AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಫ್‌ಡಿ ಇಟ್ಟಿದ್ದ ಐದೂವರೆ ಲಕ್ಷ ಮಂಗಮಾಯ, ಕೋರ್ಟ್ ತೀರ್ಪಿಗೂ ತಲೆ ಕೆಡಿಸಿಕೊಳ್ಳದೆ ಹಣ ಹಿಂತಿರುಗಿಸಲು ಸತಾಯಿಸುತ್ತಿರುವ ಬ್ಯಾಂಕ್

ಆತ ಕಷ್ಟ ಪಟ್ಟು ದುಡಿದು, ಬ್ಯಾಂಕ್ನಲ್ಲಿ ಹಣ ಕೂಡಿಟ್ಟಿದ್ದ, ಇದೇ ಹಣದಲ್ಲಿ ಸಣ್ಣದೊಂದು ಸೂರು ಕಟ್ಟುವ ಕನಸು ಕಂಡಿದ್ದ, ಆದ್ರೀಗ ಆತನ ಫಿಕ್ಸ್ಡ್ ಡೆಪಾಸಿಟ್ ಅನಾಮತ್ತಾಗಿ ಲಪಟಾಯಿಸಲಾಗಿದೆ. ನ್ಯಾಯಾಲಯ ಪೂರ್ತಿ ಹಣ ವಾಪಾಸು ನೀಡುವಂತೆ, ತೀರ್ಪು ನೀಡಿದರೂ, ಬ್ಯಾಂಕ್ ಬಳಕೆದಾರರ ಹಣ ನೀಡದೆ ಸತಾಯಿಸುತ್ತಿದೆ.

ಎಫ್‌ಡಿ ಇಟ್ಟಿದ್ದ ಐದೂವರೆ ಲಕ್ಷ ಮಂಗಮಾಯ, ಕೋರ್ಟ್ ತೀರ್ಪಿಗೂ ತಲೆ ಕೆಡಿಸಿಕೊಳ್ಳದೆ ಹಣ ಹಿಂತಿರುಗಿಸಲು ಸತಾಯಿಸುತ್ತಿರುವ ಬ್ಯಾಂಕ್
ಹಣ ಕಳೆದುಕೊಂಡವರು
TV9 Web
| Edited By: |

Updated on: Aug 29, 2021 | 2:01 PM

Share

ಉಡುಪಿ ಜಿಲ್ಲೆಯ ಉಪ್ಪೂರಿನ ನಿವಾಸಿ ಹರೀಶ್ ಗುಡಿಗಾರ್ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸ್ಟೇಟ್ ಬ್ಯಾಂಕ್ ಇಂಡಿಯಾದಲ್ಲಿ ಉಳಿತಾಯ ಖಾತೆ ಹೊಂದಿದ್ದರು. ಬೆಂಗಳೂರು ತೊರೆಯುತ್ತಿದ್ದಂತೆ ತಮ್ಮ ಖಾತೆಯನ್ನ ಉಡುಪಿಯ ಸಂತೆಕಟ್ಟೆಯ ಎಸ್ಬಿಐ ಬ್ರಾಂಚ್‌ಗೆ ವರ್ಗಾಯಿಸಿ ಕೊಂಡಿದ್ರು. ಆದ್ರೆ ಖಾತೆ ವರ್ಗಾವಣೆಯಾಗ್ತಿದ್ದಂತೆ ಇವರ ಬ್ಯಾಡ್ ಟೈಮ್ ಶುರುವಾಗಿದೆ.

ಎಫ್‌ಡಿ ಇಟ್ಟಿದ್ದ ಐದೂವರೆ ಲಕ್ಷ ಮಂಗಮಾಯ ಪುಟ್ಟ ಮನೆ ಕಟ್ಕೊಬೇಕು ಅಂತಾ ಕನಸು ಕಂಡಿದ್ದ ಹರೀಶ್ ಐದೂವರೆ ಲಕ್ಷ ರೂಪಾಯಿಯನ್ನ ಡೆಪಾಸಿಟ್ ಮಾಡಿಟ್ಟಿದ್ದರು. ಆದ್ರೆ 2019 ಆಗಸ್ಟ್ 23ರಂದು ಹರೀಶ್ ಮೊಬೈಲ್‌ಗೆ ಹಣ ಕಟ್ ಆಗಿರುವ ಬಗ್ಗೆ ಮೂರ್ನಾಲ್ಕು ಮೆಸೇಜ್ ಬಂದಿವೆ. ಕೂಡಲೇ ಬ್ಯಾಂಕ್‌ಗೆ ದೌಡಾಯಿಸಿದ ಹರೀಶ್ ದೂರು ದಾಖಲಿಸಿದ್ದಾರೆ. ಆದ್ರೆ ಬ್ಯಾಂಕ್‌ನವರಿಂದ ಯಾವ ನ್ಯಾಯ ಸಿಕ್ಕಿಲ್ಲ. ಕೊನೆಗೆ ನ್ಯಾಯಾಲಯದ ಕದ ತಟ್ಟಿದ್ದಾರೆ. ಆಗ ಕೋರ್ಟ್ ಐದೂವರೆ ಲಕ್ಷಕ್ಕೆ ಶೇಕಡಾ 10ರಂತೆ ಬಡ್ಡಿ ನೀಡಬೇಕು, ಜೊತೆಗೆ 50 ಸಾವಿರ ಪರಿಹಾರ, ಕೋರ್ಟ್ ವೆಚ್ಚ ಅಂತ 10 ಸಾವಿರವನ್ನು ಮೂವತ್ತು ದಿನಗಳ ಒಳಗೆ ನೀಡಬೇಕು ಅಂತ ತೀರ್ಪು ನೀಡಿದೆ. ತೀರ್ಪು ಬಂದು 40ದಿನವಾದ್ರೂ ಬ್ಯಾಂಕ್‌ನವ್ರು ಇದುವರೆಗೂ ಹಣ ನೀಡಿಲ್ಲ.

ಸದ್ಯ ಹರೀಶ್ ಅವರ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ, ಚಿಕ್ಕ ಮಗಳಿದ್ದು, ಸಾಕಷ್ಟು ಸಾಲ ಮಾಡಿಕೊಂಡಿದ್ದಾರೆ. ಹಾಗಾಗಿ ಬ್ಯಾಂಕ್‌ನವ್ರು ಕೂಡಲೇ ಹಣ ನೀಡ್ಬೇಕು ಇಲ್ಲವಾದ್ರೆ ಮತ್ತೆ ಕೋರ್ಟ್ ಮೊರೆ ಹೋಗುವುದಾಗಿ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.

ಆನ್ ಲೈನ್ ವ್ಯವಹಾರದಲ್ಲಿ ಮೋಸ ಆಗೋದನ್ನ ಕೇಳಿದ್ದೇವೆ. ಸೇವಿಂಗ್ಸ್ ಅಕೌಂಟ್ ನಲ್ಲಿರೋ ದುಡ್ಡು ಖಾಲಿಯಾಗಿರೋದನ್ನ ಕೇಳಿದ್ದೀವಿ ಆದರೆ ಎಫ್‌ಡಿ ಇಟ್ಟ ಹಣ ಕೂಡ ಮಂಗಮಾಯವಾಗಿದೆ ಅಂದ್ರೆ.. ನಿಜಕ್ಕೂ ಆಶ್ಚರ್ಯ. ಆದಷ್ಟು ಬೇಗ ಬ್ಯಾಂಕ್‌ನವ್ರು ಹರೀಶ್ ನೆರವಿಗೆ ಬರಲೇಬೇಕು. ಕೋರ್ಟ್ ತೀರ್ಪಿನಂತೆ ನಡೆದುಕೊಳ್ಳಲೇಬೇಕು.

ಇದನ್ನೂ ಓದಿ: ಫೈಜರ್​ ಬಯೋಎನ್​ಟೆಕ್​​ ಲಸಿಕೆಗೆ ಸಂಪೂರ್ಣ ಅನುಮೋದನೆ ನೀಡಿದ ಎಫ್​ಡಿಎ; ಸುರಕ್ಷಿತ ಲಸಿಕೆ ಎಂಬ ಹೆಗ್ಗಳಿಕೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?