AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನಸಿಕ ಖಿನ್ನತೆ: ಅಪಾರ್ಟ್​ಮೆಂಟ್​ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ

ಅಪಾರ್ಟ್​ಮೆಂಟ್​ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಹೈ‌ಪಾಯಿಂಟ್ ಹೈಟ್ಸ್​​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಗಾಯಗೊಂಡಿದ್ದ ಬಾಲಕಿಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. 

ಮಾನಸಿಕ ಖಿನ್ನತೆ: ಅಪಾರ್ಟ್​ಮೆಂಟ್​ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ
ಮೃತ ಬಾಲಕಿ ಪ್ರಜ್ಞಾ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on: Nov 06, 2023 | 10:45 PM

ಉಡುಪಿ, ನವೆಂಬರ್​​​​ 06: ಅಪಾರ್ಟ್​ಮೆಂಟ್​ನ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಹೈ‌ಪಾಯಿಂಟ್ ಹೈಟ್ಸ್​​ ಅಪಾರ್ಟ್​ಮೆಂಟ್​ನಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಪ್ರಜ್ಞಾ(13) ಮೃತ ಬಾಲಕಿ. ಮುಂಜಾನೆ 6.30ರ ಸುಮಾರಿಗೆ ಅಪಾರ್ಟ್​ಮೆಂಟ್​ನಿಂದ ಜಿಗಿದಿದ್ದು, ಬಳಿಕ ಗಾಯಗೊಂಡಿದ್ದ ಬಾಲಕಿಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ.

ಹಾಡಹಗಲೇ ಕಾರಿನ ಗ್ಲಾಸ್ ಒಡೆದು 4.5 ಲಕ್ಷ ಹಣ ದರೋಡೆ

ಮಂಡ್ಯ: ಹಾಡುಹಗಲೇ ಕಾರಿನ ಗ್ಲಾಸ್ ಒಡೆದು 4.5 ಲಕ್ಷ ಹಣ ದರೋಡೆ ಮಾಡಿರುವಂತಹ ಘಟನೆ ಮಂಡ್ಯದ ನಗರಸಭೆ ಆವರಣದಲ್ಲಿ ನಡೆದಿದೆ. ಚಿನಕುರಳಿ ಗ್ರಾಮದ ಪರಮೇಶ್ ಹಣ ಕಳೆದುಕೊಂಡ ವ್ಯಕ್ತಿ. ನಗರಸಭೆ ಆವರಣದಲ್ಲಿ ಕಾರು ನಿಲ್ಲಿಸಿ SBI ಬ್ಯಾಂಕ್​ಗೆ ಕೆಲಸದ ನಿಮಿತ್ತ ಹೋಗಿದ್ದರು. ಕಾರಿನಲ್ಲಿ ಹಣವಿಟ್ಟಿದ್ದನ್ನ ಗಮನಿಸಿ ಕಳ್ಳತನ ಮಾಡಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ

ಲಕ್ಷಾಂತರ ರೂ. ಹಣ ಕಳೆದುಕೊಂಡ ಪರಮೇಶ್ ಕಣ್ಣೀರು ಹಾಕಿದ್ದಾರೆ. ಜಮೀನು ರಿಜಿಸ್ಟರ್ ಮಾಡಿಸಿ ಹಣ ಪಡೆದು ನಗರಸಭೆ ಬಳಿ ಬಂದಿದ್ದರು. ಬೇರೆಯವರಿಗೆ ನೀಡಬೇಕಿದ್ದ ಹಣವನ್ನು ಕಳೆದುಕೊಂಡು ಪರಮೇಶ್ ಗೋಳಾಡಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ಬಲಿ ಆಗಿರುವಂತಹ ಘಟನೆ ಜಿಲ್ಲೆಯ ಹೆಚ್‌.ಡಿ.ಕೋಟೆ ತಾಲೂಕಿನ ಸರಗೂರಿನ ಕಾಡು ಬೇಗೂರು ಕಾಲೋನಿಯಲ್ಲಿ ನಡೆದಿದೆ. ಜಮೀನಿನಲ್ಲಿ ಶುಂಠಿ ಕೆಲಸ ಮಾಡುತ್ತಿದ್ದಾಗ ಹುಲಿ ದಾಳಿ ಮಾಡಿದ್ದು, ರೈತ ಬಾಲಾಜಿ ನಾಯಕ್‌ ಮೃತಪಟ್ಟಿದ್ದಾರೆ. ರೈತ ಬಾಲಾಜಿ ದೇಹವನ್ನ ಹುಲಿ ಅರ್ಧ ತಿಂದು ಹೋಗಿದೆ.

ನಾಪತ್ತೆಯಾಗಿದ್ದ ರೈತ ಶವವಾಗಿ ಪತ್ತೆ

ಬಾಗಲಕೋಟೆ: ಕೆರೆದಂಡೆಯಲ್ಲಿನ ಮೋಟರ್ ಶುರು ಮಾಡಲು ಹೋಗಿ ನಾಪತ್ತೆಯಾಗಿದ್ದ ರೈತ ಶವವಾಗಿ ಪತ್ತೆಯಾಗಿರುವಂತಹ ಘಟನೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ಕೆರೆಯಲ್ಲಿ ರೈತ ನಾಪತ್ತೆಯಾಗಿದ್ದ. ನಾಗಪ್ಪ ರಾಣಗಟ್ಟಿ(೨೭)ಮೃತ ಯುವರೈತ. ಜಮಖಂಡಿ ಅಗ್ನಿಶಾಮಕ ದಳ ಸಿಬ್ಬಂದಿ ಶವ ಹೊರತೆಗೆದಿದ್ದಾರೆ. ಕೆರೆ ಬಳಿ ಕುಟುಂಬಸ್ಥರು ಜಮಾಯಿಸಿದ್ದು ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಗ್ಯಾಸ್ ಕಟರ್​ನಿಂದ ಎಟಿಎಂ ಮಷಿನ್ ಕತ್ತರಿಸಿ‌ ಹಣ ಕಳ್ಳತನ

ವಿಜಯಪುರ: ಗ್ಯಾಸ್ ಕಟರ್​ನಿಂದ ಎಟಿಎಂ ಮಷಿನ್ ಕತ್ತರಿಸಿ‌ ಹಣ ಕಳ್ಳತನ ಮಾಡಿರುವಂತಹ ಘಟನೆ ವಿಜಯಪುರ ತಾಲೂಕಿನ ಶಿವಣಗಿ ಗ್ರಾಮದ ಇಂಡಿಯಾ ಒನ್ ಎಟಿಎಂನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ರಾಯಗೊಂಡ‌ ಜನಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ.

ಎಟಿಎಂನ ಸಿಸಿ‌ ಕ್ಯಾಮೆರಾಗೆ ಬಣ್ಣ ಬಳೆದಿದ್ದಾರೆ. ಪ್ರಾಥಮಿಕ‌ ಮಾಹಿತಿ ಪ್ರಕಾರ 3.60 ಲಕ್ಷ ರೂ. ಕಳ್ಳತನ ಮಾಡಿ ಪರಾರಿ ಆಗಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖದೀಮರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು