Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಂದಾಪುರ: ಲಂಚ ಪ್ರಕರಣದಲ್ಲಿ ಕೋಟಾ ಮಾಜಿ ಎಸ್​​​ಐ ಅಮಾನತು

ಪ್ರಕರಣವೊಂದರಲ್ಲಿ ಬಿ ರಿಪೋರ್ಟ್ ನೀಡಲು ಕೋಟ ಠಾಣೆಯ ಅಂದಿನ ಠಾಣಾಧಿಕಾರಿ ಶಂಭುಲಿಂಗಯ್ಯ ಲಂಚ ಪಡೆದಿದ್ದರು. ಶಂಭುಲಿಂಗಯ್ಯ ಅವರು ಲಂಚದ ಮೊತ್ತವನ್ನು ತಮ್ಮ ಹತ್ತಿರದ ಸಂಬಂಧಿಯೊಬ್ಬರ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು.

ಕುಂದಾಪುರ: ಲಂಚ ಪ್ರಕರಣದಲ್ಲಿ ಕೋಟಾ ಮಾಜಿ ಎಸ್​​​ಐ ಅಮಾನತು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on:Dec 11, 2023 | 10:47 AM

ಕುಂದಾಪುರ, ಡಿಸೆಂಬರ್ 11: ಲಂಚ ಪ್ರಕರಣಕ್ಕೆ (Bribery Case) ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯ (Kota Police Station) ಮಾಜಿ ಎಸ್‌ಐ, ಪ್ರಸ್ತುತ ಕಾರ್ಕಳದಲ್ಲಿ ಒಒಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಂಭುಲಿಂಗಯ್ಯ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.

ಕಾಲೇಜೊಂದರ ಆಡಳಿತ ಸಮಿತಿಯೊಳಗಿನ ಕೆಲ ವೈಷಮ್ಯಕ್ಕೆ ಸಂಬಂಧಿಸಿದಂತೆ ಶಂಬುಲಿಂಗಯ್ಯ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್​ಲೋಡ್ ಮಾಡುವ ಮೂಲಕ ಸಾಮಾಜಿಕ ಕಾರ್ಯಕರ್ತರೊಬ್ಬರು ಮೂಲಕ ಆರೋಪಿಸಿದ್ದರು.

ಮಧು ಭಾಸ್ಕರ್ ಮತ್ತು ಮಹಿಮಾ ಮಧು ಭಾಸ್ಕರ್ ಅವರು ಅಚ್ಲಾಡಿಯಲ್ಲಿ ನಡೆಸುತ್ತಿರುವ ಖಾಸಗಿ ಕಾಲೇಜಿನ ಆಡಳಿತ ಸಮಿತಿಯ ನಡುವಿನ ಸಮಸ್ಯೆಗೆ ಸಂಬಂಧಿಸಿದಂತೆ ದೂರು ಮತ್ತು ಪ್ರತಿದೂರು ದಾಖಲಿಸಿದ್ದರು. ಮಧು ಭಾಸ್ಕರ್ ವಿರುದ್ಧ ದೂರು ದಾಖಲಿಸಲು ಹಾಗೂ ಮಹಿಮಾ ಮಧು ಭಾಸ್ಕರ್ ನೀಡಿದ ದೂರಿಗೆ ಬಿ ರಿಪೋರ್ಟ್ ನೀಡಲು ಕೋಟ ಠಾಣೆಯ ಅಂದಿನ ಠಾಣಾಧಿಕಾರಿ ಶಂಭುಲಿಂಗಯ್ಯ ಲಂಚ ಪಡೆದಿದ್ದರು. ಶಂಭುಲಿಂಗಯ್ಯ ಅವರು ಲಂಚದ ಮೊತ್ತವನ್ನು ತಮ್ಮ ಹತ್ತಿರದ ಸಂಬಂಧಿಯೊಬ್ಬರ ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದರು.

ಇದನ್ನೂ ಓದಿ: ಉಡುಪಿ ನೇಜಾರಿನಲ್ಲಿ ನಾಲ್ವರ ಅಮಾನುಷ ಹತ್ಯೆ ಪ್ರಕರಣದಲ್ಲಿ ಅನಪೇಕ್ಷಿತ ಬೆಳವಣಿಗೆ: ಗ್ರಾಮಸ್ಥರ ಆಕ್ರೋಶ

ಠಾಣಾಧಿಕಾರಿ ಶಂಭುಲಿಂಗಯ್ಯ ಅವರನ್ನು ಅಮಾನತು ಮಾಡುವಂತೆ ಮಾನವ ಹಕ್ಕುಗಳ ಆಯೋಗದ ರಾಜ್ಯ ಮುಖ್ಯಸ್ಥ ದಿನೇಶ್ ಗಾಣಿಗ ಅವರು ವಿಡಿಯೋ ಮೂಲಕ ಎಸ್‌ಪಿಗೆ ಮನವಿ ಮಾಡಿದ್ದು, ಆರೋಪದ ಬಗ್ಗೆ ದಾಖಲೆ ಸಲ್ಲಿಸಬಹುದು ಎಂದು ಭರವಸೆ ನೀಡಿದ್ದರು. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿತ್ತು.

ಈ ಹಿಂದೆ ಶಂಭುಲಿಂಗಯ್ಯ ಅವರನ್ನು ಅಶಿಸ್ತಿನ ಕಾರಣಕ್ಕಾಗಿ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ವರ್ಗಾವಣೆ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Mon, 11 December 23

ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು