AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆಯಲ್ಲಿ ಮಿಸ್‌ ಫೈರಿಂಗ್‌; ಓರ್ವನ ಸ್ಥಿತಿ ಗಂಭೀರ

ಗರದ ಬನ್ನಂಜೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಜಯಲಕ್ಷ್ಮೀ ಸಿಲ್ಕ್‌ (Jayalakshmi Silk) ನಲ್ಲಿ ಮಿಸ್‌ ಫೈರಿಂಗ್​ ಆಗಿ ಓರ್ವ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡೇಟು ತಗುಲಿದ ಗಾಯಾಳುವನ್ನು ಉಡುಪಿ(Udupi) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿಯ ಪ್ರಸಿದ್ಧ ವಸ್ತ್ರ ಮಳಿಗೆಯಲ್ಲಿ ಮಿಸ್‌ ಫೈರಿಂಗ್‌; ಓರ್ವನ ಸ್ಥಿತಿ ಗಂಭೀರ
ಮಿಸ್​ ಫೈರಿಂಗ್​
ಪ್ರಜ್ವಲ್ ಅಮೀನ್​, ಉಡುಪಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 30, 2023 | 3:03 PM

Share

ಉಡುಪಿ, ಡಿ.30: ನಗರದ ಬನ್ನಂಜೆಯಲ್ಲಿರುವ ಪ್ರಸಿದ್ಧ ವಸ್ತ್ರ ಮಳಿಗೆ ಜಯಲಕ್ಷ್ಮೀ ಸಿಲ್ಕ್‌ (Jayalakshmi Silk) ನಲ್ಲಿ ಮಿಸ್‌ ಫೈರಿಂಗ್ (Miss firing)​ ಆಗಿ ಓರ್ವ ವ್ಯಕ್ತಿಗೆ ಗುಂಡು ತಗುಲಿದೆ. ಗುಂಡೇಟು ತಗುಲಿದ ಗಾಯಾಳುವನ್ನು ಉಡುಪಿ(Udupi) ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್‌ ಪತ್ತೆಯಾಗಿತ್ತು. ಬಳಿಕ ಗನ್‌ ಎತ್ತಿಕೊಂಡು ಆಪರೇಟ್‌ ಮಾಡಿ ಪರೀಕ್ಷಿಸಲು ಸಿಬ್ಬಂದಿ ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡೇಟು ತಗುಲಿತ್ತು.

ಈ ಹಿಂದೆಯೂ ಭೂಗತ ಪಾತಕಿಗಳಿಂದ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ನಡೆದಿತ್ತು ಫೈರಿಂಗ್‌

ಇನ್ನು ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್​ನ್ನು ವಶಕ್ಕೆ ಪಡೆದಿದ್ದಾರೆ. ಈ ಗನ್‌ ಯಾರದ್ದು? ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಎನ್ನುವುದರ ಕುರಿತು ತನಿಖೆ ಶುರುವಾಗಿದೆ. ಇಂತಹ ಘಟನೆ ಈ ಹಿಂದೆ ಕೂಡ ಜಯಲಕ್ಷ್ಮೀ ಸಿಲ್ಕ್ಸ್‌ನಲ್ಲಿ ನಡೆದಿತ್ತು ಎನ್ನಲಾಗಿದೆ. ಭೂಗತ ಪಾತಕಿಗಳು ಫೈರಿಂಗ್‌ ಮಾಡಿದ್ದರಂತೆ. ಇದೀಗ ಅಪರಿಚಿತರ ಗನ್​ ಸಿಕ್ಕಿದ್ದು, ಪರೀಕ್ಷಿಸಲು ಹೋದಾಗ ಮಿಸ್​ ಫೈರಿಂಗ್​ ಆಗಿದೆ.​

ಇದನ್ನೂ ಓದಿ:ರೌಡಿಗೆ ಕಾಲಿಗೆ ಗುಂಡೇಟು; ಮಟ ಮಟ ಮಧ್ಯಾಹ್ನವೇ ದಾಳಿ ಮಾಡಿದ್ದ ರೌಡಿ ಶೀಟರ್ ಪೊಲೀಸ್​ ಬಲೆಗೆ

ಶಿವಮೊಗ್ಗದಲ್ಲಿ ರೌಡಿ ಕಾಲಿಗೆ ಗುಂಡೇಟು

ಕಳೆದ ಎರಡು ದಿನಗಳ ಹಿಂದೆಯಷ್ಟೇ ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್​ನಲ್ಲಿ ಡಿಸೆಂಬರ್​ 25 ರ ಮಧ್ಯಾಹ್ನ ಶಶಿ ಎಂಬಾತನ ಮೇಲೆ ಮೂವರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಫೈರಿಂಗ್​ ನಡೆಸಿದ್ದರು. ಗಾಯಗೊಂಡಿರುವ ವ್ಯಕ್ತಿಯನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:57 pm, Sat, 30 December 23

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!