AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಭೀತಿ, ವಾಹನ ಸವಾರರಲ್ಲಿ ಆತಂಕ

ಅವೈಜ್ಞಾನಿಕ ಕಾಮಗಾರಿಯಿಂದ ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದು, ವಾಹನ ಸವಾರರಲ್ಲಿ ಆತಂಕ ಮನೆ ಮಾಡಿದೆ.

ಉಡುಪಿ: ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಭೀತಿ, ವಾಹನ ಸವಾರರಲ್ಲಿ ಆತಂಕ
ಶಿರೂರು ಒತ್ತಿನೆಣೆಯಲ್ಲಿ ಹಾದು ಹೋಗುವ ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jul 15, 2023 | 1:31 PM

Share

ಉಡುಪಿ: ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 66 (Byndoor National Highway 66) ರಲ್ಲಿ ಗುಡ್ಡ ಕುಸಿತವಾಗುವ (Landslides) ಸಾಧ್ಯತೆ ಇದೆ. ಬೈಂದೂರು ತಾಲೂಕಿನ ಶಿರೂರು ಒತ್ತಿನೆಣೆಯಲ್ಲಿ ಪ್ರತಿ ಬಾರಿ ಮಳೆಗಾಳದಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಈ ಬಾರಿಯೂ ಗುಡ್ಡ ಕುಸಿತವಾಗುವ ಸಂಭವಿರುವುದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ.

ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ರಾಷ್ಟ್ರೀಯ ಹೆದ್ದಾರಿಯು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಂಪರ್ಕ ಕೊಂಡಿಯಾಗಿದೆ. ಕುಂದಾಪುರದಿಂದ ಕಾರವಾರದ ಮಾಜಾಳಿವರೆಗೂ ಐಆರ್​ಬಿ ಕಂಪೆನಿಯಿಂದ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ಪರ್ಯಾಯ ಸ್ಥಳವಿದ್ದರೂ ಒತ್ತಿನೆಣೆಯಲ್ಲಿ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಅಷ್ಟೇ ಅಲ್ಲದೆ, ಸ್ಥಳೀಯರ ಸಲಹೆ ಪಡೆಯದೆ ಗುಡ್ಡಕ್ಕೆ ಸಮೀಪವಾಗಿ ಹೆದ್ದಾರಿ ನಿರ್ಮಿಸಲಾಗಿದೆ.

ಇದನ್ನೂ ಓದಿ: Uttarakhand: ಗಂಗೋತ್ರಿ ಹೆದ್ದಾರಿಯಲ್ಲಿ ಗುಡ್ಡದಿಂದ ವಾಹನಗಳ ಮೇಲೆ ಉರುಳಿದ ಬಂಡೆಗಳು, ನಾಲ್ವರು ಸಾವು

ಇದರಿಂದಾಗಿ ಪ್ರತಿ ವರ್ಷ ಮಳೆಗಾಲದಲ್ಲಿ ಒತ್ತಿನೆಣೆಯಲ್ಲಿ ಗುಡ್ಡ ಜರಿಯುವುದು ಸಾಮಾನ್ಯವಾಗಿದೆ. ಹೆದ್ದಾರಿ ಕಾಮಗಾರಿ ವೇಳೆಯೂ ಗುಡ್ಡ ಜರಿದಿತ್ತು. ಈ ಬಾರಿ ಸುರಿದ ಮಳೆಗೂ ಗುಡ್ಡ ಜರಿದು ಆತಂಕ ಸೃಷ್ಟಿಯಾಗಿತ್ತು. ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ಮೇಲೆ ಬೀಳುತ್ತಿರುವುದು ವಾಹನ ಸವಾರರ ಆತಂಕಕ್ಕೆ ಕಾರಣವಾಗಿದೆ.

ಕಾಮಗಾರಿ ವೀಕ್ಷಿಸಲಿರುವ ಉತ್ತರ ಕನ್ನಡ ಡಿಸಿ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವೈಜ್ಞಾನಿಕ ಕಾಮಗಾರಿ ಆರೋಪ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸೂಚನೆ ಮೇರೆಗೆ ಉತ್ತರ ಕನ್ನಡದ ಜಿಲ್ಲಾಧಿಕಾರಿ ನೃತೃತ್ವದ ತಂಡ ಬಸ್‌ನಲ್ಲಿ ತೆರಳಿ ಕಾರವಾರದ ಮಾಜಾಳಿಯಿಂದ ಭಟ್ಕಳ ಗಡಿಯವರೆಗೆ ಹೆದ್ದಾರಿ ಕಾಮಗಾರಿ ವೀಕ್ಷಿಸಲಿದೆ. ಐಆರ್‌ಬಿ, NHAI ಅಧಿಕಾರಿಗಳು, ತಹಶೀಲ್ದಾರ್, ಪೌರಾಯುಕ್ತ, ಡಿವೈಎಸ್ಪಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದು, ಹೆದ್ದಾರಿ ಉದ್ದಕ್ಕೂ ರಸ್ತೆ, ಟನಲ್, ಸೂಚನಾಫಲಕ, ಡೈವರ್ಶನ್,‌ ಬೀದಿದೀಪ, ಸರ್ವೀಸ್ ರೋಡ್ ಕಾಮಗಾರಿ ಪರಿಶೀಲಿಸಲಿದೆ. ಗುಡ್ಡ ಕುಸಿತದ ಪ್ರದೇಶಗಳನ್ನೂ ವೀಕ್ಷಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Sat, 15 July 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​