AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಭೀತಿ, ವಾಹನ ಸವಾರರಲ್ಲಿ ಆತಂಕ

ಅವೈಜ್ಞಾನಿಕ ಕಾಮಗಾರಿಯಿಂದ ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದು, ವಾಹನ ಸವಾರರಲ್ಲಿ ಆತಂಕ ಮನೆ ಮಾಡಿದೆ.

ಉಡುಪಿ: ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತದ ಭೀತಿ, ವಾಹನ ಸವಾರರಲ್ಲಿ ಆತಂಕ
ಶಿರೂರು ಒತ್ತಿನೆಣೆಯಲ್ಲಿ ಹಾದು ಹೋಗುವ ಬೈಂದೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi

Updated on:Jul 15, 2023 | 1:31 PM

ಉಡುಪಿ: ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಂಪರ್ಕ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 66 (Byndoor National Highway 66) ರಲ್ಲಿ ಗುಡ್ಡ ಕುಸಿತವಾಗುವ (Landslides) ಸಾಧ್ಯತೆ ಇದೆ. ಬೈಂದೂರು ತಾಲೂಕಿನ ಶಿರೂರು ಒತ್ತಿನೆಣೆಯಲ್ಲಿ ಪ್ರತಿ ಬಾರಿ ಮಳೆಗಾಳದಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ಈ ಬಾರಿಯೂ ಗುಡ್ಡ ಕುಸಿತವಾಗುವ ಸಂಭವಿರುವುದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ.

ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ರಾಷ್ಟ್ರೀಯ ಹೆದ್ದಾರಿಯು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಂಪರ್ಕ ಕೊಂಡಿಯಾಗಿದೆ. ಕುಂದಾಪುರದಿಂದ ಕಾರವಾರದ ಮಾಜಾಳಿವರೆಗೂ ಐಆರ್​ಬಿ ಕಂಪೆನಿಯಿಂದ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿ ಇದಾಗಿದೆ. ಪರ್ಯಾಯ ಸ್ಥಳವಿದ್ದರೂ ಒತ್ತಿನೆಣೆಯಲ್ಲಿ ಹೆದ್ದಾರಿ ನಿರ್ಮಾಣ ಮಾಡಲಾಗಿದೆ. ಅಷ್ಟೇ ಅಲ್ಲದೆ, ಸ್ಥಳೀಯರ ಸಲಹೆ ಪಡೆಯದೆ ಗುಡ್ಡಕ್ಕೆ ಸಮೀಪವಾಗಿ ಹೆದ್ದಾರಿ ನಿರ್ಮಿಸಲಾಗಿದೆ.

ಇದನ್ನೂ ಓದಿ: Uttarakhand: ಗಂಗೋತ್ರಿ ಹೆದ್ದಾರಿಯಲ್ಲಿ ಗುಡ್ಡದಿಂದ ವಾಹನಗಳ ಮೇಲೆ ಉರುಳಿದ ಬಂಡೆಗಳು, ನಾಲ್ವರು ಸಾವು

ಇದರಿಂದಾಗಿ ಪ್ರತಿ ವರ್ಷ ಮಳೆಗಾಲದಲ್ಲಿ ಒತ್ತಿನೆಣೆಯಲ್ಲಿ ಗುಡ್ಡ ಜರಿಯುವುದು ಸಾಮಾನ್ಯವಾಗಿದೆ. ಹೆದ್ದಾರಿ ಕಾಮಗಾರಿ ವೇಳೆಯೂ ಗುಡ್ಡ ಜರಿದಿತ್ತು. ಈ ಬಾರಿ ಸುರಿದ ಮಳೆಗೂ ಗುಡ್ಡ ಜರಿದು ಆತಂಕ ಸೃಷ್ಟಿಯಾಗಿತ್ತು. ಗುಡ್ಡ ಕುಸಿದು ರಾಷ್ಟ್ರೀಯ ಹೆದ್ದಾರಿ ಮೇಲೆ ಬೀಳುತ್ತಿರುವುದು ವಾಹನ ಸವಾರರ ಆತಂಕಕ್ಕೆ ಕಾರಣವಾಗಿದೆ.

ಕಾಮಗಾರಿ ವೀಕ್ಷಿಸಲಿರುವ ಉತ್ತರ ಕನ್ನಡ ಡಿಸಿ

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅವೈಜ್ಞಾನಿಕ ಕಾಮಗಾರಿ ಆರೋಪ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಸೂಚನೆ ಮೇರೆಗೆ ಉತ್ತರ ಕನ್ನಡದ ಜಿಲ್ಲಾಧಿಕಾರಿ ನೃತೃತ್ವದ ತಂಡ ಬಸ್‌ನಲ್ಲಿ ತೆರಳಿ ಕಾರವಾರದ ಮಾಜಾಳಿಯಿಂದ ಭಟ್ಕಳ ಗಡಿಯವರೆಗೆ ಹೆದ್ದಾರಿ ಕಾಮಗಾರಿ ವೀಕ್ಷಿಸಲಿದೆ. ಐಆರ್‌ಬಿ, NHAI ಅಧಿಕಾರಿಗಳು, ತಹಶೀಲ್ದಾರ್, ಪೌರಾಯುಕ್ತ, ಡಿವೈಎಸ್ಪಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದು, ಹೆದ್ದಾರಿ ಉದ್ದಕ್ಕೂ ರಸ್ತೆ, ಟನಲ್, ಸೂಚನಾಫಲಕ, ಡೈವರ್ಶನ್,‌ ಬೀದಿದೀಪ, ಸರ್ವೀಸ್ ರೋಡ್ ಕಾಮಗಾರಿ ಪರಿಶೀಲಿಸಲಿದೆ. ಗುಡ್ಡ ಕುಸಿತದ ಪ್ರದೇಶಗಳನ್ನೂ ವೀಕ್ಷಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:17 pm, Sat, 15 July 23

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್