AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾಪುರ: ಲಂಚ ಪ್ರಕರಣದಲ್ಲಿ ಕೋಟಾ ಮಾಜಿ ಎಸ್​​​ಐ ಅಮಾನತು

ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ನೀಡಲು ಕೋಟ ಠಾಣೆಯ ಅಂದಿನ ಠಾಣಾಧಿಕಾರಿ ಶಂಭುಲಿಂಗಯ್ಯ ಲಂಚ ಪಡೆದಿದ್ದರು. ಶಂಭುಲಿಂಗಯ್ಯ ಅವರು ಲಂಚದ ಮೊತ್ತವನ್ನು ತಮ್ಮ ಹತ್ತಿರದ ಸಂಬಂಧಿಯೊಬ್ಬರ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು.

ಕುಂದಾಪುರ: ಲಂಚ ಪ್ರಕರಣದಲ್ಲಿ ಕೋಟಾ ಮಾಜಿ ಎಸ್​​​ಐ ಅಮಾನತು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 11, 2023 | 10:47 AM

Share

ಕುಂದಾಪುರ, ಡಿಸೆಂಬರ್ 11: ಲಂಚ ಪ್ರಕರಣಕ್ಕೆ (Bribery Case) ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯ (Kota Police Station) ಮಾಜಿ ಎಸ್‌ಐ, ಪ್ರಸ್ತುತ ಕಾರ್ಕಳದಲ್ಲಿ ಒಒಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಂಭುಲಿಂಗಯ್ಯ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಕಾಲೇಜೊಂದರ ಆಡಳಿತ ಸಮಿತಿಯೊಳಗಿನ ಕೆಲ ವೈಷಮ್ಯಕ್ಕೆ ಸಂಬಂಧಿಸಿದಂತೆ ಶಂಬುಲಿಂಗಯ್ಯ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್​ಲೋಡ್ ಮಾಡುವ ಮೂಲಕ ಸಾಮಾಜಿಕ ಕಾರ್ಯಕರ್ತರೊಬ್ಬರು ಮೂಲಕ ಆರೋಪಿಸಿದ್ದರು.

ಮಧು ಭಾಸ್ಕರ್ ಮತ್ತು ಮಹಿಮಾ ಮಧು ಭಾಸ್ಕರ್ ಅವರು ಅಚ್ಲಾಡಿಯಲ್ಲಿ ನಡೆಸುತ್ತಿರುವ ಖಾಸಗಿ ಕಾಲೇಜಿನ ಆಡಳಿತ ಸಮಿತಿಯ ನಡುವಿನ ಸಮಸ್ಯೆಗೆ ಸಂಬಂಧಿಸಿದಂತೆ ದೂರು ಮತ್ತು ಪ್ರತಿದೂರು ದಾಖಲಿಸಿದ್ದರು. ಮಧು ಭಾಸ್ಕರ್ ವಿರುದ್ಧ ದೂರು ದಾಖಲಿಸಲು ಹಾಗೂ ಮಹಿಮಾ ಮಧು ಭಾಸ್ಕರ್ ನೀಡಿದ ದೂರಿಗೆ ಬಿ ರಿಪೋರ್ಟ್ ನೀಡಲು ಕೋಟ ಠಾಣೆಯ ಅಂದಿನ ಠಾಣಾಧಿಕಾರಿ ಶಂಭುಲಿಂಗಯ್ಯ ಲಂಚ ಪಡೆದಿದ್ದರು. ಶಂಭುಲಿಂಗಯ್ಯ ಅವರು ಲಂಚದ ಮೊತ್ತವನ್ನು ತಮ್ಮ ಹತ್ತಿರದ ಸಂಬಂಧಿಯೊಬ್ಬರ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು.

ಇದನ್ನೂ ಓದಿ: ಉಡುಪಿ ನೇಜಾರಿನಲ್ಲಿ ನಾಲ್ವರ ಅಮಾನುಷ ಹತ್ಯೆ ಪ್ರಕರಣದಲ್ಲಿ ಅನಪೇಕ್ಷಿತ ಬೆಳವಣಿಗೆ: ಗ್ರಾಮಸ್ಥರ ಆಕ್ರೋಶ

ಠಾಣಾಧಿಕಾರಿ ಶಂಭುಲಿಂಗಯ್ಯ ಅವರನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಆಯೋಗದ ರಾಜ್ಯ ಮುಖ್ಯಸ್ಥ ದಿನೇಶ್ ಗಾಣಿಗ ಅವರು ವಿಡಿಯೋ ಮೂಲಕ ಎಸ್‌ಪಿಗೆ ಮನವಿ ಮಾಡಿದ್ದು, ಆರೋಪದ ಬಗ್ಗೆ ದಾಖಲೆ ಸಲ್ಲಿಸಬಹುದು ಎಂದು ಭರವಸೆ ನೀಡಿದ್ದರು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿತ್ತು.

ಈ ಹಿಂದೆ ಶಂಭುಲಿಂಗಯ್ಯ ಅವರನ್ನು ಅಶಿಸ್ತಿನ ಕಾರಣಕ್ಕಾಗಿ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ವರ್ಗಾವಣೆ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Mon, 11 December 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!