AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆಯಲ್ಲಿ ಮಿಸ್‌ ಫೈರಿಂಗ್‌; ಓರ್ವನ ಸ್ಥಿತಿ ಗಂಭೀರ

ಗರದ ಬನ್ನಂಜೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಜಯಲಕ್ಷ್ಮೀ ಸಿಲ್ಕ್‌ (Jayalakshmi Silk) ನಲ್ಲಿ ಮಿಸ್‌ ಫೈರಿಂಗ್​ ಆಗಿ ಓರ್ವ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡೇಟು ತಗುಲಿದ ಗಾಯಾಳುವನ್ನು ಉಡುಪಿ(Udupi) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆಯಲ್ಲಿ ಮಿಸ್‌ ಫೈರಿಂಗ್‌; ಓರ್ವನ ಸ್ಥಿತಿ ಗಂಭೀರ
ಮಿಸ್​ ಫೈರಿಂಗ್​
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Dec 30, 2023 | 3:03 PM

Share

ಉಡುಪಿ, ಡಿ.30: ನಗರದ ಬನ್ನಂಜೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಜಯಲಕ್ಷ್ಮೀ ಸಿಲ್ಕ್‌ (Jayalakshmi Silk) ನಲ್ಲಿ ಮಿಸ್‌ ಫೈರಿಂಗ್ (Miss firing)​ ಆಗಿ ಓರ್ವ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡೇಟು ತಗುಲಿದ ಗಾಯಾಳುವನ್ನು ಉಡುಪಿ(Udupi) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್‌ ಪತ್ತೆಯಾಗಿತ್ತು. ಬಳಿಕ ಗನ್‌ ಎತ್ತಿಕೊಂಡು ಆಪರೇಟ್‌ ಮಾಡಿ ಪರೀಕ್ಷಿಸಲು ಸಿಬ್ಬಂದಿ ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡೇಟು ತಗುಲಿತ್ತು.

ಈ ಹಿಂದೆಯೂ ಭೂಗತ ಪಾತಕಿಗಳಿಂದ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ನಡೆದಿತ್ತು ಫೈರಿಂಗ್‌

ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್​ನ್ನು ವಶಕ್ಕೆ ಪಡೆದಿದ್ದಾರೆ. ಈ ಗನ್‌ ಯಾರದ್ದು? ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವುದರ ಕುರಿತು ತನಿಖೆ ಶುರುವಾಗಿದೆ. ಇಂತಹ ಘಟನೆ ಈ ಹಿಂದೆ ಕೂಡ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ನಡೆದಿತ್ತು ಎನ್ನಲಾಗಿದೆ. ಭೂಗತ ಪಾತಕಿಗಳು ಫೈರಿಂಗ್‌ ಮಾಡಿದ್ದರಂತೆ. ಇದೀಗ ಅಪರಿಚಿತರ ಗನ್​ ಸಿಕ್ಕಿದ್ದು, ಪರೀಕ್ಷಿಸಲು ಹೋದಾಗ ಮಿಸ್​ ಫೈರಿಂಗ್​ ಆಗಿದೆ.​

ಇದನ್ನೂ ಓದಿ:ರೌಡಿಗೆ ಕಾಲಿಗೆ ಗುಂಡೇಟು; ಮಟ ಮಟ ಮಧ್ಯಾಹ್ನವೇ ದಾಳಿ ಮಾಡಿದ್ದ ರೌಡಿ ಶೀಟರ್ ಪೊಲೀಸ್​ ಬಲೆಗೆ

ಶಿವಮೊಗ್ಗದಲ್ಲಿ ರೌಡಿ ಕಾಲಿಗೆ ಗುಂಡೇಟು

ಕಳೆದ ಎರಡು ದಿನಗಳ ಹಿಂದೆಯಷ್ಟೇ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್​ನಲ್ಲಿ ಡಿಸೆಂಬರ್​ 25 ರ ಮಧ್ಯಾಹ್ನ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್​ ನಡೆಸಿದ್ದರು. ಗಾಯಗೊಂಡಿರುವ ವ್ಯಕ್ತಿಯನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Sat, 30 December 23

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ