ್ರೋಕ್ಷಣೆ ಮಾಡಬಹುದು ಎಂಬ ಅಭಿಪ್ರಾಯ ಇದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ್ ಕ್ಲಿಕ್​ ಮಾಡಿ

Published On - 3:57 pm, Wed, 30 November 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ