AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆಯಲ್ಲಿ ಮಿಸ್‌ ಫೈರಿಂಗ್‌; ಓರ್ವನ ಸ್ಥಿತಿ ಗಂಭೀರ

ಗರದ ಬನ್ನಂಜೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಜಯಲಕ್ಷ್ಮೀ ಸಿಲ್ಕ್‌ (Jayalakshmi Silk) ನಲ್ಲಿ ಮಿಸ್‌ ಫೈರಿಂಗ್​ ಆಗಿ ಓರ್ವ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡೇಟು ತಗುಲಿದ ಗಾಯಾಳುವನ್ನು ಉಡುಪಿ(Udupi) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆಯಲ್ಲಿ ಮಿಸ್‌ ಫೈರಿಂಗ್‌; ಓರ್ವನ ಸ್ಥಿತಿ ಗಂಭೀರ
ಮಿಸ್​ ಫೈರಿಂಗ್​
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Dec 30, 2023 | 3:03 PM

Share

ಉಡುಪಿ, ಡಿ.30: ನಗರದ ಬನ್ನಂಜೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಜಯಲಕ್ಷ್ಮೀ ಸಿಲ್ಕ್‌ (Jayalakshmi Silk) ನಲ್ಲಿ ಮಿಸ್‌ ಫೈರಿಂಗ್ (Miss firing)​ ಆಗಿ ಓರ್ವ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡೇಟು ತಗುಲಿದ ಗಾಯಾಳುವನ್ನು ಉಡುಪಿ(Udupi) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್‌ ಪತ್ತೆಯಾಗಿತ್ತು. ಬಳಿಕ ಗನ್‌ ಎತ್ತಿಕೊಂಡು ಆಪರೇಟ್‌ ಮಾಡಿ ಪರೀಕ್ಷಿಸಲು ಸಿಬ್ಬಂದಿ ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡೇಟು ತಗುಲಿತ್ತು.

ಈ ಹಿಂದೆಯೂ ಭೂಗತ ಪಾತಕಿಗಳಿಂದ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ನಡೆದಿತ್ತು ಫೈರಿಂಗ್‌

ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್​ನ್ನು ವಶಕ್ಕೆ ಪಡೆದಿದ್ದಾರೆ. ಈ ಗನ್‌ ಯಾರದ್ದು? ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವುದರ ಕುರಿತು ತನಿಖೆ ಶುರುವಾಗಿದೆ. ಇಂತಹ ಘಟನೆ ಈ ಹಿಂದೆ ಕೂಡ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ನಡೆದಿತ್ತು ಎನ್ನಲಾಗಿದೆ. ಭೂಗತ ಪಾತಕಿಗಳು ಫೈರಿಂಗ್‌ ಮಾಡಿದ್ದರಂತೆ. ಇದೀಗ ಅಪರಿಚಿತರ ಗನ್​ ಸಿಕ್ಕಿದ್ದು, ಪರೀಕ್ಷಿಸಲು ಹೋದಾಗ ಮಿಸ್​ ಫೈರಿಂಗ್​ ಆಗಿದೆ.​

ಇದನ್ನೂ ಓದಿ:ರೌಡಿಗೆ ಕಾಲಿಗೆ ಗುಂಡೇಟು; ಮಟ ಮಟ ಮಧ್ಯಾಹ್ನವೇ ದಾಳಿ ಮಾಡಿದ್ದ ರೌಡಿ ಶೀಟರ್ ಪೊಲೀಸ್​ ಬಲೆಗೆ

ಶಿವಮೊಗ್ಗದಲ್ಲಿ ರೌಡಿ ಕಾಲಿಗೆ ಗುಂಡೇಟು

ಕಳೆದ ಎರಡು ದಿನಗಳ ಹಿಂದೆಯಷ್ಟೇ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್​ನಲ್ಲಿ ಡಿಸೆಂಬರ್​ 25 ರ ಮಧ್ಯಾಹ್ನ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್​ ನಡೆಸಿದ್ದರು. ಗಾಯಗೊಂಡಿರುವ ವ್ಯಕ್ತಿಯನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Sat, 30 December 23

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ