AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಉಗ್ರ ಶಾರೀಕ್ ಹೆಜ್ಜೆ ಗುರುತು: ಮಂಗಳೂರು ಪೊಲೀಸರಿಂದ ರಥಬೀದಿ ಪರಿಶೀಲನೆ

ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಶಾರೀಕ್​ನಿಂದ ಮೊಬೈಲ್ ಪಡೆದು ಕರೆ ಮಾಡಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಉಡುಪಿಯಲ್ಲಿ ಉಗ್ರ ಶಾರೀಕ್ ಹೆಜ್ಜೆ ಗುರುತು: ಮಂಗಳೂರು ಪೊಲೀಸರಿಂದ ರಥಬೀದಿ ಪರಿಶೀಲನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 27, 2022 | 10:47 AM

Share

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಮೊಹಮದ್ ಶಾರೀಕ್ ಉಡುಪಿಯಲ್ಲಿಯೂ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ಉಡುಪಿಯ ರಥಬೀದಿಯ ಹಲವೆಡೆ ಪರಿಶೀಲಿಸಿದರು. ಕಳೆದ ಅಕ್ಟೋಬರ್ 11ರಂದು ಕೃಷ್ಣಮಠ ಹಾಗೂ ರಥಬೀದಿಯಲ್ಲಿ ಶಾರೀಕ್ ಸುತ್ತಾಡಿದ್ದ ಎನ್ನಲಾಗಿದ್ದು, ರಥಬೀದಿಯಿಂದ ಮಾಡಿದ ಮೊಬೈಲ್ ಫೋನ್ ಕರೆಯೊಂದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಶಾರೀಕ್​ನಿಂದ ಮೊಬೈಲ್ ಪಡೆದು ಕರೆ ಮಾಡಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ರಥಬೀದಿಯಲ್ಲಿ ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದರು. ಆದರೆ ಈ ಫೂಟೇಜ್​ಗಳಲ್ಲಿ ಪೊಲೀಸರಿಗೆ ಹೆಚ್ಚೇನೂ ಮಾಹಿತಿ ಸಿಗಲಿಲ್ಲ.

ನಗರ ಸಮೀಪದ ಮಂದಾರ್ತಿ ಅರಣ್ಯ ಪ್ರದೇಶದಲ್ಲಿ ಸ್ಯಾಟಲೈಟ್​​ ಫೋನ್​ ಒಂದು ಸಕ್ರಿಯವಾಗಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ. ​ರಾಜ್ಯ ಆಂತರಿಕ ಭದ್ರತಾ ವಿಭಾಗದಿಂದ ಜಿಲ್ಲಾ ವಿಭಾಗಕ್ಕೆ ಈ ಸಂಬಂಧ ಮಾಹಿತಿ ರವಾನಿಸಲಾಗಿದೆ. ಕಳೆದ ನವೆಂಬರ್ 9ರಂದು ಉಡುಪಿಯಲ್ಲಿ ‘ತುರಾಯ್​ ಸ್ಯಾಟಲೈಟ್’ನಿಂದ ಕರೆಯೊಂದು ಬಂದಿತ್ತು. ಮಂದಾರ್ತಿ ದೇಗುಲದಿಂದ ಒಂದೂವರೆ ಕಿಮೀ ದೂರದಲ್ಲಿ ಸ್ಯಾಟಲೈಟ್ ಫೋನ್ ಸಕ್ರಿಯವಾಗಿತ್ತು. ಈ ಸ್ಥಳವನ್ನು ಹುಡುಕಿದಾಗ ಉಡುಪಿ ಜಿಲ್ಲೆ ಗೇರುಬೀಜ ಕಾರ್ಖಾನೆ ಬಳಿಯ ಲೊಕೇಶನ್​ ಪತ್ತೆಯಾಗಿತ್ತು.

2020ರಲ್ಲೂ ಉಡುಪಿ ಜಿಲ್ಲೆಯಲ್ಲಿ ಸ್ಯಾಟಲೈಟ್ ಫೋನ್ ಸಕ್ರಿಯವಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಕೊಲ್ಲೂರು, ಜಡ್ಡಿನಗುಡ್ಡೆ, ಹೆರ್ಮುಂಡೆ ಭಾಗದಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾದ ಬಗ್ಗೆ ಮಾಹಿತಿ ತಿಳಿದುಬಂದಿತ್ತಾದರೂ ಪೊಲೀಸರು ಪರಿಶೀಲಿಸಿದಾಗ ಯಾವುದೇ ಪುರಾವೆಗಳು ದೊರಕಿರಲಿಲ್ಲ.

ಉಗ್ರರಿಗೆ ತಂತ್ರಜ್ಞಾನವೇ ವರದಾನ

ಕರ್ನಾಟಕದಲ್ಲಿ ಶಂಕಿತ ಉಗ್ರರು ಬಾಲಬಿಚ್ಚಿದ್ದು, ಕುಕೃತ್ಯ ಎಸಗಲು ಸಜ್ಜಾಗುತ್ತಿದ್ದಾರೆ. ಇತ್ತಿಚೆಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್​ ಬ್ಲಾಸ್ಟ್​ ನಂತರ ದೇಶಾದ್ಯಂತ ಉಗ್ರ ಚಟುವಟಿಕೆಗಳ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ದೇಶದ ಯಾವುದೇ ಮೂಲೆಯಲ್ಲಿ ಕುಳಿತು ವಿವಿಧ ದೇಶದ ಉಗ್ರರೊಂದಿಗೆ ಇಲ್ಲಿಂದಲೇ ಇವರು ಸಂಪರ್ಕ ಸಾಧಿಸುತ್ತಿದ್ದರು. ಮಲೆನಾಡಿನ ಶಂಕಿತ ಉಗ್ರರ ಬಂಧನದ ವೇಳೆ ವಶಕ್ಕೆ ಪಡೆದಿದ್ದ ಮೊಬೈಲ್ ಪರಿಶೀಲನೆ ವೇಳೆ ಸ್ಫೋಟಕ ಮಾಹಿತಿ ಪೊಲೀಸರಿಗೆ ತಿಳಿದುಬಂದಿದೆ. ಹೊರದೇಶದ ಉಗ್ರರೊಂದಿಗೆ ವಿವಿಧ ಆ್ಯಪ್ ಹಾಗೂ ಕೋಡ್​ವರ್ಡ್​​ ಮೂಲಕ ಇವರು ಚಾಟ್ ಮಾಡುತ್ತಿದ್ದರು. ಈ ಮಾಹಿತಿಯೊಂದಿಗೆ ಮೊಬೈಲ್​ನಲ್ಲಿ ಪ್ರಚೋದನಕಾರಿ ವಿಡಿಯೋಗಳು ಲಭ್ಯವಾಗಿವೆ.

ಮೊಬೈಲ್ ಪರಿಶೀಲನೆ ವೇಳೆ ಶಂಕಿತ ಉಗ್ರರು ಮತ್ತು ಉಗ್ರರ ಜೊತೆ ಸಿಗ್ನಲ್ ಮತ್ತು ವೈರ್ ಮಂತಾದ ಆ್ಯಪ್​ಗಳ ಮೂಲಕ ರೋಸ್, ಡಾಲಿ, ಪಿಂಕ್ ಇಂತಹ ಬೇರೆ ಕೋಡ್​ಗಳಲ್ಲಿ ಚಾಟಿಂಗ್ ಮಾಡಿಕೊಳ್ಳುತ್ತಿದ್ದರು. ಪ್ರತಿ ಬಾರಿ ಚಾಟಿಂಗ್ ಸಮಯದಲ್ಲಿ ಆ್ಯಪ್​ಗಳನ್ನು ಇನ್​ಸ್ಟಾಲ್ ಮಾಡಿ ಫೇಕ್ ವರ್ಚೂಲ್ ಐಡಿಗಳನ್ನು ತೆರೆಯುತ್ತಿದ್ದರು. ಚಾಟಿಂಗ್ ಮಾಡಿದ ನಂತರ ಇನ್​ಸ್ಟಾಲ್ ಮಾಡಿದ ಆ್ಯಪ್​ಗಳನ್ನು ಅನ್​ಇನ್​ಸ್ಟಾಲ್ ಮಾಡುತ್ತಿದ್ದರು. ಹೀಗಾಗಿ ಇವರ ಜಾಡು ಪತ್ತೆ ಮಾಡುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ.

ವೈರ್, ಸಿಗ್ನಲ್ ಆ್ಯಪ್​ಗಳ ಸರ್ವರ್​ಗಳು ವಿದೇಶದಲ್ಲಿರುವುದರಿಂದ ಮಾಹಿತಿ ತಿಳಿಯುವುದು ಕಷ್ಟಕರವಾಗಿದೆ. ರಾಜ್ಯ ಮತ್ತು ದೇಶದ ತನಿಖಾ ದಳಗಳಿಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ಹೀಗಾಗಿ ಚಾಲಾಕಿ ಉಗ್ರ ಸಂಘಟನೆಗಳು ತಂತ್ರಜ್ಞಾನ ಬಳಕೆ ಮಾಡಿಕೊಂಡು ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿವೆ ಎಂದು ಪೊಲೀಸರು ಹೇಳಿದ್ದರು.

Published On - 10:47 am, Sun, 27 November 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ