AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಮಾತರಂ ಗೀತೆಗೆ ಅಮ್ಮ ಮತ್ತು ಮಗನ ಯಕ್ಷಗಾನ ಕುಣಿತ; ವಿಡಿಯೋ ವೈರಲ್

ಹಿರಿಯ ಭಾಗವತ ಕೊಳಗಿ ಅವರ ಹಿನ್ನೆಲೆ ಧ್ವನಿಯಲ್ಲಿ ಹಾಡಲಾಗಿರುವ ಯಕ್ಷಗಾನ ವಂದೇ ಮಾತರಂ ಹಾಡಿಗೆ, ತಾಯಿ ಮಗ ಕಲಾತ್ಮಕವಾಗಿ ಹೆಜ್ಜೆ ಹಾಕಿದ್ದಾರೆ. ಅದರಲ್ಲೂ ಸಮುದ್ರದ ದಡದಲ್ಲಿ ನಿಂತು ಕುಣಿದ ಕುಣಿತ ಎಲ್ಲರನ್ನು ಆಕರ್ಷಿಸುತ್ತಿದೆ.

ವಂದೇ ಮಾತರಂ ಗೀತೆಗೆ ಅಮ್ಮ ಮತ್ತು ಮಗನ ಯಕ್ಷಗಾನ ಕುಣಿತ; ವಿಡಿಯೋ ವೈರಲ್
ಕಡಲತೀರದಲ್ಲಿ ಯಕ್ಷಗಾನದ ಕುಣಿತ
TV9 Web
| Edited By: |

Updated on:Oct 20, 2021 | 2:20 PM

Share

ಉಡುಪಿ: ಯಕ್ಷಗಾನ ಯಾವತ್ತೂ ಪ್ರಯೋಗಗಳೊಂದಿಗೆ ಕೂಡಿಕೊಂಡಿರುವ ಕಲೆ. ಅದರಂತೆ ಅಮ್ಮ ಮತ್ತು ಮಗ ಜೋಡಿಯಾಗಿ ಯಕ್ಷಗಾನ ಮಾಡಿದ್ದು, ಸಖತ್ ಸ್ಟೆಪ್ಸ್ ಹಾಕುವ ಮೂಲಕ ವೈರಲ್ ಆಗಿದ್ದಾರೆ. ಇದೇ ಮೊದಲ ಬಾರಿಗೆ ತಾಯಿ ಮತ್ತು ಮಗ ಜೊತೆಯಾಗಿ ವಂದೇ ಮಾತರಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ವೇದಿಕೆಯಲ್ಲಿ ಯಕ್ಷಗಾನ ನಡೆಯುವುದು ಮಾಮೂಲು, ಆದರೆ ಕಡಲತೀರದಲ್ಲಿ ಯಕ್ಷಗಾನದ ಕುಣಿತ ಎಂದರೆ ಆ ಬಗೆಗಿನ ನಿರೀಕ್ಷೆಯೇ ಬೇರೆ.

ಕರಾವಳಿಯ ಕಲೆ ಹೊಸರೂಪದಲ್ಲಿ ಪ್ರಸ್ತುತ ಗೊಂಡಿದೆ. ತಾಯಿ ಭಾವನ ದೇವಾಡಿಗ ಜೊತೆ ಪುತ್ರ ಆಶಿಶ್ ದೇವಾಡಿಗ ಮನಮೋಹಕವಾಗಿ ಹೆಜ್ಜೆ ಹಾಕಿದ್ದಾರೆ. ಹಿರಿಯ ಭಾಗವತ ಕೊಳಗಿ ಅವರ ಹಿನ್ನೆಲೆ ಧ್ವನಿಯಲ್ಲಿ ಹಾಡಲಾಗಿರುವ ಯಕ್ಷಗಾನ ವಂದೇ ಮಾತರಂ ಹಾಡಿಗೆ, ತಾಯಿ ಮಗ ಕಲಾತ್ಮಕವಾಗಿ ಹೆಜ್ಜೆ ಹಾಕಿದ್ದಾರೆ. ಅದರಲ್ಲೂ ಸಮುದ್ರದ ದಡದಲ್ಲಿ ನಿಂತು ಕುಣಿದ ಕುಣಿತ ಎಲ್ಲರನ್ನು ಆಕರ್ಷಿಸುತ್ತಿದೆ.

ಪ್ರಕೃತಿಯ ಮಡಿಲಲ್ಲಿ ನಡೆದಿರುವ ಈ ಅಪೂರ್ವ ದೃಶ್ಯಾವಳಿಗಳು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಯಕ್ಷಗಾನದ ಅಪರೂಪದ ಹೆಜ್ಜೆ ಗಾರಿಕೆಯನ್ನು, ಈ ದೃಶ್ಯಾವಳಿಗಳಲ್ಲಿ ನೋಡಬಹುದು. ಮಗನಿಗೆ ಸ್ಪರ್ಧೆ ನೀಡುವ ರೀತಿಯಲ್ಲಿ, ಕುಣಿದ ತಾಯಿಯಂತೂ ಎಲ್ಲರ ಗಮನಸೆಳೆಯುತ್ತಿದ್ದಾರೆ. ಈ ಮೂಲಕ ದೇಶಭಕ್ತಿ ಗೀತೆಯೊಂದು ಹೊಸ ರೂಪದಲ್ಲಿ ಜನರ ಮುಂದೆ ಪ್ರಸ್ತುತ ಗೊಂಡಿದೆ.

ವರದಿ: ಹರೀಶ್ ಪಾಲೇಚ್ಚಾರ್

ಇದನ್ನೂ ಓದಿ: ಹಾಸನ: ಸಮವಸ್ತ್ರದಲ್ಲೇ ಪೊಲೀಸರ ಎಣ್ಣೆ ಪಾರ್ಟಿ; ವಿಡಿಯೋ ವೈರಲ್​

Viral Video: ತಲೆ ಕೂದಲಿನಲ್ಲಿಯೇ ವಾಹನವನ್ನು ಎಳೆದು ತಂದ ಯುವತಿ! ಶಾಕಿಂಗ್ ವಿಡಿಯೋ ವೈರಲ್​

Published On - 12:38 pm, Wed, 20 October 21

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ