AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ & ಉಡುಪಿ ನಗರಸಭೆ.. ಏನ್ಮಾಡ್ತಿದೆ?

ಉಡುಪಿ ಜಿಲ್ಲೆ ಪ್ರವಾಸಿಗರ ಸ್ವರ್ಗ ಎಂದು ಕರೆಯಲಾಗುತ್ತದೆ. ಬೇರೆ ಬೇರೆ ರಾಜ್ಯದಿಂದ ಸಾವಿರಾರು ಪ್ರವಾಸಿಗರು ಉಡುಪಿ ಕಡೆ ಆಗಮಿಸುತ್ತಾರೆ. ಆದರೆ ಇಂತಹ ಪ್ರೇಕ್ಷಣಾ ಸ್ಥಳದ ಪರಿಸ್ಥಿತಿ ಅಧೋಗತಿ ಇದೆ. ಉಡುಪಿ ಜಿಲ್ಲೆಯ ಆಹಾರ ಪದ್ಧತಿ ಉಡುಗೆ-ತೊಡುಗೆಗಳು ವಿಶಿಷ್ಟ ವಿಭಿನ್ನವಾಗಿದೆ. ಉಡುಪಿ ಪ್ರವಾಸಿಗರ ಸ್ವರ್ಗ ಇಲ್ಲಿ ಹೊರರಾಷ್ಟ್ರದಿಂದ ಮತ್ತು ಹೊರರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಅದರಲ್ಲಿ ಮುಖ್ಯವಾಗಿ ಉಡುಪಿ ಮಲ್ಪೆ ಬೀಚ್. ಉಡುಪಿಗೆ ಆಗಮಿಸಿದ ಪ್ರವಾಸಿಗರು ಈ ಬೀಚ್ ನೋಡದೆ ಹಿಂದಿರುಗುವುದಿಲ್ಲ. ವೀಕೆಂಡ್ ಬಂದ್ರೆ ಸಾಕು ಸ್ಥಳೀಯ […]

ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ & ಉಡುಪಿ ನಗರಸಭೆ.. ಏನ್ಮಾಡ್ತಿದೆ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 03, 2020 | 6:21 PM

Share

ಉಡುಪಿ ಜಿಲ್ಲೆ ಪ್ರವಾಸಿಗರ ಸ್ವರ್ಗ ಎಂದು ಕರೆಯಲಾಗುತ್ತದೆ. ಬೇರೆ ಬೇರೆ ರಾಜ್ಯದಿಂದ ಸಾವಿರಾರು ಪ್ರವಾಸಿಗರು ಉಡುಪಿ ಕಡೆ ಆಗಮಿಸುತ್ತಾರೆ. ಆದರೆ ಇಂತಹ ಪ್ರೇಕ್ಷಣಾ ಸ್ಥಳದ ಪರಿಸ್ಥಿತಿ ಅಧೋಗತಿ ಇದೆ. ಉಡುಪಿ ಜಿಲ್ಲೆಯ ಆಹಾರ ಪದ್ಧತಿ ಉಡುಗೆ-ತೊಡುಗೆಗಳು ವಿಶಿಷ್ಟ ವಿಭಿನ್ನವಾಗಿದೆ.

ಉಡುಪಿ ಪ್ರವಾಸಿಗರ ಸ್ವರ್ಗ ಇಲ್ಲಿ ಹೊರರಾಷ್ಟ್ರದಿಂದ ಮತ್ತು ಹೊರರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಅದರಲ್ಲಿ ಮುಖ್ಯವಾಗಿ ಉಡುಪಿ ಮಲ್ಪೆ ಬೀಚ್. ಉಡುಪಿಗೆ ಆಗಮಿಸಿದ ಪ್ರವಾಸಿಗರು ಈ ಬೀಚ್ ನೋಡದೆ ಹಿಂದಿರುಗುವುದಿಲ್ಲ. ವೀಕೆಂಡ್ ಬಂದ್ರೆ ಸಾಕು ಸ್ಥಳೀಯ ಜನರು ಬೀಚ್ ಕಡೆ ಮುಖ ಮಾಡುತ್ತಾರೆ..

ಬೋಟಿಂಗ್,ಒಂಟೆ ಸವಾರಿ, ಕುದುರೆ ಸವಾರಿ, ಮಕ್ಕಳು ಮಣ್ಣಿನಲ್ಲಿ ಆಟವಾಡಲು ವಿಶಾಲವಾದ ಸ್ಥಳಾವಕಾಶ ಇದೆ. ಕೊರೊನಾ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಬೀಚಿಗೆ ಪ್ರವಾಸಿಗರು ಆಗಮಿಸುತ್ತಿಲ್ಲ. ಬೀಚ್ ಪರಿಸರದಲ್ಲಿರುವ ಅಂಗಡಿಗಳು ಎರಡು ತಿಂಗಳಿನಿಂದ ತೆರೆಯದೆ ಬಿಕೋ ಎನ್ನುತ್ತಿದೆ. ಉಡುಪಿಯ ಮಲ್ಪೆ ಬೀಚ್ ಅಂಗಡಿಗಳು ತೆರೆಯದೆ ಎರಡು ತಿಂಗಳು ಕಳೆದಿವೆ. ಇದರಿಂದ ಸಾಕಷ್ಟು ನಷ್ಟವನ್ನು ಅನುಭವಿಸುತ್ತಿದ್ದಾರೆ ಅಂಗಡಿ ಮಾಲೀಕರು..

ಅಂಗಡಿಗಳು ಕುಡುಕರ ತಾಣವಾಗಿವೆ ಈ ಅಂಗಡಿಗಳು ಕುಡುಕರ ತಾಣವಾಗಿ ಪರಿವರ್ತನೆಗೊಂಡಿದೆ. ಹೌದು ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಎಲ್ಲಾ ಅಂಗಡಿಗಳು ಬಂದ್ ಆಗಿವೆ. ನಷ್ಟ ಅನುಭವಿಸಿದರೂ ಅಂಗಡಿ ಮಾಲೀಕರು ಸರ್ಕಾರದ ನಿಯಮಗಳನ್ನು ಪಾಲಿಸಿ ಮನೆಯಲ್ಲಿ ಕೂತ್ಕೊಂಡಿದ್ದಾರೆ. ಆದರೆ ಇದರ ಲಾಭವನ್ನು ಸ್ಥಳೀಯ ಕುಡುಕರು ಪಡೆದುಕೊಂಡಿದ್ದಾರೆ.

ಲಾಕ್ಡೌನ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾದ್ಯಂತ ಬಾರ್ ನಲ್ಲಿ ಕುಳಿತುಕೊಂಡು ಮದ್ಯಪಾನ ಮಾಡುವುದು ನಿಷೇಧವಾಗಿದೆ. ಮದ್ಯಪ್ರಿಯರಿಗೆ ಕೇವಲ ವೈನ್ ಶಾಪ್ ಗಳಲ್ಲಿ ಮದ್ಯ ಸಿಗುತ್ತಿದ್ದು ಪಾರ್ಸೆಲ್ ಗಳನ್ನು ಪಡೆದುಕೊಂಡು ಬೀಚ್ ಬಳಿ ಅಂಗಡಿಗಳಲ್ಲಿ ಮದ್ಯ ಸೇವನೆ ಮಾಡುತ್ತಾರೆ. ಮದ್ಯ ಸೇವನೆ ಬಾಟಲುಗಳು ಮತ್ತು ಪ್ಯಾಕೆಟ್ ಗಳನ್ನು ಅಲ್ಲೇ ಬಿಸಾಡಿ ಹೋಗುತ್ತಿದ್ದಾರೆ.

ಉಡುಪಿ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ, ಉಡುಪಿ ನಗರಸಭೆ ಏನ್ಮಾಡ್ತಿದೆ? ಉಡುಪಿ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಮತ್ತು ಉಡುಪಿ ನಗರಸಭೆ ಇತ್ತ ಗಮನಹರಿಸಬೇಕಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಸ್ಥಳೀಯ ಜನರು ಬೀಚ್ ಗೆ ಆಗಮಿಸಲು ಅವಕಾಶ ಇಲ್ಲ. ಇದರ ಲಾಭವನ್ನು ಕುಡುಕರು ಪಡೆದುಕೊಳ್ಳುತ್ತಿದ್ದಾರೆ. ಬೀಚ್ ಬಳಿ ಇರುವ ಅಂಗಡಿಗಳ ಟೇಬಲ್ ಕುರ್ಚಿಗಳನ್ನು ಉಪಯೋಗಿಸಿ ಬೆಳಿಗ್ಗೆ ಮತ್ತು ರಾತ್ರಿ ಹೊತ್ತು ಮದ್ಯ ಸೇವನೆ ಮಾಡುತ್ತಿದ್ದಾರೆ.

ಸ್ವಚ್ಛ ಉಡುಪಿ -ಸುಂದರ ಉಡುಪಿ ಎಂದು ಜಾಹೀರಾತು ನೀಡುವ ಜಿಲ್ಲಾಡಳಿತ ಇತ್ತ ಗಮನಹರಿಸಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಸಾಕಷ್ಟು ಸ್ವಚ್ಛತೆಯನ್ನು ಕಾಪಾಡಬೇಕಾಗಿದೆ. ಉಡುಪಿ ಬೀಚ್ ಅಭಿವೃದ್ಧಿ ಸಮಿತಿ ಮತ್ತು ಸ್ಥಳೀಯ ನಗರಾಡಳಿತ ಏನು ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

Published On - 6:12 pm, Wed, 3 June 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ