AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು ದೇಗುಲದಲ್ಲಿ ಟಿಪ್ಪು ನೆನಪಿಗೆ ನಡೆಯುವ ಸಲಾಂ ಮಂಗಳಾರತಿ ಹೆಸರು ಬದಲಿಸಲು ವಿಶ್ವ ಹಿಂದೂ ಪರಿಷತ್ ಮನವಿ

ಟಿಪ್ಪು ಸಾವಿರಾರು ಹಿಂದೂಗಳ ನರಮೇಧ ನಡೆಸಿದ್ದಾನೆ. ಟಿಪ್ಪು ನೂರಾರು ದೇವಸ್ಥಾನಗಳು ಧ್ವಂಸ ಮಾಡಿದ್ದಾರೆ. ಅವರ ಹೆಸರಿನಲ್ಲಿ ಮಂಗಳಾರತಿ ನಡೆಸುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಆಗುತ್ತದೆ. ಸಲಾಂ ಹೆಸರಲ್ಲಿ ಮಂಗಳಾರತಿ ಗುಲಾಮಗಿರಿಯ ಸಂಕೇತ ಎಂದು ಅವರು ತಿಳಿಸಿದ್ದಾರೆ.

ಕೊಲ್ಲೂರು ದೇಗುಲದಲ್ಲಿ ಟಿಪ್ಪು ನೆನಪಿಗೆ ನಡೆಯುವ ಸಲಾಂ ಮಂಗಳಾರತಿ ಹೆಸರು ಬದಲಿಸಲು ವಿಶ್ವ ಹಿಂದೂ ಪರಿಷತ್ ಮನವಿ
ವಿಶ್ವ ಹಿಂದೂ ಪರಿಷತ್ ಮನವಿ
TV9 Web
| Updated By: ganapathi bhat|

Updated on:Mar 26, 2022 | 3:29 PM

Share

ಉಡುಪಿ: ಕೊಲ್ಲೂರು ಮೂಕಾಂಬಿಕ ದೇಗುಲದಲ್ಲಿ ನಡೆಯುವ ಸಲಾಂ ಮಂಗಳಾರತಿ ಎಂಬ ಆರತಿಯ ಹೆಸರು ತೆಗೆಯುವಂತೆ ಆಗ್ರಹ ವ್ಯಕ್ತವಾಗಿದೆ. ಈ ಬಗ್ಗೆ ದೇಗುಲದ ಅಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್‌ ಮನವಿ ಮಾಡಿದೆ. ಟಿಪ್ಪು ಸುಲ್ತಾನ್ ನೆನಪಿಗಾಗಿ ನಡೆಯುವ ಮಂಗಳಾರತಿಯ ಸಲಾಂ ಮಂಗಳಾರತಿ ಎಂಬ ಹೆಸರನ್ನು ತೆಗೆಯಬೇಕು ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಟಿಪ್ಪು ಕ್ರೂರಿ, ಮತಾಂಧ, ಹಿಂದೂ ವಿರೋಧಿ ಎಂದು ವಿಹಿಂಪ ಹೇಳಿದೆ. ಟಿಪ್ಪು ಸಾವಿರಾರು ಹಿಂದೂಗಳ ನರಮೇಧ ನಡೆಸಿದ್ದಾನೆ. ಟಿಪ್ಪು ನೂರಾರು ದೇವಸ್ಥಾನಗಳು ಧ್ವಂಸ ಮಾಡಿದ್ದಾರೆ. ಅವರ ಹೆಸರಿನಲ್ಲಿ ಮಂಗಳಾರತಿ ನಡೆಸುವುದು ಸರಿಯಲ್ಲ. ಇದರಿಂದ ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ಆಗುತ್ತದೆ. ಸಲಾಂ ಹೆಸರಲ್ಲಿ ಮಂಗಳಾರತಿ ಗುಲಾಮಗಿರಿಯ ಸಂಕೇತ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಕ್ರಮ ಕೈಗೊಳ್ಳಬೇಕು. ಸಲಾಂ ಹೆಸರನ್ನು ತೆಗೆದು ದೇವರ ಹೆಸರಲ್ಲಿ ಆರತಿ ಮಾಡಿ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷ, ಕಾರ್ಯನಿರ್ವಹಣಾಧಿಕಾರಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಗೆ ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ದೇವಾಲಯದಲ್ಲಿ ಜಾತ್ರಾ ಮಹೋತ್ಸವ ವೇಳೆ ಮಾಡಲಾಗುವ ಈ ಆರತಿಯ ಹೆಸರು ಬದಲಿಸುವಂತೆ ಆಗ್ರಹ ಕೇಳಿಬಂದಿದೆ.

ಕೊಲ್ಲೂರು ಜಾತ್ರೆಯಲ್ಲಿ ಮುಸ್ಲಿಮರಿಗೆ ಅವಕಾಶ ನೀಡಬೇಡಿ ಎಂದು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಈ ಮೊದಲು ಮನವಿ ಸಲ್ಲಿಕೆ ಮಾಡಲಾಗಿತ್ತು. ಕೊಲ್ಲೂರು ಪಂಚಾಯತಿಗೆ ವಿಶ್ವ ಹಿಂದೂ ಪರಿಷತ್ ಮನವಿ ಸಲ್ಲಿಸಿತ್ತು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕೊಲ್ಲೂರು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮನವಿ ಮಾಡಲಾಗಿತ್ತು. ಬಳಿಕ ಮುಸ್ಲಿಂ ವ್ಯಾಪಾರಿಗಳ ಜತೆ ಪಂಚಾಯಿತಿ ಅಧ್ಯಕ್ಷ ಚರ್ಚೆ ನಡೆಸಿದ್ದರು. ನಂತರ ದೇವಾಲಯದ ವಠಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ನಿರ್ಧರಿಸಲಾಗಿತ್ತು. ಆ ಬಳಿಕ ಇದೀಗ ಸಲಾಂ ಪೂಜೆಯ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ದೇವಾಲಯದಲ್ಲಿ ಮನವಿ ಮಾಡಿದೆ.

ಇದನ್ನೂ ಓದಿ: Budget 2022: ಕಾಶಿಯಾತ್ರೆ ಕೈಗೊಳ್ಳುವವರಿಗೆ ಸಹಾಯಧನ; ಧರ್ಮಸ್ಥಳ, ಕುಕ್ಕೆ, ಕೊಲ್ಲೂರು, ತಿರುಪತಿ, ಮಂತ್ರಾಲಯಕ್ಕೆ ಪ್ಯಾಕೇಜ್ ಟ್ರಿಪ್

ಇದನ್ನೂ ಓದಿ: ಹಿಂದೂ ಜಾತ್ರೆಗಳು ಇನ್ನು ಹಿಂದೂಗಳಿಂದ, ಹಿಂದೂಗಳಿಗೋಸ್ಕರ ಮತ್ತು ಹಿಂದೂಗಳಿಗೆ ಮಾತ್ರ: ಹಿಂದೂ ಕಾರ್ಯಕರ್ತರು

Published On - 2:30 pm, Sat, 26 March 22