AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್- ಕೇಸರಿ ಶಾಲು ವಿವಾದ ಹಿನ್ನೆಲೆ: ಉಡುಪಿಯಲ್ಲಿ ಎಲ್ಲಾ ಸಂಘಟನೆಗಳ ಮುಖಂಡರ ಶಾಂತಿ ಸಭೆ

ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರಕ್ಕೆ ಸಂಬಂಧಿಸಿ ಭಾನುವಾರ (ಫೆಬ್ರವರಿ 13) ಉಡುಪಿಯಲ್ಲಿ ಎಲ್ಲ ಸಂಘಟನೆಗಳ ಮುಖಂಡರ ಶಾಂತಿ ಸಭೆ ನಡೆಸಲಾಗಿದೆ. ಶಾಂತಿ ಸಭೆ ಬಳಿಕ ಉಡುಪಿ ಶಾಸಕ ರಘುಪತಿ ಭಟ್ ಮಾತನಾಡಿದ್ದಾರೆ.

ಹಿಜಾಬ್- ಕೇಸರಿ ಶಾಲು ವಿವಾದ ಹಿನ್ನೆಲೆ: ಉಡುಪಿಯಲ್ಲಿ ಎಲ್ಲಾ ಸಂಘಟನೆಗಳ ಮುಖಂಡರ ಶಾಂತಿ ಸಭೆ
ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
TV9 Web
| Updated By: ganapathi bhat|

Updated on: Feb 13, 2022 | 6:53 PM

Share

ಉಡುಪಿ: ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರಕ್ಕೆ ಸಂಬಂಧಿಸಿ ಭಾನುವಾರ (ಫೆಬ್ರವರಿ 13) ಉಡುಪಿಯಲ್ಲಿ ಎಲ್ಲ ಸಂಘಟನೆಗಳ ಮುಖಂಡರ ಶಾಂತಿ ಸಭೆ ನಡೆಸಲಾಗಿದೆ. ಶಾಂತಿ ಸಭೆ ಬಳಿಕ ಉಡುಪಿ ಶಾಸಕ ರಘುಪತಿ ಭಟ್ ಮಾತನಾಡಿದ್ದಾರೆ. ಸಭೆಗೆ ಮುಸ್ಲಿಂ ವಿದ್ಯಾರ್ಥಿನಿಯರನ್ನ ಬೆಂಬಲಿಸಿದ್ದ ಸಿಎಫ್​ಐ ಗೈರಾಗಿದೆ. ಎಲ್ಲಾ ಸಂಘಟನೆ ಮುಖಂಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೋರ್ಟ್‌ ತೀರ್ಪಿನವರೆಗೆ ಅಹಿತಕರ ಘಟನೆ ಆಗದಂತೆ ಮನವಿ ಮಾಡಲಾಗಿದೆ. ಸಮವಸ್ತ್ರ ಇರುವ ಕಾಲೇಜುಗಳಲ್ಲಿ ಕೋರ್ಟ್ ಆದೇಶ ಅನ್ವಯ ಆಗಲಿದೆ. ಯಾರೂ ಹಿಜಾಬ್, ಕೇಸರಿ ಶಾಲು ಧರಿಸದಂತೆ ಹೇಳಿದ್ದೇವೆ. ಕೋರ್ಟ್ ಮಧ್ಯಂತರ ಆದೇಶ ಮೀರಲ್ಲ ಎಂದು ಹೇಳಿದ್ದಾರೆ ಎಂದು ಶಾಂತಿ ಸಭೆ ಬಳಿಕ ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. 

ಜಿಲ್ಲೆಯಲ್ಲಿ ಎಲ್ಲರೂ ಶಾಂತಿಯನ್ನು ಬಯಸುವ ಜನರಿದ್ದಾರೆ. ಆಗಬಾರದ್ದು ಆಗಿಹೋಗಿದೆ, ಮುಂದೆ ಶಾಂತಿಯುತವಾಗಿರಲಿ. ಒಳ್ಳೆಯ ರೀತಿಯಲ್ಲಿ ಅಂತ್ಯವಾಗಲಿ ಎಂದು ಭಾವಿಸುತ್ತೇವೆ. ಉಡುಪಿ ಜಿಲ್ಲೆಯಲ್ಲಿ ಶಾಂತಿ ವಾತಾವರಣ ಹಾಳಾಗಬಾರದು. ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಸಮ್ಮತಿಸಿದ್ದಾರೆ. ಹಿಜಾಬ್​ ರಹಿತವಾಗಿ ಶಾಲೆಗೆ ಕಳಿಸುವುದು ಪೋಷಕರಿಗೆ ಬಿಟ್ಟದ್ದು. ಎಲ್ಲಾ ಮಕ್ಕಳು ಶಾಲೆಗೆ ಬರಬೇಕೆನ್ನುವುದು ನಮ್ಮ ಆಶಯ. ಶಾಲಾ ಕಾಲೇಜು ಆಡಳಿತ ಮಂಡಳಿ ಈ ನಿಟ್ಟಿನಲ್ಲಿ ಸಹಕರಿಸಲಿ. ಮಕ್ಕಳು ಸಾಂವಿಧಾನಿಕ ಹಕ್ಕು ಕೇಳುತ್ತಿದ್ದಾರೆ. ಹೈಕೋರ್ಟ್​ನಿಂದ ಒಳ್ಳೆಯ ತೀರ್ಪು ಬರುವ ವಿಶ್ವಾಸವಿದೆ ಎಂದು ಶಾಂತಿ ಸಭೆ ನಂತರ ಎಸ್​ಡಿಪಿಐ ಜಿಲ್ಲಾಧ್ಯಕ್ಷ ನಜೀರ್​ ಹೇಳಿಕೆ ನೀಡಿದ್ದಾರೆ.

ಕೋರ್ಟ್​ ಆದೇಶ ಪಾಲಿಸಿ ನಾಳೆಯಿಂದ ಹೈಸ್ಕೂಲ್ ಪುನಾರಂಭ ಮಾಡುತ್ತೇವೆ. ಹೈಕೋರ್ಟ್ ಆದೇಶ ಪಾಲಿಸುವುದಾಗಿ ಎಲ್ಲರೂ ಸಮ್ಮತಿಸಿದ್ದಾರೆ. ಶಾಲೆಗಳಲ್ಲಿ ಕಡ್ಡಾಯವಾಗಿ ಸಮವಸ್ತ್ರ ನೀತಿ ಜಾರಿಗೆ ತರುತ್ತೇವೆ. ತಾಲೂಕು ಕಚೇರಿಯಲ್ಲಿ ನಡೆದ ಶಾಂತಿ ಸಭೆ ಯಶಸ್ವಿಯಾಗಿದೆ. ಸಭೆಗೆ ಸಿಎಫ್​ಐ ಮುಖಂಡರಿಗೆ ಆಹ್ವಾನಿಸಿದ್ದರೂ ಗೈರಾಗಿದ್ದರು ಎಂದು ಸರ್ವಧರ್ಮ, ಸರ್ವಪಕ್ಷದ ಸಭೆ ನಂತರ ಉಡುಪಿ ತಹಶೀಲ್ದಾರ್​ ಪ್ರದೀಪ್ ಹುರ್ಡೇಕರ್​ ಹೇಳಿದ್ದಾರೆ.

ಉಡುಪಿ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಹಿನ್ನೆಲೆ ಉಡುಪಿ ತಹಶೀಲ್ದಾರ್ ಕಚೇರಿಯಲ್ಲಿ ಮಹತ್ವದ ಶಾಂತಿ ಸಭೆ ನಡೆಸಲಾಗಿದೆ. ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಲಾಗಿದ್ದು ಶಾಸಕ ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಹಿಂದೂ ಜಾಗರಣ ವೇದಿಕೆ, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ, ಎಸ್‌ಡಿಪಿಐ ಮುಖಂಡರು, ಸಹಬಾಳ್ವೆ ಸಂಘಟನೆ ಮುಖಂಡರು, ಕ್ರೈಸ್ತ ಧರ್ಮಗುರುಗಳು, ಉಡುಪಿ ಕೃಷ್ಣಮಠದ ಪ್ರತಿನಿಧಿಗಳು, ಕಾಂಗ್ರೆಸ್‌, ಎಬಿವಿಪಿ ಮುಖಂಡರು, ಜಿಲ್ಲಾ ಪೊಲೀಸರು ಭಾಗಿ ಆಗಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: 12 ಮಕ್ಕಳಿಗೆ ಟ್ರೈನಿಂಗ್ ನೀಡಲಾಗಿದೆ, ನನಗೆ ಸಿಕ್ಕ ಮಾಹಿತಿ ನೀಡಿದ್ದೀನಿ ಸರ್ಕಾರ ತನಿಖೆ ನಡೆಸಲಿ -ಶಾಸಕ ರಘುಪತಿ ಭಟ್

ಇದನ್ನೂ ಓದಿ: ಮುಸ್ಲಿಂ ದೇಶದ ಅನ್ನ ತಿಂದು ನಮ್ಮ ಬಗ್ಗೆ ಬರೆಯುತ್ತೀಯಾ; ಸೌದಿಯಲ್ಲಿ ಹಿಜಾಬ್ ವಿರೋಧಿ ಪೋಸ್ಟ್ ಹಂಚಿಕೊಂಡ ವ್ಯಕ್ತಿಗೆ ಬೆದರಿಕೆ ಕರೆ

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಅನುಮಾನಾಸ್ಪದ ಸ್ಫೋಟದ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳೋದೇನು ನೋಡಿ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ
ಒಬ್ಬರದ್ದು ಕಣ್ಣೀರು, ಇನ್ನೊಬ್ಬರದ್ದು ಹರಟೆ; ಒಂದೇ ಬ್ಯಾರಕ್​ನಲ್ಲಿ ಗ್ಯಾಂಗ