AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಸುಳ್ಳು ದಾಖಲೆ ನೀಡಿ 2ನೇ ಮದುವೆಗೆ ಮುಂದಾದ 4 ಮಕ್ಕಳ ತಂದೆ; ಮದುವೆ ಅರ್ಜಿ ತಿರಸ್ಕರಿಸಲು ಮನವಿ

ಕೊರೊನಾ ಸೋಂಕಿಗೆ ಮೊದಲ ಪತ್ನಿ ಬಲಿಯಾಗಿದ್ದರು. 18 ವರ್ಷದ ಪುತ್ರಿ, 16 ವರ್ಷದ ಮಗ, ಎರಡೂವರೆ ವರ್ಷದ ಅವಳಿ ಮಕ್ಕಳು ಇರುವ ತಂದೆ ಈಗ, ತನ್ನ 4 ಮಕ್ಕಳನ್ನು ಬಿಟ್ಟು ಅಜ್ಜಿ ಮನೆಯಲ್ಲಿ ಮತ್ತೊಂದು ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದಾನೆ.

ಉಡುಪಿ: ಸುಳ್ಳು ದಾಖಲೆ ನೀಡಿ 2ನೇ ಮದುವೆಗೆ ಮುಂದಾದ 4 ಮಕ್ಕಳ ತಂದೆ; ಮದುವೆ ಅರ್ಜಿ ತಿರಸ್ಕರಿಸಲು ಮನವಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 17, 2021 | 3:13 PM

Share

ಉಡುಪಿ: ಸುಳ್ಳು ದಾಖಲೆ ನೀಡಿ 4 ಮಕ್ಕಳ ತಂದೆ ಒಬ್ಬ 2ನೇ ಮದುವೆಗೆ ಮುಂದಾದ ಘಟನೆ ಉಡುಪಿಯಲ್ಲಿ ನಡೆದಿದೆ. ಯುವತಿ ಜತೆ ವಿವಾಹಕ್ಕೆ ಅನ್ಯಧರ್ಮೀಯ ಯುವಕ ಮುಂದಾಗಿದ್ದಾನೆ. ಸಬ್​ರಿಜಿಸ್ಟ್ರಾರ್​ ಕಚೇರಿಯಲ್ಲಿ ವಿವಾಹ ನೋಂದಣಿಗೆ ಯುವಕ ಸಿದ್ಧತೆ ಮಾಡಿಕೊಂಡಿದ್ದಾನೆ. ಉಡುಪಿಯ ಮಧ್ವನಗರದ ನಿವಾಸಿಯಾಗಿರುವ ಮಹಿಳೆಯನ್ನು ವರಿಸಲು ಸುಳ್ಳು ದಾಖಲೆ ನೀಡಿ ತಯಾರಾಗಿದ್ದ.

ಯುವಕ ದಕ್ಷಿಣ ಕನ್ನಡ ಜಿಲ್ಲೆಯ ವಿಳಾಸದಲ್ಲಿ ಅವಿವಾಹಿತನೆಂದು ಅರ್ಜಿ ಸಲ್ಲಿಕೆ ಮಾಡಿದ್ದ. 2002ರಲ್ಲಿ ಯುವಕ ಮೊದಲ ಮಡದಿಯನ್ನು ಮದುವೆಯಾಗಿದ್ದ. ಆದರೆ, ಕೊರೊನಾ ಸೋಂಕಿಗೆ ಮೊದಲ ಪತ್ನಿ ಬಲಿಯಾಗಿದ್ದರು. 18 ವರ್ಷದ ಪುತ್ರಿ, 16 ವರ್ಷದ ಮಗ, ಎರಡೂವರೆ ವರ್ಷದ ಅವಳಿ ಮಕ್ಕಳು ಇರುವ ತಂದೆ ಈಗ, ತನ್ನ 4 ಮಕ್ಕಳನ್ನು ಬಿಟ್ಟು ಅಜ್ಜಿ ಮನೆಯಲ್ಲಿ ಮತ್ತೊಂದು ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದಾನೆ.

ತನ್ನ ಸಮುದಾಯದ ಮುಖಂಡರ ಮಾತಿಗೂ ಕಿಮ್ಮತ್ತು ನೀಡುತ್ತಿಲ್ಲ. ಇತರೆ ಮುಖಂಡರು, ಮಕ್ಕಳ ಮನವಿಗೂ ಕೇರ್​ಲೆಸ್​ ಎನ್ನುತ್ತಿದ್ದಾನೆ ಎಂದು ತಿಳಿದುಬಂದಿದೆ. ಇದೀಗ, ಮುಖಂಡರು ಹಾಗೂ ಮಕ್ಕಳು ಸಬ್​ರಿಜಿಸ್ಟ್ರಾರ್​ ಕಚೇರಿಗೆ ಮನವಿ ಸಲ್ಲಿಸಿದ್ದಾರೆ. ಮದುವೆ ಅರ್ಜಿ ತಿರಸ್ಕರಿಸುವಂತೆ ವಿವಾಹ ನೋಂದಣಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಉತ್ತರ ಕೊಟ್ಟರೆ ಕೊಚ್ಚೆಗೆ ಕಲ್ಲು ಹೊಡೆದಂತೆ: ಉಡುಪಿಯಲ್ಲಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್

ಇದನ್ನೂ ಓದಿ: ಉಪ್ಪಿನಂಗಡಿ: ಪಿಎಫ್ಐ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಖಂಡಿಸಿ ಪಿಎಫ್‌ಐ ಕಚೇರಿಯಿಂದ ಎಸ್​ಪಿ ಕಚೇರಿಗೆ ಮೆರವಣಿಗೆ

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು