AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಮುಂಗಾರು ಮಳೆ: ಉಡುಪಿಯಲ್ಲಿ ಈಗ ನಷ್ಟದ ಲೆಕ್ಕಾಚಾರ ಶುರು

ಮುಂಗಾರು ಮಳೆ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಕರಾವಳಿ ಜಿಲ್ಲೆ ಉಡುಪಿಯಲ್ಲಿ, ಇದೀಗ ನಷ್ಟದ ಲೆಕ್ಕಾಚಾರ ನಡೆಯುತ್ತಿದೆ. ನದಿ ಪಾತ್ರದಲ್ಲಿ ಮುಳುಗಿ ಹೋಗಿರುವ ಭತ್ತದ ಗದ್ದೆಗಳೆಷ್ಟು? ಬಿತ್ತನೆ ನಾಟಿ ಮಾಡಿದ ವ್ಯಾಪ್ತಿಯಲ್ಲಿ ಪೈರು ಕೊಳೆತ ಹೆಕ್ಟೇರ್​ಗಳೆಷ್ಟು? ಸರಕಾರದಿಂದ ಸಿಗುವ ಪರಿಹಾರವೆಷ್ಟು?. ಹೀಗೆ ಸಾವಿರ ಸವಾಲಿನ ನಡುವೆ ಭತ್ತ ಬೆಳೆದ ರೈತ ಚಿಂತಾಕ್ರಾಂತನಾಗಿದ್ದಾನೆ.

ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಮುಂಗಾರು ಮಳೆ: ಉಡುಪಿಯಲ್ಲಿ ಈಗ ನಷ್ಟದ ಲೆಕ್ಕಾಚಾರ ಶುರು
ಮಳೆಗೆ ಉಡುಪಿಯಲ್ಲಿ ಬೆಳೆದ ಬೆಳೆ ನಾಶ
ಪ್ರಜ್ವಲ್ ಅಮೀನ್​, ಉಡುಪಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 24, 2024 | 9:14 PM

Share

ಉಡುಪಿ, ಜು.24: ಕರಾವಳಿ ಜಿಲ್ಲೆ ಉಡುಪಿ(Udupi)ಯಲ್ಲಿ ಸಮೃದ್ಧ ಮಳೆಯಾಗಿದೆ. ನದಿ ಪಾತ್ರದಲ್ಲಿ ಮಳೆ ನೆರೆ ಸೃಷ್ಟಿಸಿ ಜನರನ್ನ ಆತಂಕಕ್ಕೂ ತಳ್ಳಿದೆ. ಜನವಸತಿ ಪ್ರದೇಶಗಳಿಂದ ನೆರೆ ಇಳಿಮುಖವಾದರೂ, ಮೈದುಂಬಿ ವ್ಯಾಪ್ತಿ ಮೀರಿ ಹರಿದ ನದಿ, ಗದ್ದೆ, ತೋಟ ಎಲ್ಲವನ್ನ ಆವರಿಸಿಕೊಂಡುಬಿಟ್ಟಿದೆ. ಬೈಂದೂರು, ಬ್ರಹ್ಮಾವರ, ಕಾಪು ತಾಲೂಕಿನಲ್ಲಿ ಅತಿ ಹೆಚ್ಚು ಭತ್ತದ ಬೇಸಾಯ ಮಾಡುವ ಗದ್ದೆಗಳು ನದಿಗಳಂತಾಗಿವೆ.

ಉಡುಪಿ ಜಿಲ್ಲೆಯಲ್ಲಿ ವಾರ್ಷಿಕ 36,000 ಹೆಕ್ಟೇರ್ ಭತ್ತ ಬೆಳೆಯಲಾಗುತ್ತದೆ. ಜೂನ್ ಮತ್ತು ಜುಲೈ ತಿಂಗಳ ಮಳೆಗೆ 1500 ಹೆಕ್ಟೇರ್​ಗಿಂತ ಹೆಚ್ಚಿನ ಗದ್ದೆಗಳು ಜಲಾವೃತವಾಗಿದೆ. ಇದರಲ್ಲಿ ಬಿತ್ತಿದ ಪೈರು, ನಾಟಿ ಮಾಡಿದ, ಕೆಲ ಉಳುಮೆ ಮಾಡಿದ, ನಾಟಿಗೆ ಸಿದ್ಧವಾದ ಗದ್ದೆಗಳಿಗೆ ಮಳೆ, ನೆರೆ ನೀರು ಹರಿದು ನಷ್ಟವಾಗಿದೆ. ಬಿತ್ತನೆ ಮತ್ತು ನಾಟಿ ಮಾಡಿ 15 ರಿಂದ 20 ದಿವಸ ಕಳೆದು ಪೈರು ಜೀವ ಪಡೆಯುತ್ತಿದ್ದರೆ, ನೆರೆ ಬಂದರೂ ರೈತನಿಗೆ ಆತಂಕ ಇರುವುದಿಲ್ಲ. ಆದರೆ, ಪೈರಿನ ಮೇಲೆ ನೆರೆ ನೀರು ನಿಂತು ಸಂಪೂರ್ಣವಾಗಿ ಕೊಳೆತು ಹೋಗುತ್ತಿದೆ.

ಇದನ್ನೂ ಓದಿ:ಉಡುಪಿಯಲ್ಲಿ ನಿಲ್ಲದ ಮಳೆ, ಪಾಪಾನಾಶಿನಿ ನದಿಯಿಂದ ಊರುಗಳೊಳಗೆ ನುಗ್ಗಿದ ನೀರು

ಅದರಲ್ಲೂ ನದಿ ಪಾತ್ರದಲ್ಲಿ ಸುಮಾರು ದಿನ ನೀರು ಆವರಿಸಿರುವ ಕಾರಣ ರೈತರಿಗೆ ಬಹಳ ನಷ್ಟವಾಗಿದೆ. ಉಡುಪಿ ಜಿಲ್ಲೆಯ ಆರಂಭಿಕ ಸಮೀಕ್ಷೆಯ ನಷ್ಟಗಳನ್ನು ನೋಡುವುದಾದರೆ, ಸುಮಾರು 150 ಹೆಕ್ಟೇರ್ ಭತ್ತದ ಗದ್ದೆಯ ಪೈರು ಸಂಪೂರ್ಣ ನಾಶವಾಗಿದೆ. ಸುಮಾರು 90 ಹೆಕ್ಟೇರ್ ಗದ್ದೆಯಲ್ಲಿ ಭಾಗಶಃ ಹಾನಿಯಾಗಿದೆ. ಇಡೀ ಜಿಲ್ಲೆಯ ಪೂರ್ಣ ಲೆಕ್ಕಾಚಾರ ಇನ್ನಷ್ಟೇ ಸಿಗಬೇಕಾಗಿದೆ.

ಉಡುಪಿ ಜಿಲ್ಲೆಯಲ್ಲಿ ನೆರೆ ವೀಕ್ಷಣೆ ಮಾಡಿರುವ ಲಕ್ಷ್ಮಿ ಹೆಬ್ಬಾಳ್ಕರ್​ಗೆ, ಭತ್ತದ ಬೇಸಾಯಗಳು ಜಲಾವೃತ ಆಗಿರುವ ನೇರ ದರ್ಶನ ಆಗಿಲ್ಲ. ನೆರೆ ಸಂಪೂರ್ಣ ಇಳಿಕೆಯಾದ ನಂತರ ಜಿಲ್ಲೆಗೆ ಬಂದಿರುವುದರಿಂದ ಗುಡ್ಡ ಕುಸಿತದ, ಕಡಲ್ಕೊರೆತದ ಸಮಸ್ಯೆಯ ಪ್ರತ್ಯಕ್ಷ ದರ್ಶನವಾಗಿದೆ. ಸದ್ಯ ಒಂದು ಎರಡು ಬೆಳೆ ಮಾಡಿ ಜೀವನ ಕಟ್ಟಿಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ಸಿಗಬೇಕಾಗಿದೆ. ನೆರೆಗೆ ಪೈರು ನಾಶವಾಗಿರುವ ಬೇಸಾಯಗಾರರಿಗೆ ಕೃಷಿ ಇಲಾಖೆ ಮತ್ತೆ ಬಿತ್ತನೆ ಬೀಜವನ್ನು ಒದಗಿಸುವ ಅಗತ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು