AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ; ಆಡಳಿತ ಮಂಡಳಿಯಿಂದ ಸೂಚನೆ

Coronavirus: ಆಧಾರ್ ಕಾರ್ಡ್ ತೋರಿಸಿದರಷ್ಟೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬರುವವರಿಗೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಭಕ್ತಾದಿಗಳಿಗೆ ಲಸಿಕೆ ಹಾಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಕೂಡ ಕಡ್ಡಾಯ ಮಾಡಲಾಗಿದೆ.

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಾರ್ಡ್ ಕಡ್ಡಾಯ; ಆಡಳಿತ ಮಂಡಳಿಯಿಂದ ಸೂಚನೆ
ಕೊಲ್ಲೂರು ಮೂಕಾಂಬಿಕೆ ದೇಗುಲ
TV9 Web
| Edited By: |

Updated on:Sep 04, 2021 | 4:10 PM

Share

ಉಡುಪಿ: ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಆಧಾರ್ ಕಡ್ಡಾಯ ಎಂದು ಆಡಳಿತ ಮಂಡಳಿ ಸೂಚನೆ ನೀಡಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ದೇಗುಲದಲ್ಲಿ ಹೀಗೆ ಆದೇಶ ಹೊರಡಿಸಲಾಗಿದೆ. ಅದರಂತೆ, ದೇಗುಲಕ್ಕೆ ಭೇಟಿ ನೀಡುವ ಭಕ್ತರು ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗಳ ಕಠಿಣ ನಿಯಮಗಳ ಆದೇಶ ಹಿನ್ನೆಲೆ ಆಡಳಿತ ಮಂಡಳಿಯಿಂದ ಈ ಸೂಚನೆ ಹೊರಬಿದ್ದಿದೆ.

ಆಧಾರ್ ಕಾರ್ಡ್ ತೋರಿಸಿದರಷ್ಟೆ ದರ್ಶನಕ್ಕೆ ಅವಕಾಶ ನೀಡಲಾಗುವುದು. ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬರುವವರಿಗೆ ಕಠಿಣ ನಿಯಮ ಜಾರಿಗೊಳಿಸಲಾಗಿದೆ. ಹೊರ ರಾಜ್ಯದಿಂದ ಆಗಮಿಸುವ ಭಕ್ತಾದಿಗಳಿಗೆ ಲಸಿಕೆ ಹಾಗೂ ಕೊರೊನಾ ನೆಗೆಟಿವ್ ರಿಪೋರ್ಟ್ ಕೂಡ ಕಡ್ಡಾಯ ಮಾಡಲಾಗಿದೆ. ಕೊಲ್ಲೂರು ದೇಗುಲಕ್ಕೆ ಅತಿಹೆಚ್ಚು ಸಂಖ್ಯೆಯಲ್ಲಿ ಕೇರಳದಿಂದ ಭಕ್ತ ಜನರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕಠಿಣ ನಿಯಮಗಳನ್ನು ಸೂಚಿಸಿ ಆದೇಶಿಸಲಾಗಿದೆ.

ಶುಕ್ರವಾರದ ಕೇರಳದ ಕೊರೊನಾ ಪ್ರಕರಣಗಳ ವಿವರ ಭಾರತದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ, ಕೇರಳದಲ್ಲಿ ಮಾತ್ರ ಕೊವಿಡ್19 ಸೋಂಕಿತರ ಸಂಕ್ಯೆ ಏರಿಕೆಯಾಗುತ್ತಿರುವುದು ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಕೊವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರುತ್ತಿದ್ದು, ದೇಶಮಟ್ಟದಲ್ಲಿ ಕೇರಳ ಕೊರೊನಾ ಹಾಟ್​ಸ್ಪಾಟ್ ಎನಿಸಿಕೊಂಡಿದೆ. ಇಂದು (ಸಪ್ಟೆಂಬರ್ 3) ಕೇರಳದಲ್ಲಿ 29,322 ಹೊಸ ಕೊರೊನಾ ಪ್ರಕರಣಗಳು ವರದಿ ಆಗಿದೆ. 1.63 ಲಕ್ಷ ಮಾದರಿ ಪರೀಕ್ಷೆಯಲ್ಲಿ 29,322 ಮಂದಿ ಪಾಸಿಟಿವ್ ಆಗಿದ್ದು, ಪಾಸಿಟಿವಿಟಿ ದರ 17.91 ರಷ್ಟಿದೆ.

ಕೊರೊನಾ ಸೋಂಕಿನಿಂದ ಕೇರಳ ರಾಜ್ಯದಲ್ಲಿ ಶುಕ್ರವಾರ 131 ಮಂದಿ ಬಲಿ ಆಗಿದ್ದಾರೆ. ಆ ಮೂಲಕ, ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 21,280 ಕ್ಕೆ ಏರಿಕೆ ಆಗಿದೆ. ಕೇರಳದಲ್ಲಿ ಇದುವರೆಗಿನ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 41,51,455 ಕ್ಕೆ ಏರಿಕೆ ಆಗಿದೆ. ಇದೇ ವೇಳೆ, 22,938 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಅದರಂತೆ ಕೊವಿಡ್​ನಿಂದ ಗುಣಮುಖ ಆದವರ ಒಟ್ಟು ಸಂಖ್ಯೆ 38,83,183 ಆಗಿದೆ. 2,46,437 ಮಂದಿಯಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಿರುವ ಜಿಲ್ಲಾಡಳಿತಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ

ಇದನ್ನೂ ಓದಿ: 1 ಕೋಟಿ ಡೋಸ್​ ಕೊವಿಡ್​ 19 ಲಸಿಕೆ ನೀಡಿ, ಹೆಗ್ಗಳಿಕೆಗೆ ಪಾತ್ರವಾದ ಜಿಲ್ಲೆ ಇದು; ಕೊವಿನ್​ ಆ್ಯಪ್​​ನಲ್ಲಿ ಮಾಹಿತಿ ಬಿಡುಗಡೆ

Published On - 4:09 pm, Sat, 4 September 21

Follow Us
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ