AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಅಂಗಾರಕ ಚತುರ್ದಶಿ; ಜೀವನದಿ ಸ್ವರ್ಣೆಯಲ್ಲಿ ಪುಣ್ಯಸ್ನಾನ ಮಾಡಲು ಹರಿದು ಬಂತು ಭಕ್ತ ಸಾಗರ

ಕೃಷ್ಣಪಕ್ಷ, ಚತುರ್ದಶಿ ತಿಥಿ ಹಾಗೂ ಮಂಗಳವಾರದ ದಿನವನ್ನು ಕೃಷ್ಣಾಂಗಾರಕ ಚತುರ್ದಶಿ ಎಂದು ಪರಿಗಣಿಸಿ ವರ್ಷಂಪ್ರತಿ ಪುಣ್ಯಸ್ನಾನ ಕೈಗೊಳ್ಳಲಾಗುತ್ತದೆ. ಇಲ್ಲಿನ ಗಣಪತಿ ಸನ್ನಿಧಾನಕ್ಕೆ ಸಾವಿರಾರು ಜನ ಭೇಟಿ ನೀಡಿ ಪುಣ್ಯ ಸ್ನಾನ ಮಾಡುತ್ತಾರೆ. ಈ ದಿನ ಸ್ವರ್ಣಾ ನದಿಯಲ್ಲಿ ಮುಳುಗಿದಾಗ ಒಂದು ವಿಶಿಷ್ಟವಾದ ಶಬ್ಧ ಕೇಳುತ್ತದೆ ಎನ್ನುವುದು ಜನರ ನಂಬಿಕೆ.

ಕೃಷ್ಣ ಅಂಗಾರಕ ಚತುರ್ದಶಿ; ಜೀವನದಿ ಸ್ವರ್ಣೆಯಲ್ಲಿ ಪುಣ್ಯಸ್ನಾನ ಮಾಡಲು ಹರಿದು ಬಂತು ಭಕ್ತ ಸಾಗರ
ಕೃಷ್ಣಾಂಗಾರಕ ಚತುರ್ದಶಿ ಬಂತೆಂದರೆ ಭಕ್ತರು ಪುಣ್ಯಸ್ನಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ
TV9 Web
| Edited By: |

Updated on: Oct 06, 2021 | 9:01 AM

Share

ಉಡುಪಿ: ನದಿಗಳಲ್ಲಿ ಕೈಗೊಳ್ಳುವ ಪುಣ್ಯಸ್ನಾನಕ್ಕೆ ನಮ್ಮ ಪರಂಪರೆಯಲ್ಲಿ ವಿಶೇಷ ಮಹತ್ವವಿದೆ. ಅದರಂತೆ ಕರಾವಳಿ ಜಿಲ್ಲೆ ಉಡುಪಿಯ ಜೀವನದಿ ಸ್ವರ್ಣೆಯಲ್ಲಿ ಪುಣ್ಯಸ್ನಾನ ಕೈಗೊಳ್ಳಲು ಸಾವಿರಾರು ಜನ ಭಕ್ತರು ಹಾತೊರೆಯುತ್ತಾರೆ. ಅದರಲ್ಲೂ ಕೃಷ್ಣಾಂಗಾರಕ ಚತುರ್ದಶಿ ಬಂತೆಂದರೆ ಭಕ್ತರು ಪುಣ್ಯಸ್ನಾನ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಶಾಸ್ತ್ರ ಪುರಾಣಗಳಲ್ಲಿ ಉಲ್ಲೇಖಿತವಾದ ಕೆಲವೊಂದು ನದಿಗಳಿಗೆ ನಮ್ಮ ಪರಂಪರೆಯಲ್ಲಿ ವಿಶೇಷ ಸ್ಥಾನ ನೀಡಲಾಗಿದೆ. ಉಡುಪಿಗೆ ನೀರುಣಿಸುವ ಸ್ವರ್ಣಾ ನದಿಗೂ ಶಾಸ್ತ್ರಗಳಲ್ಲಿ ಮಹತ್ವ ಕಲ್ಪಿಸಲಾಗಿದೆ.

ವೇದಾಚಲ ಪರ್ವತದಲ್ಲಿ ಹುಟ್ಟುವ ಈ ನದಿಯ ಬಗ್ಗೆ ನಾಲ್ಕು ಶತಮಾನಗಳ ಹಿಂದೆ ವಾದಿರಾಜ ಗುರು ಸಾರ್ವಭೌಮರು ಉಲ್ಲೇಖಿಸಿದ್ದರು. ಅವರು ಬರೆದ ತೀರ್ಥ ಪ್ರಬಂಧದಲ್ಲಿ ಸ್ವರ್ಣ ನದಿಯಲ್ಲಿ ಪುಣ್ಯಸ್ನಾನ ಕೈಗೊಳ್ಳುವ ಬಗ್ಗೆ ಬರೆಯಲಾಗಿದೆ. ಶತಶತಮಾನಗಳು ಕಳೆದರೂ ಜನರ ನಂಬಿಕೆ ಮಾತ್ರ ದೃಢವಾಗಿದೆ. ನಿನ್ನೆ (ಅಕ್ಟೋಬರ್ 5) ಕೃಷ್ಣ ಅಂಗಾರಕ ಚತುರ್ದಶಿಯ ದಿನ.

ಈ ಶುಭ ದಿನದಂದು, ಹರಿಯುವ ನೀರಲ್ಲಿ ಮುಳುಗಿ ಪುಣ್ಯಸ್ಥಾನ ಕೈಗೊಳ್ಳಲು ರಾಜ್ಯದ ನಾನಾ ಭಾಗಗಳಿಂದ ಭಕ್ತರು ಬಂದಿದ್ದರು. ಮಣಿಪಾಲ ಸಮೀಪ ಇರುವ ಶೀಂಭ್ರ ಕ್ಷೇತ್ರದಲ್ಲಿ ಅಷ್ಟಮಠದ ಯತಿಗಳು ಸೇರಿದಂತೆ ನಾಡಿನ ವಿವಿಧೆಡೆಗಳಿಂದ ಬಂದ ಭಕ್ತರು ಪುಣ್ಯಸ್ನಾನ ಕೈಗೊಂಡರು ಎಂದು ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥರು ಹೇಳಿದ್ದಾರೆ.

ಕೃಷ್ಣಪಕ್ಷ, ಚತುರ್ದಶಿ ತಿಥಿ ಹಾಗೂ ಮಂಗಳವಾರದ ದಿನವನ್ನು ಕೃಷ್ಣಾಂಗಾರಕ ಚತುರ್ದಶಿ ಎಂದು ಪರಿಗಣಿಸಿ ವರ್ಷಂಪ್ರತಿ ಪುಣ್ಯಸ್ನಾನ ಕೈಗೊಳ್ಳಲಾಗುತ್ತದೆ. ಇಲ್ಲಿನ ಗಣಪತಿ ಸನ್ನಿಧಾನಕ್ಕೆ ಸಾವಿರಾರು ಜನ ಭೇಟಿ ನೀಡಿ ಪುಣ್ಯ ಸ್ನಾನ ಮಾಡುತ್ತಾರೆ. ಈ ದಿನ ಸ್ವರ್ಣಾ ನದಿಯಲ್ಲಿ ಮುಳುಗಿದಾಗ ಒಂದು ವಿಶಿಷ್ಟವಾದ ಶಬ್ಧ ಕೇಳುತ್ತದೆ ಎನ್ನುವುದು ಜನರ ನಂಬಿಕೆ.

ವಾದಿರಾಜ ಗುರುಗಳು ತಿಳಿಸಿದಂತೆ ನೀರಿನಲ್ಲಿ ಮುಳುಗಿದ ಸಂದರ್ಭ ಚಟಚಟ ಎಂಬ ಶಬ್ಧ ಕಿವಿಗೆ ಬೀಳುತ್ತಂತೆ. ಈ ಶಬ್ಧ ಕೇಳಿದರೆ ನಮ್ಮ ಪಾಪಗಳೆಲ್ಲವೂ ಪರಿಹಾರವಾಗುತ್ತದೆ. ಕೃಷ್ಣ ಅಂಗಾರಕ ಚತುರ್ದಶಿಯಂದೇ ಈ ವಿದ್ಯಮಾನ ನಡೆಯುವುದರಿಂದ ಪುಣ್ಯಸ್ನಾನಕ್ಕೆ ವಿಶೇಷ ಮಹತ್ವ ಇದೆ. ಕರಾವಳಿ ಮಾತ್ರವಲ್ಲದೆ ಬೆಂಗಳೂರು ರಾಯಚೂರು ಬಳ್ಳಾರಿ ಮುಂತಾದ ಭಾಗಗಳಿಂದಲೂ ಜನ ಸ್ವರ್ಣ ನದಿಯಲ್ಲಿ ಪುಣ್ಯಸ್ನಾನ ಕೈಗೊಳ್ಳಲು ಬರುತ್ತಾರೆ ಎನ್ನುವುದು ವಿಶೇಷ.

ಉಡುಪಿ ಕೃಷ್ಣ ದೇವರಿಗೆ ಲಕ್ಷಾಂತರ ಭಕ್ತರಿದ್ದಾರೆ. ವಾದಿರಾಜ ಗುರು ಸಾರ್ವಭೌಮರನ್ನು ಪ್ರಾಥಸ್ಮರಣೀಯರು ಎಂದು ಪೂಜಿಸುವ ಜನರಿದ್ದಾರೆ. ಇವರೆಲ್ಲರಿಗೂ ಕಷ್ಟ ಅಂಗಾರಕ ಚತುರ್ದಶಿ ಮಹತ್ವದ ದಿನವಾಗಿದೆ.

ವರದಿ: ಹರೀಶ್ ಪಾಲೆಚ್ಚಾರ್

ಇದನ್ನೂ ಓದಿ: Temple Tour: ಕುಕ್ಕೇ ಸುಬ್ರಹ್ಮಣ್ಯ ದೇಗುಲದಷ್ಟೇ ಪ್ರಸಿದ್ಧಿ ಪಡೆದಿದೆ ಹಾಸನದ ಪ್ರಸನ್ನ ಸುಬ್ರಹ್ಮಣ್ಯ ದೇವಾಲಯ

Saundatti Yellamma Temple: 18 ತಿಂಗಳ ಬಳಿಕ ಸವದತ್ತಿ ರೇಣುಕಾ ಯಲಮ್ಮ ದೇವಾಲಯ ಓಪನ್, ದರ್ಶನಕ್ಕೆ ಷರತ್ತು ಬದ್ಧ ಅನುಮತಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ